Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ಸ್ಮೃತಿ ಇರಾನಿ..! ಮಿಸ್ ಇಂಡಿಯಾದಿಂದ ರಾಜಕೀಯ ಜೀವನ!!
ಸ್ಮೃತಿ ಇರಾನಿ ಕೇಂದ್ರ ಸಚಿವೆಯಾಗಿ ಯಶಸ್ವಿ ಆಡಳಿತ ನಡೆಸಿದ ಮಹಿಳಾ ರಾಜಕಾರಣಿ. ಅದ್ರಲ್ಲೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸ್ಪರ್ಧಿಸಿ ಜಯ ದಾಖಲಿಸಿದ್ದ ನಾಯಕಿ. ಹೀಗಾಗಿ ಸ್ಮೃತಿ ಇರಾನಿ ಅವರಿಗೆ ಪಕ್ಷದಲ್ಲೂ ಉತ್ತಮ ಹುದ್ದೆಗಳು ಒಲಿದು ಬಂದವು. ಇನ್ನು ಅವರು ರಾಜಕೀಯಕ್ಕೆ ಬರುವ ಮುನ್ನ ಸಿನಿಮಾ ರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದರು ಎಂಬುದು ನಿಮಗೆ ಗೊತ್ತಾ?
ಸ್ಮೃತಿ ಇರಾನಿ ವೃತ್ತಿಯಲ್ಲಿ ನಟಿಯಾಗಿ ಮೊದಲು ಪರಿಚಯವಾಗಿದ್ದವರು, ಬಳಿಕ ರಾಜಕೀಯ ನಂಟು ಬೆಳೆಸಿಕೊಂಡು ಚುನಾವಣೆಗೆ ಧುಮುಕಿದ್ದವರು. ಸದ್ಯ ಈಗ ಮತ್ತೆ ಅವರು ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು, ಮತ್ತೆ ಈಗ ಧಾರಾವಾಹಿಯಲ್ಲಿ ಮಿಂಚಲು ಮುಂದಾಗಿದ್ದಾರೆ. ಸ್ಮೃತಿ ಇರಾನಿ ಅವರ 'ಕ್ಯೂಂಕಿ ಸಾಸ್ ಬಿ ಕಭಿ ಬಹು ಥಿ ಸೀಸನ್ -2 ಧಾರವಾಹಿಯ ತುಳಸಿ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ.

ಈ ಧಾರಾವಾಹಿಯಲ್ಲಿನ ತುಳಸಿ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಸ್ಮೃತಿ ಇರಾನಿಯ ಹೊಸ ಅವತಾರ ನೋಡಿ ಎಲ್ಲರಿಗೂ ಅಚ್ಚರಿಯಾಗಿದೆ. ಕಿರುತೆರೆಯ ಕ್ವೀನ್ ಎಂದೇ ಹೆಸರಾಗಿರುವ ಏಕ್ತಾ ಕಪೂರ್ ಅವರ ಬ್ಯಾನರ್ನಲ್ಲಿ ಈ ಧಾರಾವಾಹಿ ಮೂಡಿ ಬರುತ್ತಿದೆ. ಈ ಧಾರವಾಹಿಯ ಪ್ರಮುಖ ಪಾತ್ರದಲ್ಲಿ ಸ್ಮೃತಿ ಇರಾನಿ ನಟಿಸಲಿದ್ದಾರೆ.
ಮಿಸ್ ಇಂಡಿಯಾ ಫೈನಲ್ಗೆ ಲಗ್ಗೆ ಇಟ್ಟಿದ್ದ ಸ್ಮೃತಿ ಇರಾನಿ
ಸ್ಮೃತಿ ಇರಾನಿಯನ್ನು ನೀವು ರಾಜಕೀಯದಲ್ಲಿ ಮಾತ್ರ ನೋಡಿರಬಹುದು, ಆದ್ರೆ ಅವರು ಈ ಕ್ಷೇತ್ರಕ್ಕೆ ಆಗಮಿಸುವ ಮೊದಲು ಮಾಡೆಲಿಂಗ್ನಲ್ಲಿ ತೊಡಗಿಸಿಕೊಂಡವರು. ಚಿಕ್ಕ ವಯಸ್ಸಿನಲ್ಲಿಯೇ ಮುಂಬೈಗೆ ಆಗಮಿಸಿದ್ದ ಅವರು, ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟರು. 1998ರಲ್ಲಿ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗಿಯಾದ ಅವರು ಫೈನಲ್ ಹಂತ ತಲುಪಿದ್ದರು.
ಈ ಸ್ಪರ್ಧೆಯ ಬಳಿಕ ಅವರು ಜಾಹೀರಾತುಗಳಲ್ಲಿ ಕಾಣಿಸಿಕೊಂಡರು, ಹಾಗೆ ಕಿರುತೆರೆಗೂ ಕಾಲಿಟ್ಟರು. ಸ್ಮೃತಿ ಇರಾನಿ ನಟನಾ ಆಡಿಷನ್ ಅನ್ನು ಭೇದಿಸಿ ಏಕ್ತಾ ಕಪೂರ್ ಅವರ ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿಯ ಧಾರಾವಾಹಿಯಲ್ಲಿ ನಾಯಕಿಯಾಗಿ ಮೊದಲ ಬಾರಿಗೆ ಬಣ್ಣ ಹಚ್ಚಿದ್ದರು. ಇದೇ ಧಾರಾವಾಹಿ ವರ್ಷಗಳ ಕಾಲ ಮುಂದುವರೆದಿತ್ತು. ಅದರಲ್ಲಿನ ತುಳಸಿ ಪಾತ್ರ ಎಲ್ಲರ ಮನಗೆದ್ದಿತ್ತು. ಸ್ಮೃತಿ ಇರಾನಿಯನ್ನು ಎಲ್ಲರು ತುಳಸಿ ಎಂದೇ ಕರೆಯುವಷ್ಟು ಫೇಮಸ್ ಆಗಿದ್ದರು.
2001 ರಿಂದ 2005 ರವರೆಗೆ ಭಾರತೀಯ ದೂರದರ್ಶನ ಅಕಾಡೆಮಿಯಿಂದ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. 2000 ರ ದಶಕದಲ್ಲಿ ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ ಚಿತ್ರದಲ್ಲಿ ತುಳಸಿ ಪಾತ್ರಕ್ಕಾಗಿ ಅವರು ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರು ನಟನೆಯಲ್ಲಿದ್ದಾಗಲೇ ಚುನಾವಣೆ ಸ್ಪರ್ಧಿಸಿದರು. ಆದ್ರೆ ಚುನಾವಣೆ ಗೆಲ್ಲುವ ವಿಶ್ವಾದ ಇಲ್ಲದೇ ಇದ್ದ ಕಾರಣ ಧಾರಾವಾಹಿಯನ್ನು ಮಾಡುತ್ತಿದ್ದರು, ಆದ್ರೆ ಚುನಾವಣೆಯಲ್ಲಿ ಗೆದ್ದ ಬಳಿಕ ಈ ಧಾರಾವಾಹಿಯಿಂದ ಹೊರ ನಡೆದರು.
ಸದ್ಯ ಈಗ ಮತ್ತೆ ಈ ಧಾರಾವಾಹಿಯ 2ನೇ ಭಾಗ ಆರಂಭವಾಗುತ್ತಿದ್ದು ಮತ್ತೆ ತುಳಸಿ ಪಾತ್ರದಲ್ಲಿ ಸ್ಮೃತಿ ಇರಾನಿ ನಟಿಸುತ್ತಿದ್ದಾರೆ. ಈಗ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದಾಡುತ್ತಿದ್ದು ವೈರಲ್ ಆಗುತ್ತಿದೆ. ಹಾಗೆ ಸ್ಮೃತಿ ಇರಾನಿಯನ್ನು ಈ ರೂಪದಲ್ಲಿ ಕಂಡು ಜನರು ಕೂಡ ಅಚ್ಚರಿಗೊಳಗಾಗಿದ್ದಾರೆ.
ರಾಜಕೀಯಕ್ಕೆ ಎಂಟ್ರಿ ಕೊಟ್ಟ ಬಳಿಕ ಅವರು ಜವಳಿ ಸಚಿವೆ, ಮಾಹಿತಿ ಮತ್ತು ಪ್ರಸಾರ ಸಚಿವೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾಗಿ ಹಾಗೆ ಅಲ್ಪಸಂಖ್ಯಾತ ಯವಹಾರಗಳ ಸಚಿವೆಯಾಗಿಯೂ ಸೇವೆ ಸಲ್ಲಿಸಿದ್ದಾರೆ.



Click it and Unblock the Notifications