Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ಸ್ಮೃತಿ ಇರಾನಿ..! ಮಿಸ್ ಇಂಡಿಯಾದಿಂದ ರಾಜಕೀಯ ಜೀವನ!!
ಸ್ಮೃತಿ ಇರಾನಿ ಕೇಂದ್ರ ಸಚಿವೆಯಾಗಿ ಯಶಸ್ವಿ ಆಡಳಿತ ನಡೆಸಿದ ಮಹಿಳಾ ರಾಜಕಾರಣಿ. ಅದ್ರಲ್ಲೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸ್ಪರ್ಧಿಸಿ ಜಯ ದಾಖಲಿಸಿದ್ದ ನಾಯಕಿ. ಹೀಗಾಗಿ ಸ್ಮೃತಿ ಇರಾನಿ ಅವರಿಗೆ ಪಕ್ಷದಲ್ಲೂ ಉತ್ತಮ ಹುದ್ದೆಗಳು ಒಲಿದು ಬಂದವು. ಇನ್ನು ಅವರು ರಾಜಕೀಯಕ್ಕೆ ಬರುವ ಮುನ್ನ ಸಿನಿಮಾ ರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದರು ಎಂಬುದು ನಿಮಗೆ ಗೊತ್ತಾ?
ಸ್ಮೃತಿ ಇರಾನಿ ವೃತ್ತಿಯಲ್ಲಿ ನಟಿಯಾಗಿ ಮೊದಲು ಪರಿಚಯವಾಗಿದ್ದವರು, ಬಳಿಕ ರಾಜಕೀಯ ನಂಟು ಬೆಳೆಸಿಕೊಂಡು ಚುನಾವಣೆಗೆ ಧುಮುಕಿದ್ದವರು. ಸದ್ಯ ಈಗ ಮತ್ತೆ ಅವರು ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು, ಮತ್ತೆ ಈಗ ಧಾರಾವಾಹಿಯಲ್ಲಿ ಮಿಂಚಲು ಮುಂದಾಗಿದ್ದಾರೆ. ಸ್ಮೃತಿ ಇರಾನಿ ಅವರ 'ಕ್ಯೂಂಕಿ ಸಾಸ್ ಬಿ ಕಭಿ ಬಹು ಥಿ ಸೀಸನ್ -2 ಧಾರವಾಹಿಯ ತುಳಸಿ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ.

ಈ ಧಾರಾವಾಹಿಯಲ್ಲಿನ ತುಳಸಿ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಸ್ಮೃತಿ ಇರಾನಿಯ ಹೊಸ ಅವತಾರ ನೋಡಿ ಎಲ್ಲರಿಗೂ ಅಚ್ಚರಿಯಾಗಿದೆ. ಕಿರುತೆರೆಯ ಕ್ವೀನ್ ಎಂದೇ ಹೆಸರಾಗಿರುವ ಏಕ್ತಾ ಕಪೂರ್ ಅವರ ಬ್ಯಾನರ್ನಲ್ಲಿ ಈ ಧಾರಾವಾಹಿ ಮೂಡಿ ಬರುತ್ತಿದೆ. ಈ ಧಾರವಾಹಿಯ ಪ್ರಮುಖ ಪಾತ್ರದಲ್ಲಿ ಸ್ಮೃತಿ ಇರಾನಿ ನಟಿಸಲಿದ್ದಾರೆ.
ಮಿಸ್ ಇಂಡಿಯಾ ಫೈನಲ್ಗೆ ಲಗ್ಗೆ ಇಟ್ಟಿದ್ದ ಸ್ಮೃತಿ ಇರಾನಿ
ಸ್ಮೃತಿ ಇರಾನಿಯನ್ನು ನೀವು ರಾಜಕೀಯದಲ್ಲಿ ಮಾತ್ರ ನೋಡಿರಬಹುದು, ಆದ್ರೆ ಅವರು ಈ ಕ್ಷೇತ್ರಕ್ಕೆ ಆಗಮಿಸುವ ಮೊದಲು ಮಾಡೆಲಿಂಗ್ನಲ್ಲಿ ತೊಡಗಿಸಿಕೊಂಡವರು. ಚಿಕ್ಕ ವಯಸ್ಸಿನಲ್ಲಿಯೇ ಮುಂಬೈಗೆ ಆಗಮಿಸಿದ್ದ ಅವರು, ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟರು. 1998ರಲ್ಲಿ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗಿಯಾದ ಅವರು ಫೈನಲ್ ಹಂತ ತಲುಪಿದ್ದರು.
ಈ ಸ್ಪರ್ಧೆಯ ಬಳಿಕ ಅವರು ಜಾಹೀರಾತುಗಳಲ್ಲಿ ಕಾಣಿಸಿಕೊಂಡರು, ಹಾಗೆ ಕಿರುತೆರೆಗೂ ಕಾಲಿಟ್ಟರು. ಸ್ಮೃತಿ ಇರಾನಿ ನಟನಾ ಆಡಿಷನ್ ಅನ್ನು ಭೇದಿಸಿ ಏಕ್ತಾ ಕಪೂರ್ ಅವರ ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿಯ ಧಾರಾವಾಹಿಯಲ್ಲಿ ನಾಯಕಿಯಾಗಿ ಮೊದಲ ಬಾರಿಗೆ ಬಣ್ಣ ಹಚ್ಚಿದ್ದರು. ಇದೇ ಧಾರಾವಾಹಿ ವರ್ಷಗಳ ಕಾಲ ಮುಂದುವರೆದಿತ್ತು. ಅದರಲ್ಲಿನ ತುಳಸಿ ಪಾತ್ರ ಎಲ್ಲರ ಮನಗೆದ್ದಿತ್ತು. ಸ್ಮೃತಿ ಇರಾನಿಯನ್ನು ಎಲ್ಲರು ತುಳಸಿ ಎಂದೇ ಕರೆಯುವಷ್ಟು ಫೇಮಸ್ ಆಗಿದ್ದರು.
2001 ರಿಂದ 2005 ರವರೆಗೆ ಭಾರತೀಯ ದೂರದರ್ಶನ ಅಕಾಡೆಮಿಯಿಂದ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. 2000 ರ ದಶಕದಲ್ಲಿ ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ ಚಿತ್ರದಲ್ಲಿ ತುಳಸಿ ಪಾತ್ರಕ್ಕಾಗಿ ಅವರು ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರು ನಟನೆಯಲ್ಲಿದ್ದಾಗಲೇ ಚುನಾವಣೆ ಸ್ಪರ್ಧಿಸಿದರು. ಆದ್ರೆ ಚುನಾವಣೆ ಗೆಲ್ಲುವ ವಿಶ್ವಾದ ಇಲ್ಲದೇ ಇದ್ದ ಕಾರಣ ಧಾರಾವಾಹಿಯನ್ನು ಮಾಡುತ್ತಿದ್ದರು, ಆದ್ರೆ ಚುನಾವಣೆಯಲ್ಲಿ ಗೆದ್ದ ಬಳಿಕ ಈ ಧಾರಾವಾಹಿಯಿಂದ ಹೊರ ನಡೆದರು.
ಸದ್ಯ ಈಗ ಮತ್ತೆ ಈ ಧಾರಾವಾಹಿಯ 2ನೇ ಭಾಗ ಆರಂಭವಾಗುತ್ತಿದ್ದು ಮತ್ತೆ ತುಳಸಿ ಪಾತ್ರದಲ್ಲಿ ಸ್ಮೃತಿ ಇರಾನಿ ನಟಿಸುತ್ತಿದ್ದಾರೆ. ಈಗ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದಾಡುತ್ತಿದ್ದು ವೈರಲ್ ಆಗುತ್ತಿದೆ. ಹಾಗೆ ಸ್ಮೃತಿ ಇರಾನಿಯನ್ನು ಈ ರೂಪದಲ್ಲಿ ಕಂಡು ಜನರು ಕೂಡ ಅಚ್ಚರಿಗೊಳಗಾಗಿದ್ದಾರೆ.
ರಾಜಕೀಯಕ್ಕೆ ಎಂಟ್ರಿ ಕೊಟ್ಟ ಬಳಿಕ ಅವರು ಜವಳಿ ಸಚಿವೆ, ಮಾಹಿತಿ ಮತ್ತು ಪ್ರಸಾರ ಸಚಿವೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾಗಿ ಹಾಗೆ ಅಲ್ಪಸಂಖ್ಯಾತ ಯವಹಾರಗಳ ಸಚಿವೆಯಾಗಿಯೂ ಸೇವೆ ಸಲ್ಲಿಸಿದ್ದಾರೆ.



Click it and Unblock the Notifications