Latest Updates
-
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್
ದೀಪಾವಳಿ ಮಾರನೇಯ ದಿನವೇ ಸೋಮಾವತಿ ಅಮವಾಸ್ಯೆ: ಸಂಜೆ ಈ ಪರಿಹಾರ ಮಾಡಿದರೆ ಕಷ್ಟಗಳು ದೂರಾಗುವುದು
ದೀಪಾವಳಿಯ ಮಾರನೆಯ ದಿನ ಸೋಮಾವತಿ ಅಮವಾಸ್ಯೆ ಬಂದಿದೆ. ಸೋಮಾವತಿ ಅಮವಾಸ್ಯೆಗೆ ತುಂಬಾನೇ ಪ್ರಾಮುಖ್ಯತೆ ಇದೆ. ಈ ಸೋಮಾವತಿ ಅಮವಾಸ್ಯೆಯಂದು ಮಾಡುವ ದಾನಕ್ಕೆ ತುಂಬಾನೇ ಮಹತ್ವವಿದೆ. ಈ ಅಮವಾಸ್ಯೆಯಂದು ದಾನ ಮಾಡುವುದರಿಂದ ಕಷ್ಟಗಳು, ಅನಾರೋಗ್ಯಗಳಿಂದ ಪಾರಾಗಬಹುದು ಎಂದು ಹೇಳಲಾಗುವುದು. ಈ ಸೋಮಾವತಿ ಅಮವಾಸ್ಯೆಯಂದು ಸಂಜೆ ಈ ಪರಿಹಾರ ಮಾಡಿ:

* ಸಂಜೆ ಹೊತ್ತು ತುಳಸಿಗೆ ಪೂಜೆ ಸಲ್ಲಿಸಿ 108 ಬಾರಿ ಪ್ರದಕ್ಷಣೆ ಹಾಕಿ. ಲಕ್ಷ್ಮಿ, ವಿಷ್ಣು ಮಂತ್ರಗಳನ್ನು ಹೇಳುತ್ತಾ ತುಳಸಿಯ ಸುತ್ತ ಪ್ರದಕ್ಷಣೆ ಹಾಕಿ, ಹೀಗೆ ಮಾಡುವುದರಿಂದ ಆರ್ಥಿಕ ಸಂಕಷ್ಟಗಳು ದೂರಾಗುವುದು.
* ಈ ದಿನ ಆಲದ ಮರದ ಕೆಳಗಡೆ ಹಣತೆ ದೀಪವನ್ನು ಹಚ್ಚಿ, 108 ಬಗೆಯ ಹಣ್ಣುಗಳನ್ನು ಇರಿಸಿ, ಆಲದ ಮರದ ಸುತ್ತ 108 ಬಾರಿ ಸುತ್ತು ಬನ್ನಿ. ಹೀಗೆ ಸುತ್ತು ಬರುವಾಗ 8 ಬಾರಿ ಹಸಿ ನೂಲನ್ನು ಮರಕ್ಕೆ ಸುತ್ತಬೇಕು. ಪೂಜೆಯ ಬಳಿಹ ಹಣ್ಣುಗಳನ್ನು ಬ್ರಾಹ್ಮಣರಿಗೆ ದಾನ ಮಾಡಿ.
ಉದ್ಯೋಗ ತೊಂದರೆಗಳು ನೀಗಲು
ಸೋಮಾವತಿ ಅಮಾವಾಸ್ಯೆಯಂದು ನಿಂಬೆ ಹಣ್ಣನ್ನು 7 ಸುತ್ತು ನಿಮ್ಮ ತಲೆಗೆ ಸುತ್ತಿ ನಂತರ ಅದನ್ನು ನಾಲ್ಕು ಭಾಗಗಳನ್ನಾಗಿ ಕತ್ತರಿಸಿ, ನಾಲ್ಕು ದಿಕ್ಕಿಗೆ ಹಾಕಿ, ಹೀಗೆ ಮಾಡುವುದರಿಂದ ಉದ್ಯೋಗ ಅವಕಾಶಗಳು ಹುಡುಕಿ ಬರುವುದು.
ಮನೆಯ ಸಮೃದ್ಧಿ ಹೆಚ್ಚಾಗಲು
ಸೋಮಾವತಿ ಅಮಾವಾಸ್ಯೆಯ ಸಂಜೆ ಮನೆಯ ಈಶಾನ್ಯ ಮೂಲೆಯಲ್ಲಿ ತುಪ್ಪದ ದೀಪವನ್ನು ಹಚ್ಚಬೇಕು. ಆ ದೀಪದಲ್ಲಿ ಕೆಂಪು ಬಣ್ಣದ ದಾರದ ಬತ್ತಿಯನ್ನು ಹಾಕಿ ಅದರಲ್ಲಿ ಸ್ವಲ್ಪ ಕುಂಕುಮವನ್ನು ಹಾಕಿ. ಹೀಗೆ ಮಾಡುವುದರಿಂದ ಲಕ್ಷ್ಮಿ ದೇವಿಯು ಪ್ರಸನ್ನಳಾಗುತ್ತಾಳೆ. ಹೀಗೆ ಮಾಡುವುದರಿಂದ ಮನೆಯ ಸಂಪತ್ತು ಹೆಚ್ಚಾಗುವುದು.
ದುಃಖ ದೂರಾಗಲು
ಸೋಮಾವತಿ ಅಮಾವಾಸ್ಯೆಯ ದಿನ ಗೋಧಿ ಹಿಟ್ಟಿನಲ್ಲಿ ಸ್ವಲ್ಪ ಸಕ್ಕರೆ ಬೆರೆಸಿ. ಅದನ್ನು ಕಪ್ಪು ಇರುವೆಗಳಿಗೆ ತಿನ್ನಿಸಿ. ಹೀಗೆ ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ, ಹೀಗೆ ಮಾಡುವುದರಿಂದ ದುಃಖ, ಸಂಕಟ ಇವೆಲ್ಲಾ ದೂರಾಗುವುದು.



Click it and Unblock the Notifications