Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದೀಪಾವಳಿ ಮಾರನೇಯ ದಿನವೇ ಸೋಮಾವತಿ ಅಮವಾಸ್ಯೆ: ಸಂಜೆ ಈ ಪರಿಹಾರ ಮಾಡಿದರೆ ಕಷ್ಟಗಳು ದೂರಾಗುವುದು
ದೀಪಾವಳಿಯ ಮಾರನೆಯ ದಿನ ಸೋಮಾವತಿ ಅಮವಾಸ್ಯೆ ಬಂದಿದೆ. ಸೋಮಾವತಿ ಅಮವಾಸ್ಯೆಗೆ ತುಂಬಾನೇ ಪ್ರಾಮುಖ್ಯತೆ ಇದೆ. ಈ ಸೋಮಾವತಿ ಅಮವಾಸ್ಯೆಯಂದು ಮಾಡುವ ದಾನಕ್ಕೆ ತುಂಬಾನೇ ಮಹತ್ವವಿದೆ. ಈ ಅಮವಾಸ್ಯೆಯಂದು ದಾನ ಮಾಡುವುದರಿಂದ ಕಷ್ಟಗಳು, ಅನಾರೋಗ್ಯಗಳಿಂದ ಪಾರಾಗಬಹುದು ಎಂದು ಹೇಳಲಾಗುವುದು. ಈ ಸೋಮಾವತಿ ಅಮವಾಸ್ಯೆಯಂದು ಸಂಜೆ ಈ ಪರಿಹಾರ ಮಾಡಿ:

* ಸಂಜೆ ಹೊತ್ತು ತುಳಸಿಗೆ ಪೂಜೆ ಸಲ್ಲಿಸಿ 108 ಬಾರಿ ಪ್ರದಕ್ಷಣೆ ಹಾಕಿ. ಲಕ್ಷ್ಮಿ, ವಿಷ್ಣು ಮಂತ್ರಗಳನ್ನು ಹೇಳುತ್ತಾ ತುಳಸಿಯ ಸುತ್ತ ಪ್ರದಕ್ಷಣೆ ಹಾಕಿ, ಹೀಗೆ ಮಾಡುವುದರಿಂದ ಆರ್ಥಿಕ ಸಂಕಷ್ಟಗಳು ದೂರಾಗುವುದು.
* ಈ ದಿನ ಆಲದ ಮರದ ಕೆಳಗಡೆ ಹಣತೆ ದೀಪವನ್ನು ಹಚ್ಚಿ, 108 ಬಗೆಯ ಹಣ್ಣುಗಳನ್ನು ಇರಿಸಿ, ಆಲದ ಮರದ ಸುತ್ತ 108 ಬಾರಿ ಸುತ್ತು ಬನ್ನಿ. ಹೀಗೆ ಸುತ್ತು ಬರುವಾಗ 8 ಬಾರಿ ಹಸಿ ನೂಲನ್ನು ಮರಕ್ಕೆ ಸುತ್ತಬೇಕು. ಪೂಜೆಯ ಬಳಿಹ ಹಣ್ಣುಗಳನ್ನು ಬ್ರಾಹ್ಮಣರಿಗೆ ದಾನ ಮಾಡಿ.
ಉದ್ಯೋಗ ತೊಂದರೆಗಳು ನೀಗಲು
ಸೋಮಾವತಿ ಅಮಾವಾಸ್ಯೆಯಂದು ನಿಂಬೆ ಹಣ್ಣನ್ನು 7 ಸುತ್ತು ನಿಮ್ಮ ತಲೆಗೆ ಸುತ್ತಿ ನಂತರ ಅದನ್ನು ನಾಲ್ಕು ಭಾಗಗಳನ್ನಾಗಿ ಕತ್ತರಿಸಿ, ನಾಲ್ಕು ದಿಕ್ಕಿಗೆ ಹಾಕಿ, ಹೀಗೆ ಮಾಡುವುದರಿಂದ ಉದ್ಯೋಗ ಅವಕಾಶಗಳು ಹುಡುಕಿ ಬರುವುದು.
ಮನೆಯ ಸಮೃದ್ಧಿ ಹೆಚ್ಚಾಗಲು
ಸೋಮಾವತಿ ಅಮಾವಾಸ್ಯೆಯ ಸಂಜೆ ಮನೆಯ ಈಶಾನ್ಯ ಮೂಲೆಯಲ್ಲಿ ತುಪ್ಪದ ದೀಪವನ್ನು ಹಚ್ಚಬೇಕು. ಆ ದೀಪದಲ್ಲಿ ಕೆಂಪು ಬಣ್ಣದ ದಾರದ ಬತ್ತಿಯನ್ನು ಹಾಕಿ ಅದರಲ್ಲಿ ಸ್ವಲ್ಪ ಕುಂಕುಮವನ್ನು ಹಾಕಿ. ಹೀಗೆ ಮಾಡುವುದರಿಂದ ಲಕ್ಷ್ಮಿ ದೇವಿಯು ಪ್ರಸನ್ನಳಾಗುತ್ತಾಳೆ. ಹೀಗೆ ಮಾಡುವುದರಿಂದ ಮನೆಯ ಸಂಪತ್ತು ಹೆಚ್ಚಾಗುವುದು.
ದುಃಖ ದೂರಾಗಲು
ಸೋಮಾವತಿ ಅಮಾವಾಸ್ಯೆಯ ದಿನ ಗೋಧಿ ಹಿಟ್ಟಿನಲ್ಲಿ ಸ್ವಲ್ಪ ಸಕ್ಕರೆ ಬೆರೆಸಿ. ಅದನ್ನು ಕಪ್ಪು ಇರುವೆಗಳಿಗೆ ತಿನ್ನಿಸಿ. ಹೀಗೆ ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ, ಹೀಗೆ ಮಾಡುವುದರಿಂದ ದುಃಖ, ಸಂಕಟ ಇವೆಲ್ಲಾ ದೂರಾಗುವುದು.



Click it and Unblock the Notifications