Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ದೀಪಾವಳಿ ಮಾರನೇಯ ದಿನವೇ ಸೋಮಾವತಿ ಅಮವಾಸ್ಯೆ: ಸಂಜೆ ಈ ಪರಿಹಾರ ಮಾಡಿದರೆ ಕಷ್ಟಗಳು ದೂರಾಗುವುದು
ದೀಪಾವಳಿಯ ಮಾರನೆಯ ದಿನ ಸೋಮಾವತಿ ಅಮವಾಸ್ಯೆ ಬಂದಿದೆ. ಸೋಮಾವತಿ ಅಮವಾಸ್ಯೆಗೆ ತುಂಬಾನೇ ಪ್ರಾಮುಖ್ಯತೆ ಇದೆ. ಈ ಸೋಮಾವತಿ ಅಮವಾಸ್ಯೆಯಂದು ಮಾಡುವ ದಾನಕ್ಕೆ ತುಂಬಾನೇ ಮಹತ್ವವಿದೆ. ಈ ಅಮವಾಸ್ಯೆಯಂದು ದಾನ ಮಾಡುವುದರಿಂದ ಕಷ್ಟಗಳು, ಅನಾರೋಗ್ಯಗಳಿಂದ ಪಾರಾಗಬಹುದು ಎಂದು ಹೇಳಲಾಗುವುದು. ಈ ಸೋಮಾವತಿ ಅಮವಾಸ್ಯೆಯಂದು ಸಂಜೆ ಈ ಪರಿಹಾರ ಮಾಡಿ:

* ಸಂಜೆ ಹೊತ್ತು ತುಳಸಿಗೆ ಪೂಜೆ ಸಲ್ಲಿಸಿ 108 ಬಾರಿ ಪ್ರದಕ್ಷಣೆ ಹಾಕಿ. ಲಕ್ಷ್ಮಿ, ವಿಷ್ಣು ಮಂತ್ರಗಳನ್ನು ಹೇಳುತ್ತಾ ತುಳಸಿಯ ಸುತ್ತ ಪ್ರದಕ್ಷಣೆ ಹಾಕಿ, ಹೀಗೆ ಮಾಡುವುದರಿಂದ ಆರ್ಥಿಕ ಸಂಕಷ್ಟಗಳು ದೂರಾಗುವುದು.
* ಈ ದಿನ ಆಲದ ಮರದ ಕೆಳಗಡೆ ಹಣತೆ ದೀಪವನ್ನು ಹಚ್ಚಿ, 108 ಬಗೆಯ ಹಣ್ಣುಗಳನ್ನು ಇರಿಸಿ, ಆಲದ ಮರದ ಸುತ್ತ 108 ಬಾರಿ ಸುತ್ತು ಬನ್ನಿ. ಹೀಗೆ ಸುತ್ತು ಬರುವಾಗ 8 ಬಾರಿ ಹಸಿ ನೂಲನ್ನು ಮರಕ್ಕೆ ಸುತ್ತಬೇಕು. ಪೂಜೆಯ ಬಳಿಹ ಹಣ್ಣುಗಳನ್ನು ಬ್ರಾಹ್ಮಣರಿಗೆ ದಾನ ಮಾಡಿ.
ಉದ್ಯೋಗ ತೊಂದರೆಗಳು ನೀಗಲು
ಸೋಮಾವತಿ ಅಮಾವಾಸ್ಯೆಯಂದು ನಿಂಬೆ ಹಣ್ಣನ್ನು 7 ಸುತ್ತು ನಿಮ್ಮ ತಲೆಗೆ ಸುತ್ತಿ ನಂತರ ಅದನ್ನು ನಾಲ್ಕು ಭಾಗಗಳನ್ನಾಗಿ ಕತ್ತರಿಸಿ, ನಾಲ್ಕು ದಿಕ್ಕಿಗೆ ಹಾಕಿ, ಹೀಗೆ ಮಾಡುವುದರಿಂದ ಉದ್ಯೋಗ ಅವಕಾಶಗಳು ಹುಡುಕಿ ಬರುವುದು.
ಮನೆಯ ಸಮೃದ್ಧಿ ಹೆಚ್ಚಾಗಲು
ಸೋಮಾವತಿ ಅಮಾವಾಸ್ಯೆಯ ಸಂಜೆ ಮನೆಯ ಈಶಾನ್ಯ ಮೂಲೆಯಲ್ಲಿ ತುಪ್ಪದ ದೀಪವನ್ನು ಹಚ್ಚಬೇಕು. ಆ ದೀಪದಲ್ಲಿ ಕೆಂಪು ಬಣ್ಣದ ದಾರದ ಬತ್ತಿಯನ್ನು ಹಾಕಿ ಅದರಲ್ಲಿ ಸ್ವಲ್ಪ ಕುಂಕುಮವನ್ನು ಹಾಕಿ. ಹೀಗೆ ಮಾಡುವುದರಿಂದ ಲಕ್ಷ್ಮಿ ದೇವಿಯು ಪ್ರಸನ್ನಳಾಗುತ್ತಾಳೆ. ಹೀಗೆ ಮಾಡುವುದರಿಂದ ಮನೆಯ ಸಂಪತ್ತು ಹೆಚ್ಚಾಗುವುದು.
ದುಃಖ ದೂರಾಗಲು
ಸೋಮಾವತಿ ಅಮಾವಾಸ್ಯೆಯ ದಿನ ಗೋಧಿ ಹಿಟ್ಟಿನಲ್ಲಿ ಸ್ವಲ್ಪ ಸಕ್ಕರೆ ಬೆರೆಸಿ. ಅದನ್ನು ಕಪ್ಪು ಇರುವೆಗಳಿಗೆ ತಿನ್ನಿಸಿ. ಹೀಗೆ ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ, ಹೀಗೆ ಮಾಡುವುದರಿಂದ ದುಃಖ, ಸಂಕಟ ಇವೆಲ್ಲಾ ದೂರಾಗುವುದು.



Click it and Unblock the Notifications