Latest Updates
-
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ!
ಕೇರಳ ತಲುಪಿದ ಮಾನ್ಸೂನ್..! ಜೂನ್ 6ಕ್ಕೆ ರಾಜ್ಯಕ್ಕೆ ಎಂಟ್ರಿ ಸಾಧ್ಯತೆ..!
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಆರಂಭಗೊಂಡು ಬಹುಪಾಲು ಕಡೆಗಳಲ್ಲಿ ಮಳೆಯಾಗಿದೆ. ಮುಂದಿನ ದಿನದಲ್ಲೂ ಉತ್ತಮ ಮಳೆಯಾಗುವ ಮುನ್ಸೂಚನೆಯಂತು ಸಿಕ್ಕಿದೆ. ಸದ್ಯ ಮಾನ್ಸೂನ್ ಮಾರುತಗಳು ಭಾರತಕ್ಕೆ ಪ್ರವೇಶ ಪಡೆದಿದ್ದು, ಈ ಬಾರಿ ಸಕಾಲದಲ್ಲಿ ಮಳೆಗಾಲ ಆರಂಭವಾಗುವ ಸೂಚನೆ ಸಿಕ್ಕಿದೆ.
ಈಗಾಗಲೇ ಮಾನ್ಸೂನ್ ಮಾರುತಗಳು ಕೇರಳ ಕರಾವಳಿ ತಲುಪಿ ಭಾರೀ ಮಳೆಗೆ ಕಾರಣವಾಗಿದೆ. ಕೇರಳದ ಕರಾವಳಿ ಹಾಗೂ ಒಳನಾಡು ಭಾಗದಲ್ಲಿ ಭರ್ಜರಿ ಮಳೆಯಾಗುತ್ತಿದೆ. ಹೀಗಾಗಿ ಕೇರಳದ ಬಳಿಕ ಕರ್ನಾಟಕಕ್ಕೆ ಮಾನ್ಸೂನ್ ಮಾರುತಗಳು ಎಂಟ್ರಿ ಕೊಡಲಿವೆ. ಈ ಬಾರಿ ಈ ಮಾರುತಗಳು ಜೂನ್ 6 ಅಥವಾ 7ರಂದು ರಾಜ್ಯ ಪ್ರವೇಶಿಸಲಿದೆ.

ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಏಳು ದಿನಗಳ ಕಾಲ ಗುಡುಗು ಸಹಿತ ಪೂರ್ವ ಮುಂಗಾರು ಮಳೆಯಾಗಲಿದ್ದು, ಹಾಸನ, ಕೊಡಗು, ಮೈಸೂರು, ಉಡುಪಿ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗಲಿದೆ. ಇದರ ಜೊತೆಗೆ ರಾಜ್ಯದಲ್ಲಿ ಕ್ರಮೇಣ ತಾಪಮಾನ ಇಳಿಕೆಯಾಗುವುದನ್ನು ಗಮನಿಸಬಹುದಿದೆ.
ಸಾಮಾನ್ಯವಾಗಿ ಮುಂಗಾರು ಮಳೆ ಜೂನ್ ಮೊದಲ ವಾರ ದೇಶ ಪ್ರವೇಶಿಸಿ ನಂತರ ಒಂದರಿಂದ ಎರಡು ವಾರದಲ್ಲಿ ಇಡಿ ದೇಶವನ್ನು ಆವರಿಸುತ್ತದೆ. ಆದರೆ ಈ ಭಾರಿ ಮೇ ತಿಂಗಳ ಕೊನೆಯಲ್ಲಿ ಭಾರತ ಪ್ರವೇಶಿಸುತ್ತಿರುವ ಬಗ್ಗೆ ಹವಾಮಾನ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಇತ್ತ ಮುಂದಿನ 7 ದಿನಗಳಲ್ಲಿ ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮೋಡ ಕವಿದ ಆಕಾಶ ಇರಲಿದ್ದು, ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಮಾಲೀನ್ಸ್ ಮತ್ತು ಕೊಮೊರಿನ್ ಪ್ರದೇಶದ ಉಳಿದ ಭಾಗಗಳಿಗೆ ಮಾರುತಗಳು ಮತ್ತಷ್ಟು ಹೆಚ್ಚಾಗುತ್ತಿವೆ.
ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ
ಈ ಬಾರಿ ವಾಡಿಕೆಗಿಂತ ಹೆಚ್ಚು ಮಾನ್ಸೂನ್ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಈಗಾಗಲೇ ಕರಾವಳಿ ಮತ್ತು ಮಲೆನಾಡಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಅತಿ ಹೆಚ್ಚು ಮಂಗಳೂರಿನ ಪಣಂಬೂ ರಿನಲ್ಲಿ 366 ಎಂ.ಎಂ ಮಳೆ ಬಿದ್ದಿದೆ. ಅದೇ ರೀತಿ ಮಾನ್ಸೂನ್ ಸಹ ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ ಎಂದು ತಜ್ಞರ ತಂಡ ತಿಳಿಸಿದೆ.
ಜೂನ್ ನಿಂದ ಸೆಪ್ಟಂಬರ್ ವರೆಗಿನ ಮುಂಗಾರು ಋತುವಿನಲ್ಲಿ ಬರುವ ಮಳೆಯು ದೇಶದ ಆರ್ಥಿಕತೆಯನ್ನು ನಿರ್ಧರಿಸುವ ಸಾಮರ್ಥ್ಯ ಹೊಂದಿದೆ. ಸದ್ಯ ಚಂಡಮಾರುತದಿಂದಾಗಿ ಮುಂಗಾರು ಬೇಗ ಪ್ರವೇಶಿಸುತ್ತಿದ್ದು, ಪೂರ್ವ ಮುಂಗಾರು ಸಹ ಉತ್ತಮ ಮಳೆ ದಾಖಲಿಸಿದೆ. ಜೊತೆಗೆ ಆಗಸ್ಟ್ ಹಾಗೂ ಸೆಪ್ಟೆಂಬರ್ ವೇಳೆ ಮಾನ್ಸೂನ್ ಅತ್ಯಧಿಕ ಮಟ್ಟ ತಲುಪಲಿದೆ ಎಂದು ತಿಳಿದುಬಂದಿದೆ.
ದೇಶದ ದಕ್ಷಿಣದ ರಾಜ್ಯಗಳ ಮೂಲಕ ಉತ್ತರದತ್ತ ಮುಂಗಾರು ಮಳೆಯ ಮಾರುತುಗಳ ಸಾಗಲಿವೆ. ಇದರಿಂದ ಶಾಖದ ಅಲೆಗೆ ಸಿಲುಕಿರುವ ಅಸ್ಸಾಂ, ದೆಹಲಿ, ಬಿಹಾರದಂತಹ ಕೆಲವು ರಾಜ್ಯಗಳಿಗೆ ಜೂನ್ ಮೊದಲ ವಾರದ ಮುಕ್ತಿ ಸಿಗುವ ಸಾಧ್ಯತೆ ಇದೆ. ಇತ್ತ ರಾಜ್ಯದ ಬಹುಪಾಲು ಎಲ್ಲಾ ಪ್ರದೇಶದಲ್ಲೂ ಅತ್ಯುತ್ತಮ ಮಳೆಯಾಗಲಿದೆ.
ಕರ್ನಾಟಕದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ, ಮೈಸೂರು ಸೇರಿದಂತೆ ಮಲೆನಾಡಿನ ಒಂದಷ್ಟು ಭಾಗಗಳು ಹಾಗೂ ಕರಾವಳಿ ಜಿಲ್ಲೆಗಳಿಗೆ ವಾಡಿಕೆಗಿಂತ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ವಾಡಿಕೆಯಷ್ಟು ಅಗತ್ಯ ಮಳೆ ಆಗಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.



Click it and Unblock the Notifications