Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಕೇರಳ ತಲುಪಿದ ಮಾನ್ಸೂನ್..! ಜೂನ್ 6ಕ್ಕೆ ರಾಜ್ಯಕ್ಕೆ ಎಂಟ್ರಿ ಸಾಧ್ಯತೆ..!
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಆರಂಭಗೊಂಡು ಬಹುಪಾಲು ಕಡೆಗಳಲ್ಲಿ ಮಳೆಯಾಗಿದೆ. ಮುಂದಿನ ದಿನದಲ್ಲೂ ಉತ್ತಮ ಮಳೆಯಾಗುವ ಮುನ್ಸೂಚನೆಯಂತು ಸಿಕ್ಕಿದೆ. ಸದ್ಯ ಮಾನ್ಸೂನ್ ಮಾರುತಗಳು ಭಾರತಕ್ಕೆ ಪ್ರವೇಶ ಪಡೆದಿದ್ದು, ಈ ಬಾರಿ ಸಕಾಲದಲ್ಲಿ ಮಳೆಗಾಲ ಆರಂಭವಾಗುವ ಸೂಚನೆ ಸಿಕ್ಕಿದೆ.
ಈಗಾಗಲೇ ಮಾನ್ಸೂನ್ ಮಾರುತಗಳು ಕೇರಳ ಕರಾವಳಿ ತಲುಪಿ ಭಾರೀ ಮಳೆಗೆ ಕಾರಣವಾಗಿದೆ. ಕೇರಳದ ಕರಾವಳಿ ಹಾಗೂ ಒಳನಾಡು ಭಾಗದಲ್ಲಿ ಭರ್ಜರಿ ಮಳೆಯಾಗುತ್ತಿದೆ. ಹೀಗಾಗಿ ಕೇರಳದ ಬಳಿಕ ಕರ್ನಾಟಕಕ್ಕೆ ಮಾನ್ಸೂನ್ ಮಾರುತಗಳು ಎಂಟ್ರಿ ಕೊಡಲಿವೆ. ಈ ಬಾರಿ ಈ ಮಾರುತಗಳು ಜೂನ್ 6 ಅಥವಾ 7ರಂದು ರಾಜ್ಯ ಪ್ರವೇಶಿಸಲಿದೆ.

ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಏಳು ದಿನಗಳ ಕಾಲ ಗುಡುಗು ಸಹಿತ ಪೂರ್ವ ಮುಂಗಾರು ಮಳೆಯಾಗಲಿದ್ದು, ಹಾಸನ, ಕೊಡಗು, ಮೈಸೂರು, ಉಡುಪಿ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗಲಿದೆ. ಇದರ ಜೊತೆಗೆ ರಾಜ್ಯದಲ್ಲಿ ಕ್ರಮೇಣ ತಾಪಮಾನ ಇಳಿಕೆಯಾಗುವುದನ್ನು ಗಮನಿಸಬಹುದಿದೆ.
ಸಾಮಾನ್ಯವಾಗಿ ಮುಂಗಾರು ಮಳೆ ಜೂನ್ ಮೊದಲ ವಾರ ದೇಶ ಪ್ರವೇಶಿಸಿ ನಂತರ ಒಂದರಿಂದ ಎರಡು ವಾರದಲ್ಲಿ ಇಡಿ ದೇಶವನ್ನು ಆವರಿಸುತ್ತದೆ. ಆದರೆ ಈ ಭಾರಿ ಮೇ ತಿಂಗಳ ಕೊನೆಯಲ್ಲಿ ಭಾರತ ಪ್ರವೇಶಿಸುತ್ತಿರುವ ಬಗ್ಗೆ ಹವಾಮಾನ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಇತ್ತ ಮುಂದಿನ 7 ದಿನಗಳಲ್ಲಿ ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮೋಡ ಕವಿದ ಆಕಾಶ ಇರಲಿದ್ದು, ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಮಾಲೀನ್ಸ್ ಮತ್ತು ಕೊಮೊರಿನ್ ಪ್ರದೇಶದ ಉಳಿದ ಭಾಗಗಳಿಗೆ ಮಾರುತಗಳು ಮತ್ತಷ್ಟು ಹೆಚ್ಚಾಗುತ್ತಿವೆ.
ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ
ಈ ಬಾರಿ ವಾಡಿಕೆಗಿಂತ ಹೆಚ್ಚು ಮಾನ್ಸೂನ್ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಈಗಾಗಲೇ ಕರಾವಳಿ ಮತ್ತು ಮಲೆನಾಡಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಅತಿ ಹೆಚ್ಚು ಮಂಗಳೂರಿನ ಪಣಂಬೂ ರಿನಲ್ಲಿ 366 ಎಂ.ಎಂ ಮಳೆ ಬಿದ್ದಿದೆ. ಅದೇ ರೀತಿ ಮಾನ್ಸೂನ್ ಸಹ ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ ಎಂದು ತಜ್ಞರ ತಂಡ ತಿಳಿಸಿದೆ.
ಜೂನ್ ನಿಂದ ಸೆಪ್ಟಂಬರ್ ವರೆಗಿನ ಮುಂಗಾರು ಋತುವಿನಲ್ಲಿ ಬರುವ ಮಳೆಯು ದೇಶದ ಆರ್ಥಿಕತೆಯನ್ನು ನಿರ್ಧರಿಸುವ ಸಾಮರ್ಥ್ಯ ಹೊಂದಿದೆ. ಸದ್ಯ ಚಂಡಮಾರುತದಿಂದಾಗಿ ಮುಂಗಾರು ಬೇಗ ಪ್ರವೇಶಿಸುತ್ತಿದ್ದು, ಪೂರ್ವ ಮುಂಗಾರು ಸಹ ಉತ್ತಮ ಮಳೆ ದಾಖಲಿಸಿದೆ. ಜೊತೆಗೆ ಆಗಸ್ಟ್ ಹಾಗೂ ಸೆಪ್ಟೆಂಬರ್ ವೇಳೆ ಮಾನ್ಸೂನ್ ಅತ್ಯಧಿಕ ಮಟ್ಟ ತಲುಪಲಿದೆ ಎಂದು ತಿಳಿದುಬಂದಿದೆ.
ದೇಶದ ದಕ್ಷಿಣದ ರಾಜ್ಯಗಳ ಮೂಲಕ ಉತ್ತರದತ್ತ ಮುಂಗಾರು ಮಳೆಯ ಮಾರುತುಗಳ ಸಾಗಲಿವೆ. ಇದರಿಂದ ಶಾಖದ ಅಲೆಗೆ ಸಿಲುಕಿರುವ ಅಸ್ಸಾಂ, ದೆಹಲಿ, ಬಿಹಾರದಂತಹ ಕೆಲವು ರಾಜ್ಯಗಳಿಗೆ ಜೂನ್ ಮೊದಲ ವಾರದ ಮುಕ್ತಿ ಸಿಗುವ ಸಾಧ್ಯತೆ ಇದೆ. ಇತ್ತ ರಾಜ್ಯದ ಬಹುಪಾಲು ಎಲ್ಲಾ ಪ್ರದೇಶದಲ್ಲೂ ಅತ್ಯುತ್ತಮ ಮಳೆಯಾಗಲಿದೆ.
ಕರ್ನಾಟಕದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ, ಮೈಸೂರು ಸೇರಿದಂತೆ ಮಲೆನಾಡಿನ ಒಂದಷ್ಟು ಭಾಗಗಳು ಹಾಗೂ ಕರಾವಳಿ ಜಿಲ್ಲೆಗಳಿಗೆ ವಾಡಿಕೆಗಿಂತ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ವಾಡಿಕೆಯಷ್ಟು ಅಗತ್ಯ ಮಳೆ ಆಗಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.



Click it and Unblock the Notifications
