Latest Updates
-
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ! -
ಸಣ್ಣ ಬಾಲ್ಕನಿಯಲ್ಲಿ ಓಣಂ ಸಂಭ್ರಮ: ಬಜೆಟ್ನಲ್ಲಿ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್ -
ಲಾಲ್ಬಾಗ್ ಫಲಪುಷ್ಪ ಪ್ರದರ್ಶನ: ಕೊನೆಯ ದಿನದ ಸಂಭ್ರಮ ಮತ್ತು ಮನೆಯನ್ನು ಸಿಂಗರಿಸುವ ಸುಲಭ ಟಿಪ್ಸ್
ಕೇರಳ ತಲುಪಿದ ಮಾನ್ಸೂನ್..! ಜೂನ್ 6ಕ್ಕೆ ರಾಜ್ಯಕ್ಕೆ ಎಂಟ್ರಿ ಸಾಧ್ಯತೆ..!
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಆರಂಭಗೊಂಡು ಬಹುಪಾಲು ಕಡೆಗಳಲ್ಲಿ ಮಳೆಯಾಗಿದೆ. ಮುಂದಿನ ದಿನದಲ್ಲೂ ಉತ್ತಮ ಮಳೆಯಾಗುವ ಮುನ್ಸೂಚನೆಯಂತು ಸಿಕ್ಕಿದೆ. ಸದ್ಯ ಮಾನ್ಸೂನ್ ಮಾರುತಗಳು ಭಾರತಕ್ಕೆ ಪ್ರವೇಶ ಪಡೆದಿದ್ದು, ಈ ಬಾರಿ ಸಕಾಲದಲ್ಲಿ ಮಳೆಗಾಲ ಆರಂಭವಾಗುವ ಸೂಚನೆ ಸಿಕ್ಕಿದೆ.
ಈಗಾಗಲೇ ಮಾನ್ಸೂನ್ ಮಾರುತಗಳು ಕೇರಳ ಕರಾವಳಿ ತಲುಪಿ ಭಾರೀ ಮಳೆಗೆ ಕಾರಣವಾಗಿದೆ. ಕೇರಳದ ಕರಾವಳಿ ಹಾಗೂ ಒಳನಾಡು ಭಾಗದಲ್ಲಿ ಭರ್ಜರಿ ಮಳೆಯಾಗುತ್ತಿದೆ. ಹೀಗಾಗಿ ಕೇರಳದ ಬಳಿಕ ಕರ್ನಾಟಕಕ್ಕೆ ಮಾನ್ಸೂನ್ ಮಾರುತಗಳು ಎಂಟ್ರಿ ಕೊಡಲಿವೆ. ಈ ಬಾರಿ ಈ ಮಾರುತಗಳು ಜೂನ್ 6 ಅಥವಾ 7ರಂದು ರಾಜ್ಯ ಪ್ರವೇಶಿಸಲಿದೆ.

ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಏಳು ದಿನಗಳ ಕಾಲ ಗುಡುಗು ಸಹಿತ ಪೂರ್ವ ಮುಂಗಾರು ಮಳೆಯಾಗಲಿದ್ದು, ಹಾಸನ, ಕೊಡಗು, ಮೈಸೂರು, ಉಡುಪಿ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗಲಿದೆ. ಇದರ ಜೊತೆಗೆ ರಾಜ್ಯದಲ್ಲಿ ಕ್ರಮೇಣ ತಾಪಮಾನ ಇಳಿಕೆಯಾಗುವುದನ್ನು ಗಮನಿಸಬಹುದಿದೆ.
ಸಾಮಾನ್ಯವಾಗಿ ಮುಂಗಾರು ಮಳೆ ಜೂನ್ ಮೊದಲ ವಾರ ದೇಶ ಪ್ರವೇಶಿಸಿ ನಂತರ ಒಂದರಿಂದ ಎರಡು ವಾರದಲ್ಲಿ ಇಡಿ ದೇಶವನ್ನು ಆವರಿಸುತ್ತದೆ. ಆದರೆ ಈ ಭಾರಿ ಮೇ ತಿಂಗಳ ಕೊನೆಯಲ್ಲಿ ಭಾರತ ಪ್ರವೇಶಿಸುತ್ತಿರುವ ಬಗ್ಗೆ ಹವಾಮಾನ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಇತ್ತ ಮುಂದಿನ 7 ದಿನಗಳಲ್ಲಿ ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮೋಡ ಕವಿದ ಆಕಾಶ ಇರಲಿದ್ದು, ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಮಾಲೀನ್ಸ್ ಮತ್ತು ಕೊಮೊರಿನ್ ಪ್ರದೇಶದ ಉಳಿದ ಭಾಗಗಳಿಗೆ ಮಾರುತಗಳು ಮತ್ತಷ್ಟು ಹೆಚ್ಚಾಗುತ್ತಿವೆ.
ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚು ಮಳೆ
ಈ ಬಾರಿ ವಾಡಿಕೆಗಿಂತ ಹೆಚ್ಚು ಮಾನ್ಸೂನ್ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಈಗಾಗಲೇ ಕರಾವಳಿ ಮತ್ತು ಮಲೆನಾಡಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಅತಿ ಹೆಚ್ಚು ಮಂಗಳೂರಿನ ಪಣಂಬೂ ರಿನಲ್ಲಿ 366 ಎಂ.ಎಂ ಮಳೆ ಬಿದ್ದಿದೆ. ಅದೇ ರೀತಿ ಮಾನ್ಸೂನ್ ಸಹ ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ ಎಂದು ತಜ್ಞರ ತಂಡ ತಿಳಿಸಿದೆ.
ಜೂನ್ ನಿಂದ ಸೆಪ್ಟಂಬರ್ ವರೆಗಿನ ಮುಂಗಾರು ಋತುವಿನಲ್ಲಿ ಬರುವ ಮಳೆಯು ದೇಶದ ಆರ್ಥಿಕತೆಯನ್ನು ನಿರ್ಧರಿಸುವ ಸಾಮರ್ಥ್ಯ ಹೊಂದಿದೆ. ಸದ್ಯ ಚಂಡಮಾರುತದಿಂದಾಗಿ ಮುಂಗಾರು ಬೇಗ ಪ್ರವೇಶಿಸುತ್ತಿದ್ದು, ಪೂರ್ವ ಮುಂಗಾರು ಸಹ ಉತ್ತಮ ಮಳೆ ದಾಖಲಿಸಿದೆ. ಜೊತೆಗೆ ಆಗಸ್ಟ್ ಹಾಗೂ ಸೆಪ್ಟೆಂಬರ್ ವೇಳೆ ಮಾನ್ಸೂನ್ ಅತ್ಯಧಿಕ ಮಟ್ಟ ತಲುಪಲಿದೆ ಎಂದು ತಿಳಿದುಬಂದಿದೆ.
ದೇಶದ ದಕ್ಷಿಣದ ರಾಜ್ಯಗಳ ಮೂಲಕ ಉತ್ತರದತ್ತ ಮುಂಗಾರು ಮಳೆಯ ಮಾರುತುಗಳ ಸಾಗಲಿವೆ. ಇದರಿಂದ ಶಾಖದ ಅಲೆಗೆ ಸಿಲುಕಿರುವ ಅಸ್ಸಾಂ, ದೆಹಲಿ, ಬಿಹಾರದಂತಹ ಕೆಲವು ರಾಜ್ಯಗಳಿಗೆ ಜೂನ್ ಮೊದಲ ವಾರದ ಮುಕ್ತಿ ಸಿಗುವ ಸಾಧ್ಯತೆ ಇದೆ. ಇತ್ತ ರಾಜ್ಯದ ಬಹುಪಾಲು ಎಲ್ಲಾ ಪ್ರದೇಶದಲ್ಲೂ ಅತ್ಯುತ್ತಮ ಮಳೆಯಾಗಲಿದೆ.
ಕರ್ನಾಟಕದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ, ಮೈಸೂರು ಸೇರಿದಂತೆ ಮಲೆನಾಡಿನ ಒಂದಷ್ಟು ಭಾಗಗಳು ಹಾಗೂ ಕರಾವಳಿ ಜಿಲ್ಲೆಗಳಿಗೆ ವಾಡಿಕೆಗಿಂತ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ವಾಡಿಕೆಯಷ್ಟು ಅಗತ್ಯ ಮಳೆ ಆಗಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.



Click it and Unblock the Notifications