Latest Updates
-
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು?
ಕುಂಭಮೇಳದಲ್ಲಿ ಸಾವಿರ ಕೋಟಿ ಒಡೆಯ..! ಬಾಬಾ ಆಗಿ ಬದಲಾದ ಉದ್ಯಮಿ..!!
ಈ ಬಾರಿ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಹಲವಾರು ವಿಚಾರಗಳಿಂದ ಸುದ್ದಿಯಾಗುತ್ತಲೇ ಇದೆ. ಈ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಭಾಗಿಯಾಗಿದ್ದರು. ಹಾಗೆ ಉದ್ಯಮಿಗಳು, ವಿದೇಶಿಗರು ಸೇರಿದಂತೆ ಈಗ ಅಂಬಾನಿ ಕುಟುಂಬ ಕೂಡ ತ್ರಿವೇಣಿ ಸಂಗಮನದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.
ಹಾಗೆ ಈ ಕುಂಭ ಮೇಳದಲ್ಲಿ ಐಐಟಿ ಬಾಬಾ, ರುದ್ರಾಕ್ಷಿ ಮಾರುತ್ತಿದ್ದ ಹುಡುಗಿ ಮೊನಾಲೀನಾ, ಹಾಗೆ ಇಂಜಿನಿಯರ್ ಬಾಬಾ, ವಿದೇಶಿ ಬಾಬಾ ಹೀಗೆ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಈಗ ಮತ್ತೊಂದು ಅಚ್ಚರಿಯ ವಿಚಾರಕ್ಕೆ ಸುದ್ದಿಯಾಗುತ್ತಿದೆ. ಅದರಲ್ಲೂ ಒಬ್ಬ ವ್ಯಕ್ತಿ ಕೋಟಿ ಕೋಟಿ ಆಸ್ತಿ ತೊರೆದು ಬಾಬಾ ಆಗಿರುವ ಕಥೆ ಇದು.

ಕೇಸರಿ ಬಟ್ಟೆಯಲ್ಲಿ ಕಾಣಿಸಿಕೊಂಡ ವ್ಯಕ್ತಿಯೊಬ್ಬ ಆತನಿಗೆ 1 ಸಾವಿರ ಕೋಟಿ ವ್ಯವಹಾರ ಹೊಂದಿದ್ದ ಎಂದು ಹೇಳಿಕೊಂಡಿದ್ದಾನೆ. ಆತ ಸಾಮಾನ್ಯ ಬಾಬಾರಂತೆ ಅಲ್ಲಿದ್ದರಿಗೆ ಕಾಣಿಸಿಕೊಂಡಿದ್ದಾನೆ. ಇಷ್ಟು ಕೋಟಿ ಕೋಟಿ ಆಸ್ತಿ ಇದ್ದರೂ ಆತ ವೈರಾಗ್ಯದಿಂದ ಆಧ್ಯಾತ್ಮ ಆಯ್ಕೆ ಮಾಡಿಕೊಂಡಿದ್ದೇಕೆ ಎಂಬುದು ದೊಡ್ಡ ಕುತೂಹಲಕ್ಕೆ ಕಾರಣವಾಗಿದೆ.
ಕುಂಭಮೇಳದಲ್ಲಿ ಉದ್ಯಮಿ ಬಾಬಾ ಎಂಬ ಬರಹದಡಿಯಲ್ಲಿ ಒಂದು ವಿಡಿಯೋ ವೈರಲ್ ಆಗುತ್ತಿದೆ. ಇಲ್ಲಿ ಬಾಬಾನ ಆಸ್ತಿ ವಿಚಾರ ತಿಳಿದು ಮಂದಿ ಶಾಕ್ಗೆ ಒಳಗಾಗಿದ್ದಾರೆ. ಅಲ್ಲಿ ವ್ಯಕ್ತಿಯೊಬ್ಬ ಬಡವರಿಗೆ ಹೊದಿಕೆ ನೀಡುವುದು. ಶಾಲ್ ನೀಡುವುದು ನೋಡಬಹುದು, ಎಲ್ಲರಿಗೂ ಈ ಶ್ರೀಮಂತ ಯಾರು ಎಂಬ ಪ್ರಶ್ನೆ ಮೂಡಿದೆ.
ಈ ವಿಡಿಯೋ ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಉದ್ಯಮಿ ಬಾಬಾ ಕುರಿತು ಹುಡುಕಾಟ ಆರಂಭಗೊಂಡಿತ್ತು, ಯಾರು ಈ ಶ್ರೀಮಂತ ಬಾಬಾ ಎಂಬ ಕುತೂಹಲ ಮೂಡಿತ್ತು. ವಿಡಿಯೋದಲ್ಲಿ ಹೇಳಿರುವಂತೆ ಆತ ಸಾವಿರ ಕೋಟಿ ಒಡೆಯನಂತೆ. ಆದ್ರೆ ಮಹಾ ಕುಂಭಮೇಳದಲ್ಲಿ ಕಾಣಿಸಿಕೊಂಡಿದ್ದು, ಆದ್ರೆ ಆತನ ಕುರಿತು ಯಾವುದೇ ಮಾಹಿತಿ ಆತ ಹಂಚಿಕೊಂಡಿಲ್ಲ. ಎಲ್ಲರಿಗೂ ಆತ ಯಾರು? ಸಾವಿರ ಕೋಟಿ ಒಡೆಯ ಆಗಿದ್ದು ಹೇಗೆ? ಆತ ಯಾವ ಉದ್ಯಮ ಕಟ್ಟಿದ್ದ ಎಂಬ ಪ್ರಶ್ನೆ ಹಾಗೆಯೇ ಉಳಿದಿದೆ. ಹಾಗೆ ಆತ ತನ್ನ ಆಸ್ತಿಯನ್ನೆಲ್ಲಾ ಬಿಟ್ಟು ಏಕೆ ಬಾಬಾ ಆದ ಎಂಬುದು ಕೂಡ ದೊಡ್ಡ ಪ್ರಶ್ನೆಯಾಗಿದೆ.
ಆತ ಯಾರೇ ಆಗಿದ್ದರು ಕುಂಭ ಮೇಳದಲ್ಲಿ ಭಾಗಿಯಾದ ಬಡವರಿಗೆ ಒಂದಿಷ್ಟು ಸಹಾಯ ಮಾಡುತ್ತಿರುವುದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ಹಾಗೆ ಆತನ ಈ ಕಾರ್ಯ ಮೆಚ್ಚಿ ಹಲವರು ಅವರನ್ನು ಅಭಿನಂದಿಸಿದ್ದಾರೆ. ಹಾಗೆ ಅವರಿಗೆ ಕುಂಭ ಮೇಳದ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದಕ್ಕಿಂತ ಹೆಚ್ಚಿನ ಪುಣ್ಯ ಲಭಿಸಲಿ ಎಂದು ಹರಸಿದ್ದಾರೆ.
ಫೆಬ್ರವರಿ 12ರ ಮಾಘಿ ಪೂರ್ಣಿಮೆಯ ದಿನದಂದು ಸುಮಾರು 1.6 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ತಮ್ಮ ತಾಯಿ ಕೋಕಿಲಾಬೆನ್ ಅಂಬಾನಿ, ಪುತ್ರರಾದ ಆಕಾಶ್ ಅಂಬಾನಿ ಮತ್ತು ಅನಂತ್ ಅಂಬಾನಿ, ಸೊಸೆಯಂದಿರು ಶ್ಲೋಕ ಮತ್ತು ರಾಧಿಕಾ, ಮೊಮ್ಮಕ್ಕಳು ಪೃಥ್ವಿ ಮತ್ತು ವೇದಾ ಮತ್ತು ಸಹೋದರಿಯರಾದ ದೀಪ್ತಿ ಸಲ್ಗಾಂವ್ಕರ್ ಮತ್ತು ನೀನಾ ಕೊಠಾರಿ ಜೊತೆಗೆ ಆಗಮಿಸಿದ್ದರು.



Click it and Unblock the Notifications