Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕುಂಭಮೇಳದಲ್ಲಿ ಸಾವಿರ ಕೋಟಿ ಒಡೆಯ..! ಬಾಬಾ ಆಗಿ ಬದಲಾದ ಉದ್ಯಮಿ..!!
ಈ ಬಾರಿ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಹಲವಾರು ವಿಚಾರಗಳಿಂದ ಸುದ್ದಿಯಾಗುತ್ತಲೇ ಇದೆ. ಈ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಭಾಗಿಯಾಗಿದ್ದರು. ಹಾಗೆ ಉದ್ಯಮಿಗಳು, ವಿದೇಶಿಗರು ಸೇರಿದಂತೆ ಈಗ ಅಂಬಾನಿ ಕುಟುಂಬ ಕೂಡ ತ್ರಿವೇಣಿ ಸಂಗಮನದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.
ಹಾಗೆ ಈ ಕುಂಭ ಮೇಳದಲ್ಲಿ ಐಐಟಿ ಬಾಬಾ, ರುದ್ರಾಕ್ಷಿ ಮಾರುತ್ತಿದ್ದ ಹುಡುಗಿ ಮೊನಾಲೀನಾ, ಹಾಗೆ ಇಂಜಿನಿಯರ್ ಬಾಬಾ, ವಿದೇಶಿ ಬಾಬಾ ಹೀಗೆ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಈಗ ಮತ್ತೊಂದು ಅಚ್ಚರಿಯ ವಿಚಾರಕ್ಕೆ ಸುದ್ದಿಯಾಗುತ್ತಿದೆ. ಅದರಲ್ಲೂ ಒಬ್ಬ ವ್ಯಕ್ತಿ ಕೋಟಿ ಕೋಟಿ ಆಸ್ತಿ ತೊರೆದು ಬಾಬಾ ಆಗಿರುವ ಕಥೆ ಇದು.

ಕೇಸರಿ ಬಟ್ಟೆಯಲ್ಲಿ ಕಾಣಿಸಿಕೊಂಡ ವ್ಯಕ್ತಿಯೊಬ್ಬ ಆತನಿಗೆ 1 ಸಾವಿರ ಕೋಟಿ ವ್ಯವಹಾರ ಹೊಂದಿದ್ದ ಎಂದು ಹೇಳಿಕೊಂಡಿದ್ದಾನೆ. ಆತ ಸಾಮಾನ್ಯ ಬಾಬಾರಂತೆ ಅಲ್ಲಿದ್ದರಿಗೆ ಕಾಣಿಸಿಕೊಂಡಿದ್ದಾನೆ. ಇಷ್ಟು ಕೋಟಿ ಕೋಟಿ ಆಸ್ತಿ ಇದ್ದರೂ ಆತ ವೈರಾಗ್ಯದಿಂದ ಆಧ್ಯಾತ್ಮ ಆಯ್ಕೆ ಮಾಡಿಕೊಂಡಿದ್ದೇಕೆ ಎಂಬುದು ದೊಡ್ಡ ಕುತೂಹಲಕ್ಕೆ ಕಾರಣವಾಗಿದೆ.
ಕುಂಭಮೇಳದಲ್ಲಿ ಉದ್ಯಮಿ ಬಾಬಾ ಎಂಬ ಬರಹದಡಿಯಲ್ಲಿ ಒಂದು ವಿಡಿಯೋ ವೈರಲ್ ಆಗುತ್ತಿದೆ. ಇಲ್ಲಿ ಬಾಬಾನ ಆಸ್ತಿ ವಿಚಾರ ತಿಳಿದು ಮಂದಿ ಶಾಕ್ಗೆ ಒಳಗಾಗಿದ್ದಾರೆ. ಅಲ್ಲಿ ವ್ಯಕ್ತಿಯೊಬ್ಬ ಬಡವರಿಗೆ ಹೊದಿಕೆ ನೀಡುವುದು. ಶಾಲ್ ನೀಡುವುದು ನೋಡಬಹುದು, ಎಲ್ಲರಿಗೂ ಈ ಶ್ರೀಮಂತ ಯಾರು ಎಂಬ ಪ್ರಶ್ನೆ ಮೂಡಿದೆ.
ಈ ವಿಡಿಯೋ ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಉದ್ಯಮಿ ಬಾಬಾ ಕುರಿತು ಹುಡುಕಾಟ ಆರಂಭಗೊಂಡಿತ್ತು, ಯಾರು ಈ ಶ್ರೀಮಂತ ಬಾಬಾ ಎಂಬ ಕುತೂಹಲ ಮೂಡಿತ್ತು. ವಿಡಿಯೋದಲ್ಲಿ ಹೇಳಿರುವಂತೆ ಆತ ಸಾವಿರ ಕೋಟಿ ಒಡೆಯನಂತೆ. ಆದ್ರೆ ಮಹಾ ಕುಂಭಮೇಳದಲ್ಲಿ ಕಾಣಿಸಿಕೊಂಡಿದ್ದು, ಆದ್ರೆ ಆತನ ಕುರಿತು ಯಾವುದೇ ಮಾಹಿತಿ ಆತ ಹಂಚಿಕೊಂಡಿಲ್ಲ. ಎಲ್ಲರಿಗೂ ಆತ ಯಾರು? ಸಾವಿರ ಕೋಟಿ ಒಡೆಯ ಆಗಿದ್ದು ಹೇಗೆ? ಆತ ಯಾವ ಉದ್ಯಮ ಕಟ್ಟಿದ್ದ ಎಂಬ ಪ್ರಶ್ನೆ ಹಾಗೆಯೇ ಉಳಿದಿದೆ. ಹಾಗೆ ಆತ ತನ್ನ ಆಸ್ತಿಯನ್ನೆಲ್ಲಾ ಬಿಟ್ಟು ಏಕೆ ಬಾಬಾ ಆದ ಎಂಬುದು ಕೂಡ ದೊಡ್ಡ ಪ್ರಶ್ನೆಯಾಗಿದೆ.
ಆತ ಯಾರೇ ಆಗಿದ್ದರು ಕುಂಭ ಮೇಳದಲ್ಲಿ ಭಾಗಿಯಾದ ಬಡವರಿಗೆ ಒಂದಿಷ್ಟು ಸಹಾಯ ಮಾಡುತ್ತಿರುವುದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ಹಾಗೆ ಆತನ ಈ ಕಾರ್ಯ ಮೆಚ್ಚಿ ಹಲವರು ಅವರನ್ನು ಅಭಿನಂದಿಸಿದ್ದಾರೆ. ಹಾಗೆ ಅವರಿಗೆ ಕುಂಭ ಮೇಳದ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದಕ್ಕಿಂತ ಹೆಚ್ಚಿನ ಪುಣ್ಯ ಲಭಿಸಲಿ ಎಂದು ಹರಸಿದ್ದಾರೆ.
ಫೆಬ್ರವರಿ 12ರ ಮಾಘಿ ಪೂರ್ಣಿಮೆಯ ದಿನದಂದು ಸುಮಾರು 1.6 ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ತಮ್ಮ ತಾಯಿ ಕೋಕಿಲಾಬೆನ್ ಅಂಬಾನಿ, ಪುತ್ರರಾದ ಆಕಾಶ್ ಅಂಬಾನಿ ಮತ್ತು ಅನಂತ್ ಅಂಬಾನಿ, ಸೊಸೆಯಂದಿರು ಶ್ಲೋಕ ಮತ್ತು ರಾಧಿಕಾ, ಮೊಮ್ಮಕ್ಕಳು ಪೃಥ್ವಿ ಮತ್ತು ವೇದಾ ಮತ್ತು ಸಹೋದರಿಯರಾದ ದೀಪ್ತಿ ಸಲ್ಗಾಂವ್ಕರ್ ಮತ್ತು ನೀನಾ ಕೊಠಾರಿ ಜೊತೆಗೆ ಆಗಮಿಸಿದ್ದರು.



Click it and Unblock the Notifications