Latest Updates
-
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ!
ಮಧ್ಯಮ ವರ್ಗಕ್ಕೆ ಬಜೆಟ್ ಕೊಡುಗೆ: ₹12 ಲಕ್ಷ ವರೆಗೂ ತೆರಿಗೆ ವಿನಾಯಿತಿ ಘೋಷಣೆ..!
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ನಲ್ಲಿ ಮಧ್ಯಮ ವರ್ಗಕ್ಕೆ ಕೊಡುಗೆ ನೀಡಿದ್ದಾರೆ. ಅದರಲ್ಲೂ ವೇತನ ಪಡೆಯುವ ಮಂದಿಗೆ ಈ ಬಾರು ಬಂಪರ್ ಕೊಡುಗೆ ನೀಡಲಾಗಿದೆ. ಹಾಗೆ ತೆರಿಗೆ ವಿನಾಯಿತಿಯು ಸಂತಸ ತಂದಿದೆ. ವಾರ್ಷಿಕವಾಗಿ 12 ಲಕ್ಷ ರೂಪಾಯಿ ವರೆಗೆ ಆದಾಯ ಹೊಂದಿರುವವರು ಕೂಡ ತೆರಿಗೆಯಿಂದ ಹೊರಗುಳಿಯಲಿದ್ದಾರೆ.
ಹೊಸ ತೆರಿಗೆ ಪದ್ಧತಿಯಲ್ಲಿ ವ್ಯಕ್ತಿ 12 ಲಕ್ಷ ರೂಪಾಯಿವರೆಗೂ ಯಾವುದೇ ತೆರಿಗೆ ಪಾವತಿಸುವ ಅಗತ್ಯವಿರುವುದಿಲ್ಲ. 12,75,000 ರೂ.ಗಳವರೆಗೆ ಆದಾಯ ಪಡೆಯುವ ಜನರು ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ. ಹಾಗೆ ಈ ಟ್ಯಾಕ್ಸ್ ಸ್ಲ್ಯಾಬ್ನಲ್ಲಿ ಬದಲಾವಣೆ ಮಾಡಲಾಗಿದ್ದು, ಈ ಹಿಂದೆ ಇದ್ದ ಹೊರೆ ಕಡಿಮೆಯಾಗಿದೆ. ಹಾಗಾದ್ರೆ ಯಾರಿಗೆಲ್ಲಾ ಈ ಹೊಸ ತೆರಿಗೆ ವಿನಾಯಿತಿ ಸಿಗುತ್ತಿದೆ ಎಂಬುದನ್ನು ತಿಳಿದುಕೊಳ್ಳೋಣ.

0-4 ಲಕ್ಷ ರೂಪಾಯಿಗಳವರೆಗೆ ತೆರಿಗೆ ಪಾವತಿಸುವಂತಿಲ್ಲ.
4-8 ಲಕ್ಷ ರೂಪಾಯಿಗಳ ವರೆಗೆ ವೇತನ ಪಡೆಯುವವರು ಶೇ.5ರಷ್ಟು ತೆರಿಗೆ ಪಾವತಿಸಬೇಕಿದೆ.
8-12 ಲಕ್ಷ ರೂಪಾಯಿಗಳ ವರೆಗೆ ವೇತನ ಪಡೆಯುವವರು ಶೇ.10ರಷ್ಟು ತೆರಿಗೆ ಪಾವತಿಸಬೇಕಿದೆ.
12-16 ಲಕ್ಷ ರೂಪಾಯಿಗಳ ವರೆಗೆ ವೇತನ ಪಡೆಯುವವರು ಶೇ.15ರಷ್ಟು ತೆರಿಗೆ ಪಾವತಿಸಬೇಕಿದೆ.
16-20 ಲಕ್ಷ ರೂಪಾಯಿಗಳ ವರೆಗೆ ವೇತನ ಪಡೆಯುವವರು ಶೇ.20ರಷ್ಟು ತೆರಿಗೆ ಪಾವತಿಸಬೇಕಿದೆ.
20-24 ಲಕ್ಷ ರೂಪಾಯಿಗಳ ವರೆಗೆ ವೇತನ ಪಡೆಯುವವರು ಶೇ.25ರಷ್ಟು ತೆರಿಗೆ ಪಾವತಿಸಬೇಕಿದೆ.
ನೀವು ವಾರ್ಷಿಕವಾಗಿ 24 ಲಕ್ಷ ರೂಪಾಯಿಗಳಿಗಿಂತ ಹೆಚ್ಚು ವೇತನ ಪಡೆಯುತ್ತಿದ್ದರೆ ನೀವು ಶೇ.30ರಷ್ಟು ತೆರಿಗೆ ಪಾವತಿಸಬೇಕಾಗುತ್ತದೆ.
ಈ ಹಿಂದೆ 7 ಲಕ್ಷ ರೂವರೆಗಿನ ಆದಾಯಕ್ಕೆ ಟ್ಯಾಕ್ಸ್ ರಿಬೇಟ್ ನೀಡಲಾಗುತ್ತಿತ್ತು. ಈಗ ಈ ಪ್ರಕಾರ 12 ಲಕ್ಷ ರೂ. ವರೆಗಿನ ಆದಾಯಕ್ಕೆ ತೆರಿಗೆ ಕಟ್ಟುವ ಅವಶ್ಯಕತೆ ಇರುವುದಿಲ್ಲ. ವಾರ್ಷಿಕ ಆದಾಯ 12 ಲಕ್ಷ ರೂಪಾಯಿ ಆಗಿದ್ದರೆ ವಾರ್ಷಿಕ 80,000 ರೂಪಾಯಿ ವರೆಗೂ ತೆರಿಗೆ ಪ್ರಯೋಜನ ಪಡೆದು ಆದಾಯ ತೆರಿಗೆ ಪಾವತಿ ಉಳಿಸಬಹುದು. ಆದರೆ 12 ಲಕ್ಷ ರೂಪಾಯಿಗಿಂತ ಅಧಿಕ ಆದಾಯ ಹೊಂದಿದ್ದರೆ ತೆರಿಗೆ ಪಾವತಿಯ ಜೊತೆಗೆ ಅವರಿಗೆ ತೆರಿಗೆ ಪ್ರಯೋಜನ ಕೂಡ ಇದೆ. ಉದಾಹರಣೆಗೆ ವಾರ್ಷಿಕವಾಗಿ 16 ಲಕ್ಷ ರೂ. ಆದಾಯ ಗಳಿಸಿದರೆ ಅದರಲ್ಲಿ 1,20,000 ತೆರಿಗೆ ಕಟ್ಟಬೇಕಾಗುತ್ತದೆ, ಆದರೆ ಅವರಿಗೆ 50 ಸಾವಿರ ರೂಪಾಯಿ ತೆರಿಗೆ ಪ್ರಯೋಜನವಾಗುತ್ತದೆ.
ನೀವೇನಾದರು ವಾರ್ಷಿಕವಾಗಿ 50 ಲಕ್ಷ ರೂಪಾಯಿ ಆದಾಯ ಪಡೆದಿದ್ದರೆ ತೆರಿಗೆ ವಿನಾಯಿತಿ ರೂಪದಲ್ಲಿ 1,10,000 ರೂ. ಪಡೆದು ಒಟ್ಟು 10.80 ಲಕ್ಷ ರೂಪಾಯಿ ತೆರಿಗೆ ಪಾವತಿಸಬೇಕಾಗುತ್ತದೆ. ಸದ್ಯ ಈ ಹೊಸ ತೆರಿಗೆ ವಿನಾಯಿತಿಯು ಮಧ್ಯಮ ವರ್ಗದವರಿಗೆ ಸಂತಸ ತರುತ್ತಿದೆ. ಗಳಿಸಿದ ಹಣದಲ್ಲಿ ತೆರಿಗೆ ಪಾವತಿ ವಿನಾಯಿಸಿ ನಿರಾಳವಾಗಿಸಿದೆ.



Click it and Unblock the Notifications