Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ದೆಹಲಿ ಕೆಂಪುಕೋಟೆ ಹಿಂದೆ ಬಿಳಿ ಬಣ್ಣದಿಂದ ಕೂಡಿತ್ತು..! ಈ ಅಚ್ಚರಿ ವಿಷಯ ನಿಮಗೆ ಗೊತ್ತಾ?
ದೆಹಲಿ ಹೆಸರು ಕೇಳಿದ ತಕ್ಷಣ ನಿಮಗೆ ಸಂಸತ್ ಭವನ ಹಾಗೂ ಕೆಂಪು ಕೋಟೆ ನೆನಪಿಗೆ ಬರಬಹುದು. ಕೆಂಪು ಕೋಟೆ ನಮ್ಮ ಇತಿಹಾಸದಲ್ಲಿ ಬಹುಮುಖ್ಯ ಅಂಶವಾಗಿ ಉಳಿದುಬಿಟ್ಟದೆ. ಸ್ವಾತಂತ್ರ್ಯೋತ್ಸವ ಹಾಗೂ ಸ್ವಾತಂತ್ರ್ಯದ ಹೋರಾಟಕ್ಕೂ ಈ ಕೆಂಪುಕೋಟೆಗು ನಿಕಟ ಸಂಬಂಧವಿರುವುದು ನಾವು ಅರಿತ್ತಿದ್ದೇವೆ. ಹೀಗಾಗಿಯೇ ಸ್ವಾತಂತ್ರ್ಯೋತ್ಸವದಂದು ಕೆಂಪು ಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸಲಾಗುತ್ತದೆ. ಹಾಗೆ ಆ ದಿನದಂದು ಪ್ರಧಾನಿ ಭಾಷಣ ದೇಶವಾಸಿಗಳ ಉದ್ದೇಶಿಸಿ ಭಾಷಣ ಮಾಡುತ್ತಾರೆ.
ಇನ್ನು ಹೆಸರೇ ಹೇಳುವಂತೆ ಕೆಂಪು ಕೋಟೆಯ ಬಣ್ಣ ಕೆಂಪಾಗಿದೆ. ಆದ್ರೆ ನಿಮಗೆ ಗೊತ್ತಾ ಕೆಂಪು ಕೋಟೆ ಮೊದಲು ತಾಜ್ಮಹಲ್ನಂತೆಯೇ ಬಿಳಿ ಬಣ್ಣದಲ್ಲಿತ್ತು. ಹೌದು ನಿಮಗೆ ಅಚ್ಚರಿ ಎನಿಸಬಹುದು ಕೆಂಪು ಕೋಟೆಯ ಬಣ್ಣ ಬಿಳಿಯಾಗಿತ್ತು. ಆದರೆ ಇದನ್ನು ಕೆಂಪು ಬಣ್ಣದ ಕೋಟೆಯನ್ನಾಗಿ ಮಾಡಲಾಗಿತ್ತು ಎಂಬುದು ನಿಮಗೆ ಗೊತ್ತಾ?

ಈ ಬಿಳಿಯ ಕೋಟೆಯನ್ನು ಕೆಂಪು ಮಾಡುವ ಹಿಂದಿರುವ ಉದ್ದೇಶ ತಿಳಿಯಬೇಕಾದರೆ ಈ ಕೋಟೆಯ ಇತಿಹಾಸ ತಿಳಿಯಬೇಕಾಗುತ್ತದೆ. ಈ ಕೆಂಪು ಕೋಟೆಯನ್ನು ಮೊಘಲ್ ದೊರೆ 1638ರಿಂದ 1648ರ ನಡುವೆ ಷಹಜಹಾನ್ ನಿರ್ಮಿಸಿದ್ದ. ಅಂದಿನ ಕಾಲದಲ್ಲಿ ಇದೊಂದು ಅದ್ಭುತ ನಿರ್ಮಾಣವಾಗಿತ್ತು. ಹಾಗೆ ಮೊಘಲ್ ದೊರೆ ತನ್ನ ರಾಜಧಾನಿ ಬದಲಿಸಿದ ಕಾಣದಿಂದಾಗಿ ಈ ಭವ್ಯ ಕಟ್ಟಡ ದೆಹಲಿಯಲ್ಲಿ ನಿರ್ಮಿಸಲಾಗಿತ್ತು ಎಂಬುದು ಇತಿಹಾಸ ಪುಟದಲ್ಲಿ ಸೇರಿಕೊಂಡಿದೆ.
ಈ ಕೋಟೆಯನ್ನು ಕಿಲಾ ಎ ಮುಬಾರಕ್ ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು. ಇದರ ಅರ್ಥ ಪವಿತ್ರ ಕೋಟೆ ಎಂಬುದಾಗಿತ್ತು. ಷಹಜಹಾನ್ ತನ್ನ ರಾಜಧಾನಿಯನ್ನು ಆಗ್ರಾದಿಂದ ದೆಹಲಿಗೆ ಬದಲಾಯಿಸಿದಾಗ ಈ ಕೋಟೆಯ ನಿರ್ಮಾಣವಾಗಿತ್ತು. ಅಂದಿನಿಂದ ಇಂದಿನವರೆಗೂ ದೆಹಲು ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಜೊತೆಗೆ ಹಲವು ಐತಿಹಾಸಿಕ ಘಟನೆಗಳಿಗೂ ಇದು ಸಾಕ್ಷಿಯಾಗಿದೆ.
ಅಮೃತಶಿಲೆಯಲ್ಲಿ ನಿರ್ಮಾಣಗೊಂಡಿತ್ತು ಈ ಕೋಟೆ
ಹಷಜಹಾನ್ ಈ ಕೋಟೆಯನ್ನು ಮೊದಲು ಕೆಂಪು ಬಣ್ಣದ ಕಲ್ಲಿನಿಂದ ನಿರ್ಮಿಸಲಿಲ್ಲ. ಬದಲಿಗೆ ಬಿಳಿ ಅಮೃತಶಿಲೆಯ ಕಲ್ಲುಗಳಿಂದಲೇ ನಿರ್ಮಿಸಿದ್ದ. ಆದರೆ ಈ ಅಮೃತಶಿಲೆಗಳು ಹೆಚ್ಚು ವರ್ಷಗಳ ಕಾಲ ಬಾಳಿಕೆ ಬರುವುದಿಲ್ಲ, ವರ್ಷಗಳು ಕಳೆದಂತೆ ಈ ಕಲ್ಲುಗಳು ತಮ್ಮ ಮೂಲ ರೂಪದಿಂದ ಕೆಂಪು ಬಣ್ಣಕ್ಕೆ ತಿರುಗಲು ಆರಂಭಿಸಿದ್ದವು. ಹವಾಮಾನದಲ್ಲಿನ ಬದಲಾವಣೆಗೆ ಈ ಕಲ್ಲಿನ ಸ್ವರೂಪ ಬದಲಿಗೆ ಕಾರಣವಾಗಿತ್ತು. ಇದು ಕೋಟೆಯ ಅಂದವನ್ನು ಕೆಡಿಸಿತ್ತು.
ಕೋಟೆಗೆ ಹೊಸ ರೂಪ ಕೊಟ್ಟ ಬ್ರಿಟಿಷರು
1857ರ ಮೊದಲ ಸ್ವಾತಂತ್ರ್ಯ ಸಂಗ್ರಾಮದ ಬಳಿಕ ಬ್ರಿಟಿಷರು ಈ ಕೋಟೆಯನ್ನು ತಮ್ಮ ವಶಕ್ಕೆ ಪಡೆದರು. ಈ ಸಮಯದಲ್ಲಿ ಕೊನೆಯ ಮೊಘಲ್ ದೊರೆ ಬಹದ್ದೂರ್ ಶಾ ಜಾಫರ್ ಅನ್ನು ಬ್ರಿಟಿಷರು ವಶಕ್ಕೆ ಪಡೆದಿದ್ದರು. ಹೀಗಾಗಿ ಕೋಟೆ ಕೂಡ ಬ್ರಿಟಿಷರ ವಶದಲ್ಲಿತ್ತು. ಈ ಸಮಯದಲ್ಲಿ ಕೋಟೆಯ ಬಣ್ಣ ವಿಪರೀತ ಕೆಟ್ಟು ಹೋಗಿತ್ತು. ಅಮೃತಶಿಲೆಗಳು ಗುರುತು ಹಿಡಿಯಲಾಗದ ಸ್ಥಿತಿಗೆ ತಲುಪಿದ್ದವು. ಹೀಗಾಗಿ ಬ್ರಿಟಿಷರು ಈ ಮೂಲ ಅಮೃತಶಿಲೆಯನ್ನು ತೆಗೆದು ಎಷ್ಟು ವರ್ಷ ಇದ್ದರೂ ಹಾಳಾಗದಂತ ಎಲ್ಲಾ ಹವಾಮಾನದಲ್ಲೂ ಒಗ್ಗಿಕೊಳ್ಳುವ ಮರಳು ಕಲ್ಲುಗಳ ಬಳಸಿ ಮತ್ತೆ ಕೋಟೆ ದುರಸ್ಥಿ ಕಾರ್ಯಕ್ಕೆ ಮುಂದಾದರು. ಹೀಗಾಗಿ ಬಳಿಕ ಇದನ್ನು ಕೆಂಪು ಕೋಟೆಯಾಗಿ ಗುರುತಿಸಲಾಗಿದೆ.
ಈಗ ಕೆಂಪುಕೋಟೆಯು ಯುನೆಸ್ಕೋ ವಿಶ್ವ ಪಾರಂಪರಿಕ ತಾಣವಾಗಿ ಗುರುತಿಸಲಾಗಿದೆ. ಇದರ ಒಳಗೆ ಇಂದಿಗೂ ಒಂದು ಬಿಳಿ ಬಣ್ಣದ ಮಸೀದಿ ಇರುವುದು ನೋಡಬಹುದು. ವರ್ಷವೂ ಲಕ್ಷಾಂತರ ಮಂದಿ ಪ್ರವಾಸಿಗರು ಈ ಕೋಟೆ ವೀಕ್ಷಿಸಲು ಬರುತ್ತಾರೆ.



Click it and Unblock the Notifications