Latest Updates
-
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ಜಗತ್ತಿನ ಅತಿ ಎತ್ತರದ ರೈಲ್ವೆ ಸೇತುವೆ ಚೆನಾಬ್ ಬ್ರಿಡ್ಜ್ ನಾಳೆ ಲೋಕಾರ್ಪಣೆ.!
ಜಮ್ಮು ಮತ್ತು ಕಾಶ್ಮೀರ ಭಾರತದ ಅತ್ಯಂತ ಸುಂದರ ಪ್ರದೇಶಗಳಲ್ಲಿ ಒಂದಾಗಿದೆ. ಇತ್ತೀಚಿನ ದಿನಗಳಲ್ಲಿ ಭಾರತದ ಪ್ರವಾಸಿ ಸ್ಥಳಗಳ ಪೈಕಿ ಜಮ್ಮು ಮತ್ತು ಕಾಶ್ಮೀರ ಅತೀ ಹೆಚ್ಚು ಪ್ರವಾಸಿಗರ ಸೆಳೆಯುತ್ತಿದೆ. ಹೀಗಾಗಿ ಅಲ್ಲಿನ ರಸ್ತೆ, ರೈಲು ಸೇವೆ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳ ಮೇಲ್ದೆರ್ಜೆಗೆ ಏರಿಸುವ ಕೆಸಲ ನಡೆಯುತ್ತಲೇ ಇದೆ.
ಇದೀಗ ಈ ಸಾಲಿಗೆ ಹೊಸ ಸೇವೆ ಸೇರಿಕೊಳ್ಳುತ್ತಿದೆ. ವಿಶ್ವದ ಅತ್ಯಂತ ಎತ್ತರದ ರೈಲ್ವೆ ಸೇತುವೆ ನಾಳೆ ಉದ್ಘಾಟನೆಗೊಳ್ಳುತ್ತಿದೆ. ಚೆನಾಬ್ ಸೇತುವೆ ಭಾರತದ ಅತ್ಯಂತ ದುಬಾರಿ ಸೇತುವೆಯಾಗಿದ್ದು, ವಿಶ್ವದ ಎತ್ತರದ ಸೇತುವೆ ಅಂತಲೂ ಹೆಸರಾಗಿದೆ. ಇದರ ಜೊತೆ ನಾಳೆ ಕಾಶ್ಮೀರದಲ್ಲಿ ಮೊದಲ ಎಲೆಕ್ಟ್ರಿಕ್ ರೈಲನ್ನು ಉದ್ಘಾಟಿಸಲಿದ್ದಾರೆ.
ಬನಿಹಾಲ್ನಿಂದ ಸಂಗಲ್ದಾನ್ ವಿಭಾಗಕ್ಕೆ 48 ಕಿಲೋಮೀಟರ್ ರೈಲು ಸಂಪರ್ಕವನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲು ಪ್ರಧಾನಿ ಮೋದಿ ಸಜ್ಜಾಗಿದ್ದಾರೆ. ಮಂಗಳವಾರ ಶ್ರೀನಗರ ರೈಲು ನಿಲ್ದಾಣದಿಂದ ಕಾಶ್ಮೀರದ ಮೊದಲ ಎಲೆಕ್ಟ್ರಿಕ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು, ಜಮ್ಮು ಕಾಶ್ಮೀರ ಭೇಟಿಯ ಸಂದರ್ಭದಲ್ಲಿ ರೂ 3,161 ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ / ಅಡಿಪಾಯ ಹಾಕಲಿದ್ದಾರೆ. ಸಾಂಬಾ ಜಿಲ್ಲೆಯ ವಿಜಯಪುರ ಪಟ್ಟಣದಲ್ಲಿ ಏಮ್ಸ್, ರಿಯಾಸಿ ಜಿಲ್ಲೆಯ ಅತಿ ಎತ್ತರದ ರೈಲ್ವೆ ಸೇತುವೆ, ದೇವಿಕಾ ಪುನರುಜ್ಜೀವನ ಯೋಜನೆ, ಶಹಪುರ್ ಕಂಡಿ ಯೋಜನೆ, IIM ಜಮ್ಮು, ಜಮ್ಮು ಮತ್ತು ಕಾಶ್ಮೀರ ಎರಡೂ ವಿಭಾಗಗಳಲ್ಲಿನ ಹಲವಾರು ಪ್ರಮುಖ ರಸ್ತೆಗಳು ಮತ್ತು ಯೋಜನೆಗಳು ಪ್ರಧಾನಮಂತ್ರಿಯವರು ಉದ್ಘಾಟನೆ ಮಾಡಲಿರುವ ಯೋಜನೆಗಳಾಗಿವೆ.
ಇದರ ನಂತರ 48.1 ಕಿಲೋಮೀಟರ್ ಬನಿಹಾಲ್-ಖಾರಿ-ಸುಂಬರ್-ಸಂಗಲ್ದನ್ ವಿಭಾಗದಲ್ಲಿ ರೈಲು ಸೇವೆಗಳ ಉದ್ಘಾಟನೆ ನಡೆಯಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ವಿಭಾಗವು ಮೂರು ವಿಭಾಗಗಳನ್ನು ಒಳಗೊಂಡಿದೆ, ಖಾರಿ-ಸುಂಬರ್ 13.6 ಕಿಮೀ ಮತ್ತು ಸುಂಬರ್-ಸಂಗಲ್ದನ್ 19.5 ಕಿಮೀ ವ್ಯಾಪಿಸಿದೆ, ಇದರ ಪರಿಣಾಮವಾಗಿ ಒಟ್ಟು 33.42 ಕಿಮೀ ಉದ್ದದ ಮಾರ್ಗಕ್ಕೆ ರೈಲು ಸಂಚಾರ ಸಿಗಲಿದೆ.
ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಚೆನಾಬ್ ಸೇತುವೆಯನ್ನೂ ಪ್ರಧಾನಿ ಉದ್ಘಾಟಿಸಲಿದ್ದಾರೆ. ಇದು ರಿಯಾಸಿಯಲ್ಲಿ 1.3 ಕಿ.ಮೀ ವರೆಗೆ ವ್ಯಾಪಿಸಿದೆ, ಚೆನಾಬ್ ನದಿಯಿಂದ 359 ಮೀಟರ್ ಎತ್ತರದಲ್ಲಿ ಈ ಸೇತುವೆ ಇದ್ದು, ಐಫೆಲ್ ಟವರ್ ಎತ್ತರಕ್ಕಿಂತ ಇದು 35 ಮೀಟರ್ ಮೀರಿಸಿ, ಈ ಎಂಜಿನಿಯರಿಂಗ್ ಅದ್ಭುತವು ನಿಜವಾಗಿಯೂ ಆಧುನಿಕ ಆವಿಷ್ಕಾರಕ್ಕೆ ಸಾಕ್ಷಿಯಾಗಿದೆ.
ಮಹತ್ವಾಕಾಂಕ್ಷೆಯ USBRL (ಉದಮ್ಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ) ಯೋಜನೆಯ ಭಾಗವಾಗಿ, ಸಂಪೂರ್ಣ ರೈಲ್ವೆ ಜಾಲವನ್ನು 272 ಕಿಮೀ ದೂರವನ್ನು ಕ್ರಮಿಸಲು ವಿನ್ಯಾಸಗೊಳಿಸಲಾಗಿದೆ.
ಈ ಸೇತುವೆಯ ವಿಶೇಷವೇನು?
ಈ ಸೇತುವೆಯನ್ನು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಕತ್ರಾ-ಬನಿಹಾಲ್ ರೈಲು ವಿಭಾಗದಲ್ಲಿ ನಿರ್ಮಾಣಗೊಂಡಿದೆ. ಸುಮಾರು 1,315 ಮೀಟರ್ ಉದ್ದವಿದ್ದು, ಚೆನಾಬ್ ನದಿಯಿಂದ ಬರೋಬ್ಬರಿ 359 ಮೀಟರ್ ಎತ್ತರದಲ್ಲಿದೆ.
ಈ ಸೇತುವೆಯು 1,486 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ಇದು ವಿಶ್ವದ ಅತ್ಯಂತ ಎತ್ತರ ರೈಲು ಸೇತುವೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಈ ಮೊದಲು ಈ ಸೇತುವೆಯ ಫೋಟೋವನ್ನು ರೈಲ್ವೆ ಇಲಾಖೆ ಹಂಚಿಕೊಂಡಿತ್ತು. ಮೋಡಗಳಿಗಿಂತಲೂ ಮೇಲಿರುವ ಸೇತುವೆ ನೋಡಲು ಸುಂದರವಾಗಿ ಕಾಣುತ್ತಿತ್ತು. ಇದನ್ನು ಭಾರತೀಯ ರೈಲ್ವೆ ಇಂಜಿನಿಯರಿಂಗ್ನ ಅದ್ಭುತ ಎಂದು ಕರೆಯಲಾಗಿದೆ.



Click it and Unblock the Notifications