Latest Updates
-
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ!
ಲಕ್ಷ್ಮಿ ಕೋಪಿಸಿಕೊಳ್ಳುತ್ತಾಳೆ ಎಂದು ಹೇಳುವ ಈ ನಂಬಿಕೆಗಳನ್ನು ವೈಜ್ಞಾನಿಕ ದೃಷ್ಟಿಯಿಂದ ನೋಡಿದಾಗಲೂ ಅದು ಸತ್ಯ!
ನಮ್ಮ ದಿನ ನಿತ್ಯದ ಬದುಕಿನಲ್ಲಿ ನಾವು ಹಲವು ನಂಬಿಕೆಗಳನ್ನು ಪಾಲಿಸುತ್ತೇವೆ, ಕೆಲವೊಂದು ನಂಬಿಕೆಗಳನ್ನು ಯಾರೋ ಹೇಳಿದರು ಎಂದು ಪಾಲಿಸುತ್ತೇವೆ, ಉದಾಹರಣೆ ರಾತ್ರಿ ಹೊತ್ತಿನಲ್ಲಿ ಕಸ ಬಿಸಾಡಬಾರದು, ಹೀಗೆ ಹೇಳುವಾಗ ಏಕೆ ಹೀಗೆ ಮಾಡಬಾರದು ಎಂಬ ಪ್ರಶ್ನೆಗೆ ಲಕ್ಷ್ಮಿ ಮನೆಯಲ್ಲಿ ನೆಲೆಸಲ್ಲ ಎಂಬ ಉತ್ತರ ಬರುತ್ತದೆ, ಏಕೆ ಈ ರೀತಿ ಹೇಳುತ್ತಾರೆ, ಇದರ ಹಿಂದಿನ ವೈಜ್ಞಾನಿಕ ಕಾರಣಗಳೇನು? ಎಂದು ನೋಡೋಣ ಬನ್ನಿ:

ಹಲವರಿಗೆ ಈ ಅಭ್ಯಾಸ ಇದೆ, ಆದರೆ ಹೀಗೆ ತಿನ್ನುವುದನ್ನು ಮನೆಯಲ್ಲಿ ಹಿರಿಯರು ನೋಡಿದರೆ ಎಂಥ ಬುದ್ಧಿಯದು, ಹೀಗೆ ಮಾಡುವುದರಿಂದ ಮನೆಗೆ ದರಿದ್ರ ಬರುತ್ತದೆ ಎಂದು ಹೇಳುತ್ತಾರೆ. ಹಾಸಿಗೆಯಲ್ಲಿ ತಿನ್ನುವ ಅಭ್ಯಾಸ ಮನೆಗೆ ಅಶುಭ ನೆಮ್ಮದಿ ಇರಲ್ಲ ಎಂದು ಹೇಳುತ್ತಾರೆ. ಇದು ಮೂಡ ನಂಬಿಕೆಯಲ್ಲ ಸತ್ಯವೂ ಇದು, ಅಲ್ಲೇ ತಿನ್ನುವುದು, ಅಲ್ಲೇ ಮಲಗುವುದು ಮಾಡಿದರೆ ಎಷ್ಟು ಗಲೀಜು ಅನಿಸುತ್ತೆ ಅಲ್ವಾ? ಅಲ್ಲದೆ ನಾವು ತಿಂದ ಆಹಾರ ಹಾಸಿಗೆ ಮೇಲೆ ಬಿದ್ದರೆ ಹಾಸಿಗೆ ದುರ್ವಾಸನೆ ಬೀರುವುದು, ಇರುವೆ ಬರುವುದು, ಇದರಿಂದ ನೆಮ್ಮದಿಯ ನಿದ್ದೆ ದೂರಾಗುವುದು ಅಲ್ವಾ?
ಸೂರ್ಯಾಸ್ತದ ನಂತರ ಹಣದ ವಹಿವಾಟು ಮಾಡಬಾರದು
ತುಂಬಾ ಜನರು ಸೂರ್ಯಾಸ್ತದ ನಂತರ ಹಣದ ವಹಿವಾಟು ಮಾಡಲ್ಲ, ಲಕ್ಷ್ಮಿ ಮನೆಯಿಂದ ಹೊರಗೆ ಹೋಗುತ್ತಾಳೆ ಎಂಬ ನಂಬಿಕೆ. ಈ ನಂಬಿಕೆಯನ್ನು ಬದಿಗಿಟ್ಟು ವೈಜ್ಞಾನಿಕ ದೃಷ್ಟಿಯಿಂದ ನೋಡುವುದಾದರೆ ಈ ನಂಬಿಕೆ ಈ ಕಾಲಕ್ಕೆ ಅಷ್ಟು ಸೂಕ್ತವಲ್ಲ ಕಾಣುತ್ತೆ, ಹಿಂದೆಯಲ್ಲ ವಿದ್ಯುತ್ ಬೆಳಕು ಇಲ್ಲ, ಸೀಮೆಣ್ಣೆ ದೀಪ ಹಚ್ಚಿಡುತ್ತಿದ್ದರು, ಕತ್ತಲಾಗುತ್ತಿದ್ದಂತೆ ಏನೂ ಕಾಣುತ್ತಿರಲಿಲ್ಲ, ಈ ಸಮಯದಲ್ಲಿ ಹಣ ನೀಡಿದರೆ ಸರಿಯಾಗಿ ಕಾಣಿಸದೆ ಲೆಕ್ಕಾಚಾರದಲ್ಲಿ ತಪ್ಪಬಹುದು ಎಂದು ಈ ರೀತಿ ಹೇಳಿರಬಹುದು.
ಮರಗಳಿಂದ ಎಲೆಗಳನ್ನು ಕೀಳುವುದು, ಮನೆಯಿಂಲ್ಲಿ ಹಾವು ಅಥವಾ ಇತರ ವಿಷಕಾರಿ ಕೀಟವಿದ್ದರೆ ಕಾಣಿಸಲ್ಲ, ಕಸವನ್ನು ತೆಗೆದು ಹೊರಗಡೆ ಹಾಕಬಾರದು ಎಂದು ಹೇಳಿರುವುದರ ಹಿಂದೆ ಕೂಡ ಕಾರಣವಿದೆ, ಕಸ ಕುಡಿಸಿದಾಗ ಬೆಲೆ ಬಾಳುವ ವಸ್ತು ಬಿದ್ದದ್ದರೆ ಕಾಣಿಸದೆ ಬಿಸಾಡುತ್ತೇವೆ, ಈವಾಗ ಲೈಟ್ಸ್ ಇದೆ, ಬೆಳಕು ಚೆನ್ನಾಗಿ ಇರುತ್ತದೆ, ಆದರೂ ಈ ನಂಬಿಕೆ ಇನ್ನೂ ಬಲವಾಗಿದೆ.
ಅಡುಗೆ ಮನೆ ಸ್ವಚ್ಛವಾಗಿಡದಿರುವುದು
ಮಲಗುವ ಮುನ್ನ ಅಡುಗೆ ಮನೆ ಸ್ವಚ್ಛವಾಗಿಡದಿದ್ದರೆ ಲಕ್ಷ್ಮಿ ಕೋಪಿಸಿಕೊಳ್ಳುತ್ತಾಳೆ ಎಂದು ಹೇಳಲಾಗುವುದು, ಒಂದು ಲೆಕ್ಕದಲ್ಲಿ ಇದು ಸತ್ಯ ಕೂಡ. ಅಡುಗೆ ಮನೆಯನ್ನು ಗಲೀಜು ಬಿಟ್ಟು ಮಲಗಿದರೆ ಕೀಟ, ಜಿರಳೆ ಇವುಗಳ ಕಾಡ ಹೆಚ್ಚುವುದು, ಇದರಿಂದ ಆರೋಗ್ಯ ಕೈ ಕೊಡುತ್ತೆ, ಹಣ ಖರ್ಚಾಗುವುದು. ಇನ್ನು ಅಡುಗೆ ಮನೆಯಲ್ಲಿರವ ಸಾಮಗ್ರಿಗಳಿಗೆ ಹುಳ ಬಂದರೆ ಅದು ಕೂಡ ವ್ಯರ್ಥವಾಗಿ ಹಣ ನಷ್ಟವಾಗುವುದು, ಆದ್ದರಿಂದ ಲಕ್ಷ್ಮಿ ಕೋಪಿಸಿಕೊಳ್ಳುವುದು ನಿಜ ಮಾತ್ರ ಅಲ್ವಾ?
ರಾತ್ರಿ ಬಟ್ಟೆ ಒಗೆಯುವುದು:
ಬಟ್ಟೆ ಒಗೆಯುವುದು ಶನಿ ಎಂದು ಹೇಳಲಾಗುವುದು, 6 ಗಂಟೆಯ ಬಳಿಕ ಬಟ್ಟೆ ಒಗೆಯಬಾರದು ಎಂದು ಹೇಳುತ್ತಾರೆ. ಹಣ ನಷ್ಟವಾಗುವುದು ಎಂದು ಹೇಳುತ್ತಾರೆ. ನಾವು ವೈಜ್ಞಾನಿಕ ದೃಷ್ಟಿಯಿಂದ ನೋಡುವುದಾದರೆ ಕತ್ತಲಲ್ಲಿ ಬಟ್ಟೆ ಒಗೆದರೆ ಕೊಳೆ ಹೋಗಿದೆಯೇ ಗೊತ್ತಾ ಶ್ರಮ, ನೀರು, ಸೋಪು ವ್ಯರ್ಥವಾಗುವುದು. ಇಗಂತೂ ವಾಷಿಂಗ್ ಮೆಷಿನ್ ಕಾಲ, ಅದಕ್ಕೆ ಇಂಥ ನಂಬಿಕೆ ಸೂಟ್ ಆಗಲ್ಲ ಅಲ್ವಾ?
ಈಗ ಹೇಳಿ ಆಗಿನಿಂದ ನಂಬಿಕೊಂಡು ಬಂದಿರುವ ಈ ನಂಬಿಕೆಗಳ ಹಿಂದೆ ಒಳ್ಳೆಯ ಕಾರಣ ಇದೆ ಅಲ್ವಾ?



Click it and Unblock the Notifications