Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ನವೆಂಬರ್ 9, ರಾಮ ಏಕಾದಶಿಯಂದುಈ ಕಾರ್ಯಗಳನ್ನು ಮಾಡಲೇಬೇಡಿ
ನವೆಂಬರ್ 9ಕ್ಕೆ ರಾಮ ಏಕಾದಶಿಯನ್ನು ಆಚರಿಸಲಾಗುವುದು. ಪ್ರತಿಯೊಂದು ಏಕಾದಶಿಗೂ ಅದರದ್ದೇ ಆದ ಮಹತ್ವವಿದೆ, ಅದರಂತೆ ರಾಮ ಏಕಾದಶಿಯನ್ನು ಯಾರು ಆಚರಿಸುತ್ತಾರೋ ಅವರು ಬ್ರಹ್ಮ ಹತ್ಯೆಯಂಥ ಪಾಪದಿಂದಲೂ ಮುಕ್ತಿ ಪಡೆಯುತ್ತಾರೆ ಎಂದು ಹೇಳಲಾಗುವುದು. ಈ ದಿನ ಶ್ರೀ ವಿಷ್ಣುವಿನ ಜೊತೆಗೆ ಲಕ್ಷ್ಮಿಯನ್ನೂ ಆರಾಧನೆ ಮಾಡಲಾಗುವುದು.
ರಾಮ ಏಕಾದಶಿಯನ್ನು ರಂಭಾ ಏಕಾದಶಿ ಅಥವಾ ಆಶ್ವಯುಜ ಕೃಷ್ಣ ಏಕಾದಶಿ ಎಂದು ಕರೆಯಲಾಗುತ್ತದೆ. ಯಾರು ರಾಮ ಏಕಾದಶಿ ವೃತವನ್ನು ಮಾಡುತ್ತಾರೋ ಅದು ಸಾವಿರ ಅಶ್ವಮೇಧ ಯಾಗವನ್ನು ಮಾಡಿರುವುದಕ್ಕೆ ಸಮನಾಗಿರುತ್ತದೆ ಎಂದಯ ಹೇಳಲಾಗುವುದು.

ರಾಮ ಏಕಾದಶಿ ಪೂಜಾ ಮುಹೂರ್ತ
ಏಕಾದಶಿ ತಿಥಿ ಪಾರಂಭ ನವೆಂಬರ್ 08 ಬೆಳಗ್ಗೆ 08:25ಕ್ಕೆ
ಮುಕ್ತಾಯ ನವೆಂಬರ್ 09 ಬೆಳಗ್ಗೆ 10:44ಕ್ಕೆ
ಉದಯ ತಿಥಿ ಪ್ರಕಾರ ಏಕಾದಶಿ ನವೆಂಬರ್ 9ರಂದು ಆಚರಿಸಲಾಗುವುದು.
ಉಪವಾಸವನ್ನು ನವೆಂಬರ್ 10ರಂದು ಬೆಳಗ್ಗೆ 06:39ರಿಂದ 08:49ರ ನಡುವೆ ಮುರಿಯಬಹುದು.
ರಾಮ ಏಕಾದಶಿಯಂದು ಈ ಕಾರ್ಯಗಳನ್ನು ಮಾಡಲೇಬಾರದು?
* ಇಂದು ತುಳಸಿ ಎಲೆಗಳನ್ನು ಗಿಡವನ್ನು ಕೀಳಬಾರದು
* ಈ ದಿನ ಮನೆ ಗುಡಿಸಬಾರದು, ಏಕಾದಶಿಗೆ ಮುನ್ನವೇ ಮನೆ ಶುದ್ಧವಾಗಿರಬೇಕು. ಈ ದಿನ ಮನೆ ಗುಡಿಸಿದಾಗ ಹುಳಗಳ, ಇರುವೆಗಳು ಸಾಯುತ್ತವೆ, ಯಾವ ಪ್ರಾಣಿಗೂ ನೋವುಂಟು ಮಾಡಬಾರದು
* ಮಾಂಸಾಹಾರ ಮಾಡಬಾರದು, ಪ್ರಾಣಿಗಳ ವಧೆ ಮಾಡಬಾರದು
* ಈ ದಿನ ಕೂದಲು ಕತ್ತರಿಸುವುದು, ಉಗುರು ಕತ್ತರಿಸುವುದು ಮಾಡಬಾರದು
* ಈ ದಿನ ಅಕ್ಕಿಯಿಂದ ಮಾಡಿದ ಆಹಾರ ಪದಾರ್ಥ ಸೇವಿಸಬಾರದು
* ಕೆಟ್ಟ ಆಲೋಚನೆ ಮಾಡಬಾರದು
* ಮನೆಗೆ ಭಿಕ್ಷೆ ಕೇಳಲು ಬಂದವರನ್ನು ಬರಿಗೈಯಲ್ಲಿ ಕಳುಹಿಸಬಾರದು.
ಈ ದಿನ ಕೆಲವೊಂದು ಪರಿಹಾರಗಳನ್ನು ಕೂಡ ಕಂಡುಕೊಳ್ಳಬಹುದು
ವೈವಾಹಿಕ ಜೀವನ ಖುಷಿಯಾಗಿರಲು
ಈ ದಿನ ತುಳಸಿ ಎಲೆಗಳನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ಕಪಾಟಿನಲ್ಲಿಟ್ಟು ನಂತರ ಶುಕ್ರವಾರ ಲಕ್ಷ್ಮಿ ಪೂಜೆ ಮಾಡುವಾಗ ಶ್ರೀ ವಿಷ್ಣು, ಲಕ್ಷ್ಮಿಗೆ ಅರ್ಪಿಸಿದರೆ ವೈವಾಹಿಕ ಜೀವನ ಚೆನ್ನಾಗಿರುತ್ತದೆ.
ಆದಾಯ ಹೆಚ್ಚಾಗಲು
ಇಂದು ಪೂಜೆಗೆ ಬಳಸಿದ ತುಳಸಿ ಎಲೆಗಳನ್ನು ನಿಮ್ಮ ಪರ್ಸ್ನಲ್ಲಿ ಇಡಿ, ಹೀಗೆ ಮಾಡುವುದರಿಂದ ಲಕ್ಷ್ಮಿ ಕೃಪೆಯಿಂದ ಸಾಲಗಳಿಂದ ಮುಕ್ತರಾಗುತ್ತೀರಿ, ಆರ್ಥಿಕ ಆದಾಯ ಹೆಚ್ಚಾಗುವುದು.
ಉದ್ಯೋಗ ಬಡ್ತಿಗಾಗಿ
ಈ ದಿನ ಕೆಂಪು ಬಟ್ಟೆಯಲ್ಲಿ ನಾಣ್ಯಗಳನ್ನು ಹಾಕಿ ಪೂಜೆಗೆ ಇಟ್ಟು ನಂತರ ಆ ನಾಣ್ಯಗಳನ್ನು ನಮ್ಮ ಬಳಿ ಇಟ್ಟುಕೊಳ್ಳುವುದರಿಂದ ಬಡ್ತಿ ದೊರೆಯಲಿದೆ.



Click it and Unblock the Notifications