Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ನವೆಂಬರ್ 9, ರಾಮ ಏಕಾದಶಿಯಂದುಈ ಕಾರ್ಯಗಳನ್ನು ಮಾಡಲೇಬೇಡಿ
ನವೆಂಬರ್ 9ಕ್ಕೆ ರಾಮ ಏಕಾದಶಿಯನ್ನು ಆಚರಿಸಲಾಗುವುದು. ಪ್ರತಿಯೊಂದು ಏಕಾದಶಿಗೂ ಅದರದ್ದೇ ಆದ ಮಹತ್ವವಿದೆ, ಅದರಂತೆ ರಾಮ ಏಕಾದಶಿಯನ್ನು ಯಾರು ಆಚರಿಸುತ್ತಾರೋ ಅವರು ಬ್ರಹ್ಮ ಹತ್ಯೆಯಂಥ ಪಾಪದಿಂದಲೂ ಮುಕ್ತಿ ಪಡೆಯುತ್ತಾರೆ ಎಂದು ಹೇಳಲಾಗುವುದು. ಈ ದಿನ ಶ್ರೀ ವಿಷ್ಣುವಿನ ಜೊತೆಗೆ ಲಕ್ಷ್ಮಿಯನ್ನೂ ಆರಾಧನೆ ಮಾಡಲಾಗುವುದು.
ರಾಮ ಏಕಾದಶಿಯನ್ನು ರಂಭಾ ಏಕಾದಶಿ ಅಥವಾ ಆಶ್ವಯುಜ ಕೃಷ್ಣ ಏಕಾದಶಿ ಎಂದು ಕರೆಯಲಾಗುತ್ತದೆ. ಯಾರು ರಾಮ ಏಕಾದಶಿ ವೃತವನ್ನು ಮಾಡುತ್ತಾರೋ ಅದು ಸಾವಿರ ಅಶ್ವಮೇಧ ಯಾಗವನ್ನು ಮಾಡಿರುವುದಕ್ಕೆ ಸಮನಾಗಿರುತ್ತದೆ ಎಂದಯ ಹೇಳಲಾಗುವುದು.

ರಾಮ ಏಕಾದಶಿ ಪೂಜಾ ಮುಹೂರ್ತ
ಏಕಾದಶಿ ತಿಥಿ ಪಾರಂಭ ನವೆಂಬರ್ 08 ಬೆಳಗ್ಗೆ 08:25ಕ್ಕೆ
ಮುಕ್ತಾಯ ನವೆಂಬರ್ 09 ಬೆಳಗ್ಗೆ 10:44ಕ್ಕೆ
ಉದಯ ತಿಥಿ ಪ್ರಕಾರ ಏಕಾದಶಿ ನವೆಂಬರ್ 9ರಂದು ಆಚರಿಸಲಾಗುವುದು.
ಉಪವಾಸವನ್ನು ನವೆಂಬರ್ 10ರಂದು ಬೆಳಗ್ಗೆ 06:39ರಿಂದ 08:49ರ ನಡುವೆ ಮುರಿಯಬಹುದು.
ರಾಮ ಏಕಾದಶಿಯಂದು ಈ ಕಾರ್ಯಗಳನ್ನು ಮಾಡಲೇಬಾರದು?
* ಇಂದು ತುಳಸಿ ಎಲೆಗಳನ್ನು ಗಿಡವನ್ನು ಕೀಳಬಾರದು
* ಈ ದಿನ ಮನೆ ಗುಡಿಸಬಾರದು, ಏಕಾದಶಿಗೆ ಮುನ್ನವೇ ಮನೆ ಶುದ್ಧವಾಗಿರಬೇಕು. ಈ ದಿನ ಮನೆ ಗುಡಿಸಿದಾಗ ಹುಳಗಳ, ಇರುವೆಗಳು ಸಾಯುತ್ತವೆ, ಯಾವ ಪ್ರಾಣಿಗೂ ನೋವುಂಟು ಮಾಡಬಾರದು
* ಮಾಂಸಾಹಾರ ಮಾಡಬಾರದು, ಪ್ರಾಣಿಗಳ ವಧೆ ಮಾಡಬಾರದು
* ಈ ದಿನ ಕೂದಲು ಕತ್ತರಿಸುವುದು, ಉಗುರು ಕತ್ತರಿಸುವುದು ಮಾಡಬಾರದು
* ಈ ದಿನ ಅಕ್ಕಿಯಿಂದ ಮಾಡಿದ ಆಹಾರ ಪದಾರ್ಥ ಸೇವಿಸಬಾರದು
* ಕೆಟ್ಟ ಆಲೋಚನೆ ಮಾಡಬಾರದು
* ಮನೆಗೆ ಭಿಕ್ಷೆ ಕೇಳಲು ಬಂದವರನ್ನು ಬರಿಗೈಯಲ್ಲಿ ಕಳುಹಿಸಬಾರದು.
ಈ ದಿನ ಕೆಲವೊಂದು ಪರಿಹಾರಗಳನ್ನು ಕೂಡ ಕಂಡುಕೊಳ್ಳಬಹುದು
ವೈವಾಹಿಕ ಜೀವನ ಖುಷಿಯಾಗಿರಲು
ಈ ದಿನ ತುಳಸಿ ಎಲೆಗಳನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ಕಪಾಟಿನಲ್ಲಿಟ್ಟು ನಂತರ ಶುಕ್ರವಾರ ಲಕ್ಷ್ಮಿ ಪೂಜೆ ಮಾಡುವಾಗ ಶ್ರೀ ವಿಷ್ಣು, ಲಕ್ಷ್ಮಿಗೆ ಅರ್ಪಿಸಿದರೆ ವೈವಾಹಿಕ ಜೀವನ ಚೆನ್ನಾಗಿರುತ್ತದೆ.
ಆದಾಯ ಹೆಚ್ಚಾಗಲು
ಇಂದು ಪೂಜೆಗೆ ಬಳಸಿದ ತುಳಸಿ ಎಲೆಗಳನ್ನು ನಿಮ್ಮ ಪರ್ಸ್ನಲ್ಲಿ ಇಡಿ, ಹೀಗೆ ಮಾಡುವುದರಿಂದ ಲಕ್ಷ್ಮಿ ಕೃಪೆಯಿಂದ ಸಾಲಗಳಿಂದ ಮುಕ್ತರಾಗುತ್ತೀರಿ, ಆರ್ಥಿಕ ಆದಾಯ ಹೆಚ್ಚಾಗುವುದು.
ಉದ್ಯೋಗ ಬಡ್ತಿಗಾಗಿ
ಈ ದಿನ ಕೆಂಪು ಬಟ್ಟೆಯಲ್ಲಿ ನಾಣ್ಯಗಳನ್ನು ಹಾಕಿ ಪೂಜೆಗೆ ಇಟ್ಟು ನಂತರ ಆ ನಾಣ್ಯಗಳನ್ನು ನಮ್ಮ ಬಳಿ ಇಟ್ಟುಕೊಳ್ಳುವುದರಿಂದ ಬಡ್ತಿ ದೊರೆಯಲಿದೆ.



Click it and Unblock the Notifications