Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ನವೆಂಬರ್ 9, ರಾಮ ಏಕಾದಶಿಯಂದುಈ ಕಾರ್ಯಗಳನ್ನು ಮಾಡಲೇಬೇಡಿ
ನವೆಂಬರ್ 9ಕ್ಕೆ ರಾಮ ಏಕಾದಶಿಯನ್ನು ಆಚರಿಸಲಾಗುವುದು. ಪ್ರತಿಯೊಂದು ಏಕಾದಶಿಗೂ ಅದರದ್ದೇ ಆದ ಮಹತ್ವವಿದೆ, ಅದರಂತೆ ರಾಮ ಏಕಾದಶಿಯನ್ನು ಯಾರು ಆಚರಿಸುತ್ತಾರೋ ಅವರು ಬ್ರಹ್ಮ ಹತ್ಯೆಯಂಥ ಪಾಪದಿಂದಲೂ ಮುಕ್ತಿ ಪಡೆಯುತ್ತಾರೆ ಎಂದು ಹೇಳಲಾಗುವುದು. ಈ ದಿನ ಶ್ರೀ ವಿಷ್ಣುವಿನ ಜೊತೆಗೆ ಲಕ್ಷ್ಮಿಯನ್ನೂ ಆರಾಧನೆ ಮಾಡಲಾಗುವುದು.
ರಾಮ ಏಕಾದಶಿಯನ್ನು ರಂಭಾ ಏಕಾದಶಿ ಅಥವಾ ಆಶ್ವಯುಜ ಕೃಷ್ಣ ಏಕಾದಶಿ ಎಂದು ಕರೆಯಲಾಗುತ್ತದೆ. ಯಾರು ರಾಮ ಏಕಾದಶಿ ವೃತವನ್ನು ಮಾಡುತ್ತಾರೋ ಅದು ಸಾವಿರ ಅಶ್ವಮೇಧ ಯಾಗವನ್ನು ಮಾಡಿರುವುದಕ್ಕೆ ಸಮನಾಗಿರುತ್ತದೆ ಎಂದಯ ಹೇಳಲಾಗುವುದು.

ರಾಮ ಏಕಾದಶಿ ಪೂಜಾ ಮುಹೂರ್ತ
ಏಕಾದಶಿ ತಿಥಿ ಪಾರಂಭ ನವೆಂಬರ್ 08 ಬೆಳಗ್ಗೆ 08:25ಕ್ಕೆ
ಮುಕ್ತಾಯ ನವೆಂಬರ್ 09 ಬೆಳಗ್ಗೆ 10:44ಕ್ಕೆ
ಉದಯ ತಿಥಿ ಪ್ರಕಾರ ಏಕಾದಶಿ ನವೆಂಬರ್ 9ರಂದು ಆಚರಿಸಲಾಗುವುದು.
ಉಪವಾಸವನ್ನು ನವೆಂಬರ್ 10ರಂದು ಬೆಳಗ್ಗೆ 06:39ರಿಂದ 08:49ರ ನಡುವೆ ಮುರಿಯಬಹುದು.
ರಾಮ ಏಕಾದಶಿಯಂದು ಈ ಕಾರ್ಯಗಳನ್ನು ಮಾಡಲೇಬಾರದು?
* ಇಂದು ತುಳಸಿ ಎಲೆಗಳನ್ನು ಗಿಡವನ್ನು ಕೀಳಬಾರದು
* ಈ ದಿನ ಮನೆ ಗುಡಿಸಬಾರದು, ಏಕಾದಶಿಗೆ ಮುನ್ನವೇ ಮನೆ ಶುದ್ಧವಾಗಿರಬೇಕು. ಈ ದಿನ ಮನೆ ಗುಡಿಸಿದಾಗ ಹುಳಗಳ, ಇರುವೆಗಳು ಸಾಯುತ್ತವೆ, ಯಾವ ಪ್ರಾಣಿಗೂ ನೋವುಂಟು ಮಾಡಬಾರದು
* ಮಾಂಸಾಹಾರ ಮಾಡಬಾರದು, ಪ್ರಾಣಿಗಳ ವಧೆ ಮಾಡಬಾರದು
* ಈ ದಿನ ಕೂದಲು ಕತ್ತರಿಸುವುದು, ಉಗುರು ಕತ್ತರಿಸುವುದು ಮಾಡಬಾರದು
* ಈ ದಿನ ಅಕ್ಕಿಯಿಂದ ಮಾಡಿದ ಆಹಾರ ಪದಾರ್ಥ ಸೇವಿಸಬಾರದು
* ಕೆಟ್ಟ ಆಲೋಚನೆ ಮಾಡಬಾರದು
* ಮನೆಗೆ ಭಿಕ್ಷೆ ಕೇಳಲು ಬಂದವರನ್ನು ಬರಿಗೈಯಲ್ಲಿ ಕಳುಹಿಸಬಾರದು.
ಈ ದಿನ ಕೆಲವೊಂದು ಪರಿಹಾರಗಳನ್ನು ಕೂಡ ಕಂಡುಕೊಳ್ಳಬಹುದು
ವೈವಾಹಿಕ ಜೀವನ ಖುಷಿಯಾಗಿರಲು
ಈ ದಿನ ತುಳಸಿ ಎಲೆಗಳನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ಕಪಾಟಿನಲ್ಲಿಟ್ಟು ನಂತರ ಶುಕ್ರವಾರ ಲಕ್ಷ್ಮಿ ಪೂಜೆ ಮಾಡುವಾಗ ಶ್ರೀ ವಿಷ್ಣು, ಲಕ್ಷ್ಮಿಗೆ ಅರ್ಪಿಸಿದರೆ ವೈವಾಹಿಕ ಜೀವನ ಚೆನ್ನಾಗಿರುತ್ತದೆ.
ಆದಾಯ ಹೆಚ್ಚಾಗಲು
ಇಂದು ಪೂಜೆಗೆ ಬಳಸಿದ ತುಳಸಿ ಎಲೆಗಳನ್ನು ನಿಮ್ಮ ಪರ್ಸ್ನಲ್ಲಿ ಇಡಿ, ಹೀಗೆ ಮಾಡುವುದರಿಂದ ಲಕ್ಷ್ಮಿ ಕೃಪೆಯಿಂದ ಸಾಲಗಳಿಂದ ಮುಕ್ತರಾಗುತ್ತೀರಿ, ಆರ್ಥಿಕ ಆದಾಯ ಹೆಚ್ಚಾಗುವುದು.
ಉದ್ಯೋಗ ಬಡ್ತಿಗಾಗಿ
ಈ ದಿನ ಕೆಂಪು ಬಟ್ಟೆಯಲ್ಲಿ ನಾಣ್ಯಗಳನ್ನು ಹಾಕಿ ಪೂಜೆಗೆ ಇಟ್ಟು ನಂತರ ಆ ನಾಣ್ಯಗಳನ್ನು ನಮ್ಮ ಬಳಿ ಇಟ್ಟುಕೊಳ್ಳುವುದರಿಂದ ಬಡ್ತಿ ದೊರೆಯಲಿದೆ.



Click it and Unblock the Notifications