Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ನವೆಂಬರ್ 9, ರಾಮ ಏಕಾದಶಿಯಂದುಈ ಕಾರ್ಯಗಳನ್ನು ಮಾಡಲೇಬೇಡಿ
ನವೆಂಬರ್ 9ಕ್ಕೆ ರಾಮ ಏಕಾದಶಿಯನ್ನು ಆಚರಿಸಲಾಗುವುದು. ಪ್ರತಿಯೊಂದು ಏಕಾದಶಿಗೂ ಅದರದ್ದೇ ಆದ ಮಹತ್ವವಿದೆ, ಅದರಂತೆ ರಾಮ ಏಕಾದಶಿಯನ್ನು ಯಾರು ಆಚರಿಸುತ್ತಾರೋ ಅವರು ಬ್ರಹ್ಮ ಹತ್ಯೆಯಂಥ ಪಾಪದಿಂದಲೂ ಮುಕ್ತಿ ಪಡೆಯುತ್ತಾರೆ ಎಂದು ಹೇಳಲಾಗುವುದು. ಈ ದಿನ ಶ್ರೀ ವಿಷ್ಣುವಿನ ಜೊತೆಗೆ ಲಕ್ಷ್ಮಿಯನ್ನೂ ಆರಾಧನೆ ಮಾಡಲಾಗುವುದು.
ರಾಮ ಏಕಾದಶಿಯನ್ನು ರಂಭಾ ಏಕಾದಶಿ ಅಥವಾ ಆಶ್ವಯುಜ ಕೃಷ್ಣ ಏಕಾದಶಿ ಎಂದು ಕರೆಯಲಾಗುತ್ತದೆ. ಯಾರು ರಾಮ ಏಕಾದಶಿ ವೃತವನ್ನು ಮಾಡುತ್ತಾರೋ ಅದು ಸಾವಿರ ಅಶ್ವಮೇಧ ಯಾಗವನ್ನು ಮಾಡಿರುವುದಕ್ಕೆ ಸಮನಾಗಿರುತ್ತದೆ ಎಂದಯ ಹೇಳಲಾಗುವುದು.

ರಾಮ ಏಕಾದಶಿ ಪೂಜಾ ಮುಹೂರ್ತ
ಏಕಾದಶಿ ತಿಥಿ ಪಾರಂಭ ನವೆಂಬರ್ 08 ಬೆಳಗ್ಗೆ 08:25ಕ್ಕೆ
ಮುಕ್ತಾಯ ನವೆಂಬರ್ 09 ಬೆಳಗ್ಗೆ 10:44ಕ್ಕೆ
ಉದಯ ತಿಥಿ ಪ್ರಕಾರ ಏಕಾದಶಿ ನವೆಂಬರ್ 9ರಂದು ಆಚರಿಸಲಾಗುವುದು.
ಉಪವಾಸವನ್ನು ನವೆಂಬರ್ 10ರಂದು ಬೆಳಗ್ಗೆ 06:39ರಿಂದ 08:49ರ ನಡುವೆ ಮುರಿಯಬಹುದು.
ರಾಮ ಏಕಾದಶಿಯಂದು ಈ ಕಾರ್ಯಗಳನ್ನು ಮಾಡಲೇಬಾರದು?
* ಇಂದು ತುಳಸಿ ಎಲೆಗಳನ್ನು ಗಿಡವನ್ನು ಕೀಳಬಾರದು
* ಈ ದಿನ ಮನೆ ಗುಡಿಸಬಾರದು, ಏಕಾದಶಿಗೆ ಮುನ್ನವೇ ಮನೆ ಶುದ್ಧವಾಗಿರಬೇಕು. ಈ ದಿನ ಮನೆ ಗುಡಿಸಿದಾಗ ಹುಳಗಳ, ಇರುವೆಗಳು ಸಾಯುತ್ತವೆ, ಯಾವ ಪ್ರಾಣಿಗೂ ನೋವುಂಟು ಮಾಡಬಾರದು
* ಮಾಂಸಾಹಾರ ಮಾಡಬಾರದು, ಪ್ರಾಣಿಗಳ ವಧೆ ಮಾಡಬಾರದು
* ಈ ದಿನ ಕೂದಲು ಕತ್ತರಿಸುವುದು, ಉಗುರು ಕತ್ತರಿಸುವುದು ಮಾಡಬಾರದು
* ಈ ದಿನ ಅಕ್ಕಿಯಿಂದ ಮಾಡಿದ ಆಹಾರ ಪದಾರ್ಥ ಸೇವಿಸಬಾರದು
* ಕೆಟ್ಟ ಆಲೋಚನೆ ಮಾಡಬಾರದು
* ಮನೆಗೆ ಭಿಕ್ಷೆ ಕೇಳಲು ಬಂದವರನ್ನು ಬರಿಗೈಯಲ್ಲಿ ಕಳುಹಿಸಬಾರದು.
ಈ ದಿನ ಕೆಲವೊಂದು ಪರಿಹಾರಗಳನ್ನು ಕೂಡ ಕಂಡುಕೊಳ್ಳಬಹುದು
ವೈವಾಹಿಕ ಜೀವನ ಖುಷಿಯಾಗಿರಲು
ಈ ದಿನ ತುಳಸಿ ಎಲೆಗಳನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ಕಪಾಟಿನಲ್ಲಿಟ್ಟು ನಂತರ ಶುಕ್ರವಾರ ಲಕ್ಷ್ಮಿ ಪೂಜೆ ಮಾಡುವಾಗ ಶ್ರೀ ವಿಷ್ಣು, ಲಕ್ಷ್ಮಿಗೆ ಅರ್ಪಿಸಿದರೆ ವೈವಾಹಿಕ ಜೀವನ ಚೆನ್ನಾಗಿರುತ್ತದೆ.
ಆದಾಯ ಹೆಚ್ಚಾಗಲು
ಇಂದು ಪೂಜೆಗೆ ಬಳಸಿದ ತುಳಸಿ ಎಲೆಗಳನ್ನು ನಿಮ್ಮ ಪರ್ಸ್ನಲ್ಲಿ ಇಡಿ, ಹೀಗೆ ಮಾಡುವುದರಿಂದ ಲಕ್ಷ್ಮಿ ಕೃಪೆಯಿಂದ ಸಾಲಗಳಿಂದ ಮುಕ್ತರಾಗುತ್ತೀರಿ, ಆರ್ಥಿಕ ಆದಾಯ ಹೆಚ್ಚಾಗುವುದು.
ಉದ್ಯೋಗ ಬಡ್ತಿಗಾಗಿ
ಈ ದಿನ ಕೆಂಪು ಬಟ್ಟೆಯಲ್ಲಿ ನಾಣ್ಯಗಳನ್ನು ಹಾಕಿ ಪೂಜೆಗೆ ಇಟ್ಟು ನಂತರ ಆ ನಾಣ್ಯಗಳನ್ನು ನಮ್ಮ ಬಳಿ ಇಟ್ಟುಕೊಳ್ಳುವುದರಿಂದ ಬಡ್ತಿ ದೊರೆಯಲಿದೆ.



Click it and Unblock the Notifications
