Latest Updates
-
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು
ನವೆಂಬರ್ 9, ರಾಮ ಏಕಾದಶಿಯಂದುಈ ಕಾರ್ಯಗಳನ್ನು ಮಾಡಲೇಬೇಡಿ
ನವೆಂಬರ್ 9ಕ್ಕೆ ರಾಮ ಏಕಾದಶಿಯನ್ನು ಆಚರಿಸಲಾಗುವುದು. ಪ್ರತಿಯೊಂದು ಏಕಾದಶಿಗೂ ಅದರದ್ದೇ ಆದ ಮಹತ್ವವಿದೆ, ಅದರಂತೆ ರಾಮ ಏಕಾದಶಿಯನ್ನು ಯಾರು ಆಚರಿಸುತ್ತಾರೋ ಅವರು ಬ್ರಹ್ಮ ಹತ್ಯೆಯಂಥ ಪಾಪದಿಂದಲೂ ಮುಕ್ತಿ ಪಡೆಯುತ್ತಾರೆ ಎಂದು ಹೇಳಲಾಗುವುದು. ಈ ದಿನ ಶ್ರೀ ವಿಷ್ಣುವಿನ ಜೊತೆಗೆ ಲಕ್ಷ್ಮಿಯನ್ನೂ ಆರಾಧನೆ ಮಾಡಲಾಗುವುದು.
ರಾಮ ಏಕಾದಶಿಯನ್ನು ರಂಭಾ ಏಕಾದಶಿ ಅಥವಾ ಆಶ್ವಯುಜ ಕೃಷ್ಣ ಏಕಾದಶಿ ಎಂದು ಕರೆಯಲಾಗುತ್ತದೆ. ಯಾರು ರಾಮ ಏಕಾದಶಿ ವೃತವನ್ನು ಮಾಡುತ್ತಾರೋ ಅದು ಸಾವಿರ ಅಶ್ವಮೇಧ ಯಾಗವನ್ನು ಮಾಡಿರುವುದಕ್ಕೆ ಸಮನಾಗಿರುತ್ತದೆ ಎಂದಯ ಹೇಳಲಾಗುವುದು.

ರಾಮ ಏಕಾದಶಿ ಪೂಜಾ ಮುಹೂರ್ತ
ಏಕಾದಶಿ ತಿಥಿ ಪಾರಂಭ ನವೆಂಬರ್ 08 ಬೆಳಗ್ಗೆ 08:25ಕ್ಕೆ
ಮುಕ್ತಾಯ ನವೆಂಬರ್ 09 ಬೆಳಗ್ಗೆ 10:44ಕ್ಕೆ
ಉದಯ ತಿಥಿ ಪ್ರಕಾರ ಏಕಾದಶಿ ನವೆಂಬರ್ 9ರಂದು ಆಚರಿಸಲಾಗುವುದು.
ಉಪವಾಸವನ್ನು ನವೆಂಬರ್ 10ರಂದು ಬೆಳಗ್ಗೆ 06:39ರಿಂದ 08:49ರ ನಡುವೆ ಮುರಿಯಬಹುದು.
ರಾಮ ಏಕಾದಶಿಯಂದು ಈ ಕಾರ್ಯಗಳನ್ನು ಮಾಡಲೇಬಾರದು?
* ಇಂದು ತುಳಸಿ ಎಲೆಗಳನ್ನು ಗಿಡವನ್ನು ಕೀಳಬಾರದು
* ಈ ದಿನ ಮನೆ ಗುಡಿಸಬಾರದು, ಏಕಾದಶಿಗೆ ಮುನ್ನವೇ ಮನೆ ಶುದ್ಧವಾಗಿರಬೇಕು. ಈ ದಿನ ಮನೆ ಗುಡಿಸಿದಾಗ ಹುಳಗಳ, ಇರುವೆಗಳು ಸಾಯುತ್ತವೆ, ಯಾವ ಪ್ರಾಣಿಗೂ ನೋವುಂಟು ಮಾಡಬಾರದು
* ಮಾಂಸಾಹಾರ ಮಾಡಬಾರದು, ಪ್ರಾಣಿಗಳ ವಧೆ ಮಾಡಬಾರದು
* ಈ ದಿನ ಕೂದಲು ಕತ್ತರಿಸುವುದು, ಉಗುರು ಕತ್ತರಿಸುವುದು ಮಾಡಬಾರದು
* ಈ ದಿನ ಅಕ್ಕಿಯಿಂದ ಮಾಡಿದ ಆಹಾರ ಪದಾರ್ಥ ಸೇವಿಸಬಾರದು
* ಕೆಟ್ಟ ಆಲೋಚನೆ ಮಾಡಬಾರದು
* ಮನೆಗೆ ಭಿಕ್ಷೆ ಕೇಳಲು ಬಂದವರನ್ನು ಬರಿಗೈಯಲ್ಲಿ ಕಳುಹಿಸಬಾರದು.
ಈ ದಿನ ಕೆಲವೊಂದು ಪರಿಹಾರಗಳನ್ನು ಕೂಡ ಕಂಡುಕೊಳ್ಳಬಹುದು
ವೈವಾಹಿಕ ಜೀವನ ಖುಷಿಯಾಗಿರಲು
ಈ ದಿನ ತುಳಸಿ ಎಲೆಗಳನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ಕಪಾಟಿನಲ್ಲಿಟ್ಟು ನಂತರ ಶುಕ್ರವಾರ ಲಕ್ಷ್ಮಿ ಪೂಜೆ ಮಾಡುವಾಗ ಶ್ರೀ ವಿಷ್ಣು, ಲಕ್ಷ್ಮಿಗೆ ಅರ್ಪಿಸಿದರೆ ವೈವಾಹಿಕ ಜೀವನ ಚೆನ್ನಾಗಿರುತ್ತದೆ.
ಆದಾಯ ಹೆಚ್ಚಾಗಲು
ಇಂದು ಪೂಜೆಗೆ ಬಳಸಿದ ತುಳಸಿ ಎಲೆಗಳನ್ನು ನಿಮ್ಮ ಪರ್ಸ್ನಲ್ಲಿ ಇಡಿ, ಹೀಗೆ ಮಾಡುವುದರಿಂದ ಲಕ್ಷ್ಮಿ ಕೃಪೆಯಿಂದ ಸಾಲಗಳಿಂದ ಮುಕ್ತರಾಗುತ್ತೀರಿ, ಆರ್ಥಿಕ ಆದಾಯ ಹೆಚ್ಚಾಗುವುದು.
ಉದ್ಯೋಗ ಬಡ್ತಿಗಾಗಿ
ಈ ದಿನ ಕೆಂಪು ಬಟ್ಟೆಯಲ್ಲಿ ನಾಣ್ಯಗಳನ್ನು ಹಾಕಿ ಪೂಜೆಗೆ ಇಟ್ಟು ನಂತರ ಆ ನಾಣ್ಯಗಳನ್ನು ನಮ್ಮ ಬಳಿ ಇಟ್ಟುಕೊಳ್ಳುವುದರಿಂದ ಬಡ್ತಿ ದೊರೆಯಲಿದೆ.



Click it and Unblock the Notifications