Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಗಾರ್ಬೇಜ್ ಕೆಫೆ: ಈ ರೆಸ್ಟೋರೆಂಟ್ನಲ್ಲಿ ದುಡ್ಡು ಕೊಡಬೇಕಾಗಿಲ್ಲ ಪ್ಲಾಸ್ಟಿಕ್ ವೇಸ್ಟ್ ಕೊಟ್ಟರೆ ಸಿಗುತ್ತೆ ಫುಲ್ ಮೀಲ್ಸ್
ಕಸ ತಂದು ಕೊಟ್ಟರೆ ಮೃಷ್ಟಾನ ಭೋಜನ ಸಿಗುತ್ತೆ, ಈ ಪರಿ ಕಲ್ಪನೆ ಎಷ್ಟೊಂದು ಚೆನ್ನಾಗಿದೆ ಅಲ್ವಾ? ಆದರೆ ಇದು ಬರಿ ಕಲ್ಪನೆಯಾಗಿ ಉಳಿದಿಲ್ಲ, ಭಾರತದಲ್ಲಿ ಕಸ ಸ್ವೀಕರಿಸಿ ರುಚಿಯಾದ ಆಹಾರ ನೀಡುವ ರೆಸಗಟೋರೆಂಟ್ ಬಂದಿದೆ.
ಹೊಟ್ಟೆ ಹಸಿದಿದ್ದರೆ ಕಸವನ್ನು ನೀಡಿದರೆ ಸಾಕು ಆ ಹೋಟೆಲ್ನವರು ಹೊಟ್ಟೆ ತುಂಬಾ ಊಟ ಕೊಡುತ್ತಾರೆ.ನಾಲ್ಕು ರೊಟ್ಟಿ, 2 ಬಗೆಯ ತರಕಾರಿ, ದಾಲ್, ಅನ್ನ , ಸಲಾಡ್, ಮೊಸರು, ಉಪ್ಪಿನಕಾಯಿ, ಮೊಸರನ್ನ ಊಟ ನೀಡುತ್ತಾರೆ. ಭಾರತದಲ್ಲಿ ಕಸ ಕೊಟ್ಟರೆ ಊಟ ನೀಡುವ ಇದೇ ಮೊದಲ ರೆಸ್ಟೋರೆಂಟ್ ಆಗಿದ್ದು ಇದು ಒಳ್ಳೆಯ ಬೆಳವಣಿಗೆಯಾಗಲಿದೆ.

ಎಲ್ಲಿದೆ ಹೋಟೆಲ್?
ಈ ಹೋಟೆಲ್ ಛತ್ತೀಸ್ಗಢದ ಆಂಬಿಕಪೂರ್ ಜಿಲ್ಲೆಯಲ್ಲಿದೆ. ಈಹೋಟೆಲ್ಗೆ ಪ್ಲಾಸ್ಟಿಕ್ ವೇಸ್ಟ್ ತಂದುಕೊಟ್ಟರೆ ಅವರಿಗೆ ಆಹಾರ ನೀಡಲಾಗುವುದು. ಪರಿಸರವನ್ನು ಶುಚಿಯಾಗಿಸುವ ಒಂದು ಒಳ್ಳೆಯ ಉದ್ದೇಶದಿಂದ ಪ್ರಾರಂಭಿಸಿದ ಹೋಟೆಲ್ ಇದಾಗಿದೆ, ಈ ಪ್ರದೇಶ ಶುಚಿತ್ವಕ್ಕೆ ಹೆಸರುವಾಸಿಯಾದ ಪ್ರದೇಶವಾಗಿದೆ. ಇಲ್ಲಿಯ ನಿವಾಸಿಗಳು ಕೂಡ ಪರಿಸರವನ್ನು ಶುಚಿಯಾಗಿಡಲು ತುಂಬಾನೇ ಗಮನಹರಿಸುತ್ತಾರೆ. ಇದೀಗ ಆ ಪ್ರದೇಶದಲ್ಲಿ ಇಂಥದ್ದೊಂದು ಹೋಟೆಲ್ ಕೂಡ ಬಂದಿರುವುದರಿಂದ ಜನರು ಪ್ಲಾಸ್ಟಿಕ್ ವಸ್ತುಗಳನ್ನು ಅಲ್ಲಿಂದರಲ್ಲಿ ಎಸೆಯುವುದಿಲ್ಲ. ಅವುಗಳನ್ನು ಸಂಗ್ರಹಿಟ್ಟು ಇಲ್ಲಿಗೆ ತಂದು ಕೊಡುತ್ತಾರೆ, ಒಂದೊಳ್ಳೆಯ ಊಟ ಸಿಗುತ್ತದೆ ಎಂದ ಮೇಲೆ ಪ್ಲಾಸ್ಟಿಕ್ ಎಸೆಯುವ ತಪ್ಪು ಯಾರೂ ಮಾಡಲ್ಲ.
ಅರ್ಧ ಕೆಜಿ ಪ್ಲಾಸ್ಟಿಕ್ ವೇಸ್ಟ್ ತಂದರೆ ಬ್ರೇಕ್ಫಾಸ್ಟ್ ಸಿಗುತ್ತೆ
ಅರ್ಧ ಕೆಜಿ ಪ್ಲಾಸ್ಟಿಕ್ ತಂದುಕೊಟ್ಟೆ ಆಲೂ ಚಪಾತಿ, ಇಡ್ಲಿ, ಸಮೋಸಾ, ಬ್ರೆಡ್, ಚಾಪ್ಸ್ ಈ ಬಗೆಯ ಆಹಾರಗಳ ಪಡೆಯಬಹುದು. ಹಾಗಾಗಿ ವೇಸ್ಟ್ನಿಂದ ಕೂಡ ಜನರು ಲಾಭ ಮಾಡಿಕೊಳ್ಳಬಹುದು.
ಪ್ರತಿಯೊಂದು ನಗರದಲ್ಲಿಯೂ ಇಂಥ ರೆಸ್ಟೋರೆಂಟ್ ಬಂದರೆ ಭಾರತ ಮತ್ತಷ್ಟು ಸುಂದರವಾಗುವುದು
ಕಸದವರು ಒಣಕಸ-ಹಸಿ ಕಸ ವಿಂಗಡಿಸಿ ಕೊಡಿ ಎಂದು ಎಷ್ಟು ಹೇಳಿದರೂ ತುಂಬಾ ಜನ ಮಿಕ್ಸ್ ಮಾಡಿ ಕೊಡುತ್ತಾರೆ, ಒಬ್ಬರು ಕಸ ಎಸೆದರೆ ಸಾಕು, ಎಲ್ಲರು ಅಲ್ಲಿ ಆ ಜಾಗದಲ್ಲಿ ತಂದು ಎಸೆದು ಕಸದ ರಾಶಿ ಮಾಡಿ ಬಿಡುತ್ತಾರೆ, ನಮ್ಮ ಮನೆ ಶುದ್ಧವಾಗಿಡುವುದು ಮಾತ್ರವಲ್ಲ ಪರಿಸರ ಕೂಡ ಶುದ್ಧವಾಗಿಡಲು ಪ್ರತಿಯೊಬ್ಬರು ಪ್ರಯತ್ನ ಹಾಕಬೇಕು. ಆವಾಗ ಮಾತ್ರ ನಮ್ಮ ಪರಿಸರ ತುಂಬಾ ಶುದ್ಧವಾಗಿರುತ್ತದೆ.
ಪ್ಲಾಸ್ಟಿಕ್ ಮುಕ್ತ ಪರಿಸರ ನಮ್ಮ ಗುರಿಯಾಗಬೇಕು
ಪರಿಸರ ದಿನಾಚರಣೆಗೆ ಮಾತ್ರ ಪರಿಸರದ ಬಗ್ಗೆ ಕಾಳಜಿ ತೋರಿದರೆ ಸಾಲದು ಪ್ಲಾಸ್ಟಿಕ್ ಮುಕ್ತ ಪರಸರವಾಗಲು ನಾವೆಲ್ಲರೂ ಪ್ರಯತ್ನ ಹಾಕಬೇಕು. ಆದಷ್ಟೋ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು, ಬದಲಿಗೆ ಮಣ್ಣಿನಲ್ಲಿ ಸುಲಭವಾಗಿ ಕರಗುವಂಥ ಚೀಲಗಳನ್ನು ಬಳಸಬೇಕು.
ಪ್ಲಾಸ್ಟಿಕ್ ಮಣ್ಣಿನಲ್ಲಿ ಕರಗದೆ ವರ್ಷಗಟ್ಟಲೆ ಹಾಗೆಯೇ ಇರುತ್ತದೆ
ನೀವು ಪ್ಲಾಸ್ಟಿಕ್ ಭೂಮಿಗೆ ಹಾಕಿದರೆ ಅದು ಕರಗುವುದಿಲ್ಲ, ವರ್ಷಗಟ್ಟಲೆ ಹಾಗೆಯೇ ಇರುತ್ತದೆ, ಇದರಿಂದ ಭೂಮಿಯಲ್ಲಿ ನೀರು ಇಂಗುವುದಿಲ್ಲ, ಮಣ್ಣಿನ ಫಲವತ್ತತೆ ಕೂಡ ನಾಶವಾಗುವುದು, ಅಂಥ ಮಣ್ಣಿನಲ್ಲಿ ಬೆಳೆ ಬೆಳೆದರೆ ಬೆಳೆ ಕೂಡ ಸರಿಯಾಗಿ ಬರುವುದಿಲ್ಲ. ಹೀಗಾಗಿ ಪ್ಲಾಸ್ಟಿಕ್ ಬಳಸುವುದು ಕಡಿಮೆ ಮಾಡಬೇಕು.



Click it and Unblock the Notifications











