Latest Updates
-
ಮದುವೆ ಅಥವಾ ಡೇಟಿಂಗ್ ಪ್ಲಾನ್ ಮಾಡಿದ್ದೀರಾ? ಇಂದಿನ ಹವಾಮಾನದ ಅಬ್ಬರಕ್ಕೆ ನಿಮ್ಮ ತಯಾರಿ ಹೇಗಿರಲಿ? -
ಬಿರುಗಾಳಿ ಮಳೆಗೆ ನಿಮ್ಮ ಬಾಲ್ಕನಿ ಗಾರ್ಡನ್ ನಲುಗುತ್ತಿದೆಯೇ? ಗಿಡಗಳನ್ನು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಗೆ ಸುಸ್ತಾದ್ರಾ? ಈ ಪಾನೀಯಗಳಿದ್ದರೆ ಸಾಕು, ಬೇಸಿಗೆಯಲ್ಲೂ ಇರುತ್ತೀರಿ ಫ್ರೆಶ್! -
ಮೆಟ್ ಗಾಲಾ 2026: ಕರಣ್ ಜೋಹರ್ ಎಂಟ್ರಿಯಿಂದ ಫ್ಯಾಷನ್ ಲೋಕದಲ್ಲಿ ಸಂಚಲನ, ಭಾರತದಲ್ಲಿ ವೀಕ್ಷಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಮುಂಜಾನೆಯೇ ವ್ಯಾಯಾಮ: ನಿಮ್ಮ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ -
ಬೇಸಿಗೆ ಮದುವೆ ಸಂಭ್ರಮ: ಬಿಸಿಲ ಬೇಗೆಯಿಂದ ಅತಿಥಿಗಳನ್ನು ರಕ್ಷಿಸಲು ಇಲ್ಲಿದೆ ಮಾಸ್ಟರ್ ಪ್ಲಾನ್ -
ಮೇ 2-3ರ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಗಿಡಗಳನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಭಾರತದಲ್ಲಿ ಸುಡುವ ಬಿಸಿಲು: ಹೀಟ್ ವೇವ್ನಿಂದ ಪಾರಾಗಲು ಇಲ್ಲಿವೆ ಬೆಸ್ಟ್ ಡಯಟ್ ಮತ್ತು ಹೈಡ್ರೇಶನ್ ಟಿಪ್ಸ್! -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಕರಣ್ ಜೋಹರ್ ಅಬ್ಬರ, ಭಾರತೀಯ ಫ್ಯಾಷನ್ ಲೋಕದ ಹೊಸ ಸಂಚಲನ! -
ಮೇ ತಿಂಗಳ ಬಿಸಿಲ ಧಗೆ: ನಿಮ್ಮ ಬೆಳಗಿನ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳದಿದ್ದರೆ ಕಷ್ಟ!
ಈ ಊರಿನ ಹೆಸರೇ ದೀಪಾವಳಿ..! ಏಕೆ ಗೊತ್ತಾ? ನಾಮಕರಣ ಮಾಡಿದ್ಯಾರು ಗೊತ್ತಾ?
ದೀಪಾವಳಿಯು ಹಿಂದೂಗಳಿಗೆ ಪ್ರಮುಖ ಹಬ್ಬವಾಗಿದೆ. ದೀಪಾವಳಿ ಬೆಳಕಿನ ಹಬ್ಬವಾಗಿದೆ. ಪಟಾಕಿ, ಸಿಹಿ ದೀಪಾವಳಿಗೆ ಮತ್ತಷ್ಟು ಮೆರಗು ತರಲಿದೆ. ಈ ದೀಪಾವಳಿಯನ್ನು ಇದೇ ಅಕ್ಟೋಬರ್ 31ರಂದು ಆಚರಿಸಲಾಗುತ್ತಿದೆ. ಕತ್ತಲೆಯ ವಿರುದ್ಧ ಬೆಳಕಿನ ಜಯದ ಸಂಕೇತವಾಗಿ ಈ ಹಬ್ಬವನ್ನ ಆಚರಿಸಲಾಗುತ್ತದೆ. ಹಾಗೆ ಪುರಾಣದಲ್ಲಿ ಹಲವು ಕಥೆಗಳು ಕೇಳಿಬರುತ್ತದೆ.
ರಾಮಾಯಣ ಪುರಾಣದ ಪ್ರಕಾರ ಶ್ರೀಲಂಕಾದ ರಾಜ ರಾವಣನನ್ನು ಸೋಲಿಸಿದ ನಂತರ ಶ್ರೀರಾಮ, ಸೀತಾಮಾತೆ ಹಾಗೂ ಲಕ್ಷ್ಮಣರು ಅಯೋಧ್ಯೆಗೆ ಹಿಂದಿರುಗುತ್ತಾರೆ. ಹಿಂದಿರುಗುವ ಶುಭ ಸಂದರ್ಭವನ್ನು ಸಂಭ್ರಮದಿಂದ ದೀಪಗಳ ಹಚ್ಚಿ ಆಚರಿಸಲಾಯಿತು. ನಂತರ ಇದು ದೀಪಾವಳಿಯಾಗಿ ಬದಲಾಯಿತು ಎಂದು ಹೇಳಲಾಗಿದೆ. ಹಾಗೆ ದೇಶದ ವಿವಿಧ ಮೂಲೆಯಲ್ಲಿ ವಿವಿಧ ಕಾರಣಗಳಿಗೆ ಹಬ್ಬದ ಆಚರಣೆ ಮಾಡಲಾಗುತ್ತದೆ.

ಕಾರ್ತಿಕ ಮಾಸದಲ್ಲಿ ಬರುವ ಅಮಾವಾಸ್ಯೆ ರಾತ್ರಿಯನ್ನು ದೀಪಾವಳಿಯಾಗಿ ಆಚರಿಸಲಾಗುತ್ತದೆ. ಈ ಹಬ್ಬವು ನಮ್ಮ ಜೀವನದ ಕೆಟ್ಟ ಗಳಿಗೆಗಳು, ನಕಾರಾತ್ಮಕ ವಿಚಾರಗಳನ್ನು ನಿರ್ಮೂಲನೆ ಮಾಡಿ ಧನಾತ್ಮಕ ಶಕ್ತಿಯನ್ನು ನಿಮಗೆ ನೀಡಲಿದೆ ಎಂದು ಹೇಳಲಾಗಿದೆ. ಈ ಹಬ್ಬದಲ್ಲಿ ಸಂಪತ್ತಿನ ಅಧಿದೇವತೆ ಲಕ್ಷ್ಮಿ ಹಾಗೂ ವಿಘ್ನ ನಿವಾರಕ ವಿನಾಯಕನನ್ನೂ ಪೂಜಿಸಲಾಗುತ್ತದೆ.
ಈ ದೀಪಾವಳಿಯನ್ನು ದಕ್ಷಿಣ ಭಾರತದಲ್ಲಿ ಬಲಿ ಪಾಡ್ಯಮಿ ಎಂದು. ಪಶ್ಚಿಮ ಬಂಗಾಳದಲ್ಲಿ ಮಾ ಕಾಳಿಯ ಆರಾಧನೆಯಾಗಿ ಹಾಗೂ ನೇಪಾಳದಲ್ಲಿ ಶ್ರೀಕೃಷ್ಣನಿಗೆ ಪೂಜೆ ಸಲ್ಲಿಸುವ ಹಬ್ಬವಾಗಿ ಆಚರಿಸಲಾಗುತ್ತದೆ. ಇನ್ನು ದೀಪಾವಳಿ ಎಂಬ ಹೆಸರಿನಲ್ಲಿ ಒಂದೂ ಊರು ಕೂಡ ಇದೆ ಎಂಬುದು ನಿಮಗೆ ಗೊತ್ತಾ?
ಹೌದು ದೀಪಾವಳಿ ಎಂಬ ಹೆಸರಿನಲ್ಲಿ ಒಂದು ಊರಿದೆ. ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಗಾರ ಎಂಬ ಮಂಡಲದಲ್ಲಿ ದೀಪಾವಳಿ ಎಂಬ ಹೆಸರಿನ ಊರು ಇದೆ. ಈ ಊರಿಗೆ ದೀಪಾವಳಿ ಎಂಬ ಹೆಸರು ಹೇಗೆ ಬಂದಿದೆ ಎಂಬುದು ತಿಳಿದರೆ ನಿಮಗೂ ಅಚ್ಚರಿಯಾಗುತ್ತದೆ. ಶತಮಾನಗಳ ಹಿಂದೆ ಈ ಗ್ರಾಮವು ಒಂದು ರಾಜನ ಆಳ್ವಿಕೆಗೆ ಒಳಗಾಗಿತ್ತಂತೆ. ಆತ ಶ್ರೀ ಕೂರ್ಮನಾಥ ದೇವಾಲಯಕ್ಕೆ ಹೋಗಬೇಕಾದರೆ ಈ ಹಳ್ಳಿಯನ್ನು ದಾಟಿಕೊಂಡೇ ಹೋಗಬೇಕಿತ್ತಂತೆ.
ಒಂದು ವರ್ಷ ಇದೇ ಮಾರ್ಗವಾಗಿ ಆ ರಾಜ ದೂರದ ದೇವಾಲಯಕ್ಕೆ ಹೋಗಿದ್ದನಂತೆ. ಆ ಕಾಲದಲ್ಲಿ ಕುದುರೆ ಮೇಲೆ ಆತ ಸಾಗಬೇಕಿತ್ತು. ಆತನ ಜೊತೆಗೆ ಒಂದಿಷ್ಟು ಮಂದಿ ರಕ್ಷಕರು ತೆರಳುತ್ತಿದ್ದರು. ಆದ್ರೆ ಒಮ್ಮೆ ಆತ ದೇವಾಲಯಕ್ಕೆ ಹೋಗಿ ಪೂಜೆ ಮುಗಿಸಿ ವಾಪಾಸಾಗುವಾಗ ರಾತ್ರಿಯಾಗಿಬಿಟ್ಟಿತ್ತಂತೆ. ಅಲ್ಲದೆ ಬೆಳಗ್ಗೆಯಿಂದ ಓಡಾಡಿದ್ದ ರಾಜ ಸುಸ್ತಾಗಿ ಕುಸಿದು ಬಿದ್ದನಂತೆ.
ಈ ವಿಚಾರ ತಿಳಿದ ಗ್ರಾಮಸ್ಥರು ದೊಡ್ಡ ದೊಡ್ಡ ದೀಪಗಳೊಂದಿಗೆ ರಾಜನ ನೋಡಲು ಆಗಮಿಸಿ ಆತನಿಗೆ ನೀರು ನೀಡಿ, ಆರೈಕೆ ಮಾಡಿದರಂತೆ. ಇಡಿ ರಾತ್ರಿ ರಾಜ ಈ ಹಳ್ಳಿಯಲ್ಲಿ ಕಳೆದನಂತೆ. ಮಾರನೆ ದಿನ ಬೆಳಗ್ಗೆ ಈ ಗ್ರಾಮದಲ್ಲಿದ್ದ ಸಣ್ಣ ಗುಡಿಗೆ ಪೂಜೆ ಮಾಡಿದ ರಾಜ ದೀಪ ಬೆಳಗಿನಂತೆ. ಹಾಗೆ ಗ್ರಾಮಕ್ಕೆ ವಿಶೇಷವಾಗಿ ದೀಪಾವಳಿ ಎಂದು ನಾಮಕರಣ ಮಾಡಿದನಂತೆ ಎಂಬ ಕಥೆ ಇದೆ.
ದೀಪಾವಳಿಯಲ್ಲಿ ಈ ಗ್ರಾಮ ವಿಶೇಷವಾಗಿ ಅಲಂಕರಿಸಲ್ಪಡುತ್ತದೆ. ಮನೆಯ ಹಿರಿಯರು ಸೂರ್ಯೋದಯಕ್ಕೂ ಮೊದಲೇ ಎದ್ದು ಈ ಗುಡಿಯ ಬಳಿ ಬಂದು ದೀಪಾವಳಿಯಂದು ದೀಪ ಹಚ್ಚುವ ವಾಡಿಕೆ ಇದೆಯಂತೆ. ಹಾಗೆ ತಮ್ಮ ಪೂರ್ವಜರು ರಾಜನಿಗೆ ಈ ಸೇವೆ ಮಾಡಿದ್ದರಿಂದ ಮೋಕ್ಷ ಪಡೆದರು ಎಂದು ನಂಬಿದ್ದಾರೆ. ಹೀಗಾಗಿ ದೀಪಾವಳಿಯಲ್ಲಿ ಸೋಂಡಿ ಎಂಬ ಸಮುದಾಯ ಪೂರ್ವಜರಿಗೆ ಈ ದಿನ ಪಿಂಡ ಪ್ರಧಾನ ಮಾಡುತ್ತಾರೆ. ಈ ದಿನ ಪಿತೃ ಪೂಜೆ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಗ್ರಾಮಸ್ಥರು ನಂಬಿದ್ದಾರೆ.



Click it and Unblock the Notifications