Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಶ್ರಾವಣ ಮಾಸದಲ್ಲಿ ಹೇರ್ ಕಟ್, ಶೇವಿಂಗ್ ಮಾಡಿಸಬಾರದು ಅನ್ನೋದು ಇದೇ ಕಾರಣಕ್ಕೆ!
ಶ್ರಾವಣ ತಿಂಗಳು ಹಿಂದೂಗಳಿಗೆ ಪವಿತ್ರವಾದ ತಿಂಗಳು. ಈ ತಿಂಗಳನ್ನು ಶಿವನಿಗೆ ಅರ್ಪಿಸಲಾಗುತ್ತದೆ. ಜೊತೆಗೆ ಶಿವನಿಗೆ ಪ್ರಿಯವಾದ ತಿಂಗಳು ಅಂತಾನೂ ಕರೆಯಲಾಗುತ್ತದೆ. ಈ ಶ್ರಾವಣ ತಿಂಗಳಿನಲ್ಲಿ ಶಿವನ ಜೊತೆಗೆ ಪಾರ್ವತಿಯನ್ನು ಭಕ್ತಿಯಿಂದ ಪೂಜಿಸಿದ್ರೆ ನಮ್ಮೆಲ್ಲಾ ಇಷ್ಟಾರ್ಥಗಳು ನೆರವೇರಿ ಬದುಕಿನಲ್ಲಿ ಎಲ್ಲವೂ ಒಳ್ಳೆಯದಾಗುತ್ತೆ ಅಂತಾನೂ ಹೇಳಲಾಗುತ್ತದೆ.
ಈ ತಿಂಗಳಿನಲ್ಲಿ ಶಿವನನ್ನು ನಿಷ್ಕಲ್ಮಷ ಮನಸ್ಸಿನಿಂದ ಪ್ರೀತಿಸಿದ್ರೆ ನಾವು ಅಂದುಕೊಂಡಿದ್ದೆಲ್ಲಾ ನೆರವೇರುತ್ತೆ ಅಂತ ಹೇಳಲಾಗುತ್ತದೆ. ಈ ಶ್ರಾವಣ ತಿಂಗಳಿನಲ್ಲಿ ಕೆಲವೊಂದು ಆಚರಣೆಗಳನ್ನು ಪಾಲಿಸಬೇಕು. ಅದೇ ರೀತಿ ಈ ತಿಂಗಳಿನಲ್ಲಿ ಕೆಲವೊಂದು ಕೆಲಸಗಳನ್ನು ಮಾಡಬಾರದು. ಅಷ್ಟಕ್ಕು ಈ ಶ್ರಾವಣ ಮಾಸದಲ್ಲಿ ಯಾವ ಕೆಲಸಗಳನ್ನು ಮಾಡಬಾರದು ಅನ್ನೋದನ್ನು ತಿಳಿಯೋಣ.

ಈ ತಿಂಗಳು ಹೊಸತಾಗಿ ಮದುವೆಯಾದವರಿಗೆ ವಿಶೇಷವಾದ ತಿಂಗಳು ಅಂತಾನೇ ಪರಿಗಣಿಸಲಾಗುತ್ತದೆ. ಇನ್ನೂ ಅವಿವಾಹಿತರು ಈ ಶ್ರಾವಣ ಮಾಸದಲ್ಲಿ ಶಿವನಿಗಾಗಿ ಉಪವಾಸ ವ್ರತ ಮಾಡಿದರೆ ತಮ್ಮ ನೆಚ್ಚಿನ ಸಂಗಾತಿಯನ್ನು ಪಡೆಯಬಹುದಂತೆ. ಇನ್ನೂ ಈಗಾಗಲೇ ಪ್ರೀತಿಯಲ್ಲಿ ಇರುವವರು ಭಕ್ತಿಯಿಂದ ಶಿವನನ್ನು ಬೇಡಿಕೊಂಡರೆ ಅವರ ಮಧ್ಯೆ ಪ್ರೀತಿ ಮತ್ತಷ್ಟು ಹೆಚ್ಚಾಗಲಿದ್ಯಂತೆ.
ಶ್ರಾವಣ ತಿಂಗಳಿನಲ್ಲಿ ಕೈಲಾಸದಿಂದ ಇಳಿದು ಬರುತ್ತಾನಾ ಶಿವ?
ಈ ಶ್ರಾವಣ ತಿಂಗಳಿನಲ್ಲಿ ಶಿವನು ಕೈಲಾಸದಿಂದ ಭೂಮಿಗೆ ಇಳಿದು ಬರುತ್ತಾನಂತೆ. ಇನ್ನೂ ಈ ಶ್ರಾವಣ ಮಾಸದಲ್ಲಿ ಪದ್ಮಿನಿ ಏಕಾದಶಿಯನ್ನೂ ಕೂಡ ಆಚರಣೆ ಮಾಡಲಾಗ್ತಿದ್ದು, ಭಗವಾನ್ ವಿಷ್ಣುವು ಮುಂದಿನ ನಾಲ್ಕು ತಿಂಗಳುಗಳವರೆಗೆ ಯೋಗ ನಿದ್ರಾಗೆ ಜಾರುತ್ತಾನೆ. ಮತ್ತು ಈ ಸಮಯದಲ್ಲಿ ಭಗವಾನ್ ಶಿವನು ಸೃಷ್ಟಿಯನ್ನು ನೋಡಿಕೊಳ್ಳುತ್ತಾನೆ ಎಂಬ ನಂಬಿಕೆಯಿದೆ. ಈ ಶ್ರಾವಣ ಮಾಸದಲ್ಲಿ ಮಹಾದೇವನಿಗೆ ವಿಶೇಷ ಪೂಜೆಯನ್ನು ಮಾಡಲಾಗುತ್ತದೆ.
ಇನ್ನೂ ಈ ಶ್ರಾವಣ ಮಾಸದಲ್ಲಿ ಶಿವನ ಆಶೀರ್ವಾದ ಪಡೆಯಲು ಕೆಲವೊಂದು ಕಟ್ಟು-ಪಾಡುಗಳನ್ನು ಪಾಲಿಸೋದು ತುಂಬಾನೇ ಮುಖ್ಯವಾಗುತ್ತದೆ. ಈ ಪವಿತ್ರ ಮಾಸದಲ್ಲಿ ಹೇರ್ ಕಟ್, ಶೇವಿಂಗ್ ಕೂಡ ಮಾಡಿಸಬಾರದು ಅನ್ನೋದು ಯಾಕೆ ಅನ್ನೋದನ್ನು ತಿಳಿಯೋಣ.
ಶ್ರಾವಣದಲ್ಲಿ ಹೇರ್ ಕಟ್, ಶೇವಿಂಗ್ ಮಾಡಿಸಬಾರದು ಯಾಕೆ ಗೊತ್ತಾ?
ಶ್ರಾವಣದಲ್ಲಿ ಹೇರ್ ಕಟ್ ಮಾಡಿಸಬಾರದು, ಶೇವಿಂಗ್ ಮಾಡಿಸಬಾರದು ಅನ್ನೋ ಮಾತನ್ನು ನಾವು ಕೇಳಿರ್ತೀವಿ. ಆದರೆ ಈ ರೀತಿ ನಂಬಿಕೆಗಳು ಯಾಕಿದೆ ಅನ್ನೋದು ಇಂದಿಗೂ ನಮ್ಮಲ್ಲಿ ಅನೇಕರಿಗೆ ಗೊತ್ತಿಲ್ಲ. ಇದರ ಹಿಂದಿನ ಕಾರಣ ಏನು ಅಂದ್ರೆ ಹಿಂದಿನ ಕಾಲದಲ್ಲಿ ಹೇರ್ ಕಟ್ ಮತ್ತು ಶೇವಿಂಗ್ ಗೆ ಕಬ್ಬಿಣದ ಉಪಕರಣಗಳನ್ನು ಬಳಕೆ ಮಾಡಲಾಗ್ತಿತ್ತು. ಮತ್ತು ಅವುಗಳ ಅಂಚುಗಳು ತುಂಬಾ ತೀಕ್ಷ್ಣವಾಗಿತ್ತು. ಅದರಿಂದ ಗಾಯಗಳಾಗುವ ಅಪಾಯ ಹೆಚ್ಚಿತ್ತು.
ಇನ್ನೂ ಈ ಶ್ರಾವಣ ಮಾಸದಲ್ಲಿ ಮಳೆ ಅತಿಯಾಗಿರುತ್ತದೆ. ಹಾಗೂ ಸೂರ್ಯನ ಬೆಳಕು ಇರೋದಿಲ್ಲ. ಇದ್ರಿಂದ ಗಾಯಗಳಾದಾಗ ಸೋಂಕು ತಗುಲುವ ಅಪಾಯ ಹೆಚ್ಚಿರುತ್ತದೆ. ಈ ಕಾರಣಕ್ಕಾಗಿ ಶ್ರಾವಣದಲ್ಲಿ ಕ್ಷೌರ ಮಾಡಿಸುವ ಸಂದರ್ಭದಲ್ಲಿ ಗಾಯವಾಗಿ ಸೋಂಕು ಆಗುತ್ತೆ ಅನ್ನೋ ಉದ್ದೇಶದಿಂದ ಶ್ರಾವಣದಲ್ಲಿ ಕ್ಷೌರ ನಿಷೇಧಿಸಲಾಗಿದೆ.
ಶ್ರಾವಣದಲ್ಲಿ ಉಗುರು ಕತ್ತರಿಸೋದನ್ನು ನಿಷೇಧಿಸಿರೋದು ಯಾಕೆ?
ಶ್ರಾವಣ ಮಾಸದಲ್ಲಿ ಉಗುರು ಕತ್ತರಿಸುವುದನ್ನೂ ನಿಷೇಧಿಸಲಾಗಿದೆ. ಇಷ್ಟು ಮಾತ್ರವಲ್ಲದೆ ಈ ತಿಂಗಳಲ್ಲಿ ಎಣ್ಣೆ ಬಳಸಿ ಬಾಡಿ ಮಸಾಜ್ ಮಾಡುವುದನ್ನು ಕೂಡ ನಿಷೇಧಿಸಲಾಗಿದೆ. ಈ ಮಾಸದಲ್ಲಿ ಎಣ್ಣೆ ಮಸಾಜ್ ಮಾಡುವುದರಿಂದ ವ್ಯಕ್ತಿಯ ಜೀವನದಲ್ಲಿ ಗ್ರಹದೋಷಗಳು ಉಂಟಾಗುವ ಸಾಧ್ಯತೆಗಳಿದೆ. ಜೊತೆಗೆ ಶ್ರಾವಣ ಪೂಜೆಯ ಲಾಭವು ಅವರಿಗೆ ಸಿಗುವುದಿಲ್ಲ ಎಂಬ ನಂಬಿಕೆ ಇದೆ. ಇನ್ನೂ ಈ ಶ್ರಾವಣ ಮಾಸದಲ್ಲಿ ಮಾಂಸಹಾರ, ಮಧ್ಯಪಾನ, ಧೂಮಪಾನದಿಂದ ದೂರವಿರಬೇಕು ಅಂತ ಹೇಳಲಾಗುತ್ತದೆ.
ಶ್ರಾವಣ ತಿಂಗಳಿನಲ್ಲಿ ಏನು ಮಾಡಬೇಕು?
ಶ್ರಾವಣ ತಿಂಗಳಿನಲ್ಲಿ ನಮ್ಮ ಮೈ ಹಾಗೂ ಮನಸ್ಸನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಹಾಗೂ ಆದಷ್ಟು ಶಿವನ ಧ್ಯಾನದಲ್ಲಿ ನಿರತವಾಗಿ ಇರಬೇಕು. ಇನ್ನೂ ಕುಟುಂಬದಲ್ಲಿರುವ ಎಲ್ಲಾ ಹಿರಿಯರನ್ನು ಗೌರವ ಭಾವದಿಂದ ಕಾಣಬೇಕು. ಇನ್ನೂ ನಿಮ್ಮ ಆಸೆ ಆಕಾಂಕ್ಷೆಗಳೆಲ್ಲಾ ಈಡೇರಬೇಕೆಂದರೆ ಶಿವಲಿಂಗಕ್ಕೆ ನಿತ್ಯ ನೀರನ್ನು ಅರ್ಪಿಸಬೇಕು.
ಹಿಂದಿನ ಕಾಲದವರು ಯಾವುದಾದರೂ ಒಂದು ನಿಯಮವನ್ನು ಪಾಲಿಸಿಕೊಂಡು ಬರುತ್ತಿದ್ದರೂ ಅಂದ್ರೆ ಅದರ ಹಿಂದೆ ಒಂದು ವೈಜ್ಞಾನಿಕ ಕಾರಣ ಇರುತ್ತಿತ್ತು.



Click it and Unblock the Notifications

