Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಖಿನ್ನತೆ, ಕೌಟುಂಬಿಕ ಸಮಸ್ಯೆ ಗುರುಪ್ರಸಾದ್ ಜೀವ ಕಸಿದಿತ್ತಾ? 10 ದಿನವಾದ್ರು ಯಾರಿಗೂ ತಿಳಿಯಲಿಲ್ಲ ಏಕೆ?
ಕನ್ನಡ ಚಿತ್ರರಂಗದಲ್ಲಿ ಮಠ, ಎದ್ದೇಳು ಮಂಜುನಾಥದಂತ ವಿಭಿನ್ನ ಸಿನಿಮಾಗಳಿಂದ ಹೆಸರು ಮಾಡಿದ್ದ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ನಿರ್ಧಾರ ತೆಗದುಕೊಂಡಿರುವುದು ಸ್ಯಾಂಡಲ್ವುಡ್ನಲ್ಲಿ ಆಘಾತ ಉಂಟು ಮಾಡಿದೆ. ಸೋಲುಗಳ ಮೆಟ್ಟಿನಿಂತು ಹೊಸ ರೀತಿ ಸಿನಿಮಾ ನೀಡುತ್ತೇನೆ ಎಂಬ ದೃಢ ನಿರ್ಧಾರದಲ್ಲಿದ್ದ ಅವರು ಏಕಾಏಕಿ ಸಾವಿನ ನಿರ್ಧಾರ ಮಾಡಿರುವುದು ಎಮತವರಲ್ಲೂ ಅಚ್ಚರಿಗೆ ತಳ್ಳಿದೆ.
ಹಿಟ್ ಸಿನಿಮಾಗಳನ್ನು ಕೊಟ್ಟಿದ್ದ ಗುರುಪ್ರಸಾದ್ ಅವರು ಇತ್ತಿಚಿಗೆ ರಂಗನಾಯಕ ಸಿನಿಮಾದ ಸೋಲಿನಿಂದ ಕುಗ್ಗಿದ್ದರು. ಹಾಗೆ ಸಾಲ, ಕೌಟುಂಬಿಕ ಹಿನ್ನಲೆಗಳು, ಸಿನಿಮಾ ಸೋಲು ಹೀಗೆ ಎಲ್ಲವು ಒಮ್ಮೆ ಅವರನ್ನು ಕಾಡಿರುವ ಕಾರಣ ಅವರು ಸಾವಿನ ನಿರ್ಧಾರ ಕೈಗೊಂಡಿರುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಗುರುಪ್ರಸಾದ್ ಬೆಂಗಳೂರಿನ ಮಾದನಾಯಕಹಳ್ಳಿಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ 1 ವರ್ಷದಿಂದ ನೆಲೆಸಿದ್ದರಂತೆ. ಅದೇ ಅಪಾರ್ಟ್ಮೆಂಟ್ನಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. ಅಚ್ಚರಿ ಎಂದರೆ ಅವರ ಶವ ಕೊಳೆತ ರೀತಿಯಲ್ಲಿ ಪತ್ತೆಯಾಗಿದೆ. ಸುಮಾರು 10 ದಿನಗಳ ಕಾಲ ಶವ ಅದೇ ಮನೆಯಲ್ಲಿತ್ತು ಎಂದು ಅಂದಾಜಿಸಲಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
10 ದಿನವಾದರು ಯಾರು ನೊಡಿಲ್ಲವೇಕೆ.?
ಒಬ್ಬ ವ್ಯಕ್ತಿ 10 ದಿನದಿಂದ ಯಾರ ಸಂಪರ್ಕಕ್ಕೂ ಸಿಗಲಿಲ್ಲವೇ? ಗುರುಪ್ರಸಾದ್ ಅವರ ಶವ 10 ದಿನದಿಂದ ಮನೆಯಲ್ಲೇ ಇದ್ದರೂ ಯಾರು ಕೂಡ ಅವರ ಸಂಪರ್ಕ ಮಾಡುವ ಪ್ರಯತ್ನವನ್ನೇಕೆ ಮಾಡಲಿಲ್ಲ ಎಂಬ ಅನುಮಾನ ಮೂಡಿದೆ. ಒಬ್ಬ ವ್ಯಕ್ತಿ ತನ್ನ ಸ್ನೇಹಿತರು, ಕುಟುಂಬಸ್ಥರಿಂದ 10 ದಿನ ಸಂಪರ್ಕಕ್ಕೆ ಸಿಗದೆ ಇರಬಹುದೇ? ಈ ಎಲ್ಲಾ ಪ್ರಶ್ನೆ ಮೂಡುತ್ತದೆ.
2ನೇ ಪತ್ನಿಯಿಂದಲೂ ದೂರಾಗಿದ್ದರಾ ಗುರು ಪ್ರಸಾದ್?
ಗುರು ಪ್ರಸಾದ್ ಮೊದಲ ಪತ್ನಿಯಿಂದ ವಿಚ್ಚೇದನ ಪಡೆದಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಬಳಿಕ 1 ಮಗುವಿನ ತಾಯಿಯನ್ನು ಎರಡನೇ ಮದುವೆಯಾಗಿದ್ದರು. ಆದರೆ ಕಳೆದೊಂದು ವರ್ಷದಿಂದ ಒಬ್ಬರೇ ಅಪಾರ್ಟ್ಮೆಂಟ್ನಲ್ಲಿ ನೆಲೆಸಿದ್ದರು ಎನ್ನಲಾಗಿದೆ. ಹೀಗಾಗಿ 2ನೇ ಪತ್ನಿಯಿಂದಲೂ ಅವರು ದೂರಾಗಿದ್ದರು ಎಂಬ ಅನುಮಾನ ಮೂಡಿದೆ.
ಖಿನ್ನತೆ, ಒಂಟಿತನ ಕಾಡಿತ್ತಾ?
ರಂಗನಾಯಕ ಸಿನಿಮಾ ಸೋಲಿನ ಬಳಿಕ ಗುರು ಪ್ರಸಾದ್ ಬಹಳ ನೊಂದಿದ್ದರು ಎನ್ನಲಾಗಿದೆ. ಯಾರ ಸಂಪರ್ಕಕ್ಕೂ ಬಾರದೆ ಒಬ್ಬರೇ ಇರುತ್ತಿದ್ದರು. ಸಿನಿಮಾ ಸೋಲಿನಿಂದ ಕಂಗೆಟ್ಟಿದ್ದ ಅವರು ಖಿನ್ನತೆಗೆ ಒಳಗಾಗಿದ್ದರಂತೆ. ಅಲ್ಲದೆ ಕುಟುಂಬಸ್ಥರು ಜೊತೆಗಿರದೆ ಒಂಟಿತನ ಕಾಡಿತ್ತು. ಹಾಗೆ 8 ತಿಂಗಳಿನಿಂದ ಅವರು ಮನೆಯಿಂದ ಹೊರಬರುವುದು ಅಪರೂಪವಾಗಿತ್ತು ಎನ್ನಲಾಗಿದೆ.
ಸಿನಿಮಾ ಸೋಲಿನ ನಂತರ ಬಹಳ ನೊಂದಿದ್ದರಂತೆ. ಅಲ್ಲದೆ ಹೆಚ್ಚು ಸಾಲ ಮಾಡಿಕೊಂಡಿದ್ದ ಅವರು ಸಾಲ ತೀರಿಸಲು ಪರದಾಡಿದ್ದಾರೆ. ಹಲವರ ಬಳಿ ಹಣ ಪಡೆದಿದ್ದ ಅವರು ವಾಪಾಸು ನೀಡಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಅವರು ಸಾಲಗಾರರ ಕಾಟ ತಾಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದ್ರೆ ತನಿಖೆಯ ಬಳಿಕವಷ್ಟೇ ಅವರ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ. ಮೊದಲು ಇದು ಆತ್ಮಹತ್ಯೆಯೋ, ಕೊಲೆಯೋ ಎಂಬುದು ಕೂಡ ತನಿಖೆಯಲ್ಲಿ ಬಯಲಾಗಬೇಕಿದೆ.
ಬೆಳಕಿಗೆ ಬಂದಿದ್ದು ಹೇಗೆ?
ಅಪಾರ್ಟ್ಮೆಂಟ್ನಲ್ಲಿ ಕೊಳೆತ ವಾಸನೆ ಬಂದಾಗ ಅಲ್ಲಿದ್ದವರು ಸೆಕ್ಯೂರಿಟಿಗೆ ವಿಷಯ ತಿಳಿಸಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಗೆ ಬಂದು ಪರಿಶೀಲನೆ ನಡೆಸಿದಾಗ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.



Click it and Unblock the Notifications