Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಹಸುವಿನ ಪ್ರಾಣ ಉಳಿಸಲು ರೈಲು ನಿಲ್ಲಿಸಿದ ಲೋಕೋ ಪೈಲೆಟ್: ವೀಡಿಯೋಗೆ ಅಪಾರ ಮೆಚ್ಚುಗೆ
ರೈಲು ಬರುವಾಗ ಹಳಿ ದಾಟುತ್ತಿದ್ದ ಹಸುವನ್ನು ನೋಡಿ ರೈಲು ನಿಲ್ಲಿಸಿದ ವೀಡಿಯೋ ವೈರಲ್ ಆಗುತ್ತಿದದ್ದು ಲೋಕೋ ಪೈಲೆಟ್ ಕಾರ್ಯಕ್ಕೆ ತುಂಬಾನೇ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮೂಕ ಪ್ರಾಣಿಗೆ ರಸ್ತೆ ದಾಟಲು ಅವಕಾಶ ಮಾಡಿಕೊಟ್ಟು ಮಾನವೀಯತೆ ಮೆರೆದಿದ್ದಾರೆ, ಮನುಷ್ಯತ್ವವೆಂದರೆ ಇದು ಎಂದು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ರೈಲು ನಿಲ್ಲಿಸದಿದ್ದರೆ ಆ ಹಸುಗಳ ಪ್ರಾಣ ಹೋಗುತ್ತಿತ್ತು
ಆ ಹಸುಗಳು ಹಳಿಗಳ ಮೇಲೆ ಇತ್ತು, ಹಸುಗಳನ್ನು ನೋಡಿದ ಲೋಕೋಪೈಲೆಟ್ ರೈಲಿನ ವೇಗವನ್ನು ಕಡಿಮೆ ಮಾಡಿದರು. ಒಂದು ಹಸು ಹಲಿ ದಾಟಿದೆ, ಆದರೆ ಮತ್ತೊಂದು ಹಸು ಗೊಂದಲಕ್ಕೆ ಒಳಗಾಯ್ತು, ಅದು ಹಳಿಯಲ್ಲಿಯೇ ನಿಂತಿದ್ದರಿಂದ ರೈಲು ನಿಲ್ಲಿಸಿ ಆ ಹಸು ದಾಟಿದ ಮೇಲೆ ರೈಲು ಮುಂದೆಕ್ಕೆ ಹೋಗಿದೆ, ಆ ಹಸುವಿನ ಪ್ರಾಣ ಉಳಿಸಿದ್ದಕ್ಕೆ ತುಂಬಾನೇ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇವರು ಹಸುವನ್ನು ನೋಡಿದ್ದರಿಂದ ರೈಲು ನಿಲ್ಲಿಸಿ ಪ್ರಾಣ ಉಳಿಸಲು ಸಾಧ್ಯವಾಯ್ತು. ಅದರೆ ಎಲ್ಲಾ ಸಮಯದಲ್ಲಿ ಈ ರೀತಿ ಸಾಧ್ಯವಾಗಲ್ಲ, ಅಪಘಾತ ಸಂಭವಿಸುತ್ತದೆ.
आप लोग विडियो को अंत तक जरूर देखे और ट्रेन चालक के लिए दो शब्द जरूर लिखे,. pic.twitter.com/1TwcR0PMdV
— Naresh Yadav (@NareshYadav100) September 6, 2024
ವೇಗವಾಗಿ ಚಲಿಸುತ್ತಿದ್ದ ರೈಲು ಎದುರುಗಡೆ ಇದ್ದಕ್ಕಿದ್ದಂತೆ ಹಸು ಬಂದರೆ , ಹಸು ಅಂತಲ್ಲ ಯಾವುದೇ ಪ್ರಾಣಿ ಬಂದರೆ ಏನು ಮಾಡುವುದಕ್ಕೆ ಆಗುವುದಿಲ್ಲ. ಇತ್ತೀಚೆಗೆ ಕಾಡಾನೆಯೊಂದಕ್ಕೆ ರೈಲು ಡಿಕ್ಕಿ ಹೊಡೆದು ಕಾಡಾನೆ ನೋವಿನಿಂದ ತೆವಳಿಕೊಂಡು ಹೋಗುವ ದೃಶ್ಯ ಮನಕಲುಕುವಂತಿತ್ತು, ಕಾಡು ಪ್ರಾಣಿಗಳು ಈ ರೀತಿ ನಾಡಿಗೆ ಬರುವುದನ್ನು ತಪ್ಪಿಸಲು ಅರನ್ಯ ಇಲಾಖೆ ಯೋಜನೆಗಳನ್ನು ರೂಪಿಸಿ ಅವುಗಳನ್ನು ರಕ್ಷಣೆ ಮಾಡಬೇಕು. ಪ್ರಾಣಿಗಳು ಜೀವ ಕಳೆದುಕೊಳ್ಳುವುದನ್ನು ತಪ್ಪಿಸಬೇಕಾಗಿದೆ.
ರಸ್ತೆಯಲ್ಲಿಯೂ ಹಸುಗಳು ಎದುರಾಗುವುದು, ಅವುಗಳ ಮಾಲಿಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು
ಹಸುಗಳನ್ನು ಮೇಯಲು ಬಿಡುವಾಗ ಅವಳನ್ನು ಸುರಕ್ಷಿತವಾದ ಸ್ಥಳದಲ್ಲಿ ಬಿಟ್ಟು ಮೇಯಿಸುವ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು, ಅದರೆ ತುಂಬಾ ಜನರಿಗೆ ಹಾಲು ಕರೆಯಲು ಮಾತ್ರ ಹಸುವಿನ ನೆನಪಾಗುವುದು, ಆದರೆ ನಂತರ ಅವುಗಳನ್ನು ಮೇಯಲು ರೋಡ್ನಲ್ಲಿ ಬಿಟ್ಟು ಬಿಡುತ್ತಾರೆ, ಈ ರೀತಿ ರೋಡ್ನಲ್ಲಿ ಬಿಡುವುದರಿಂದ ಅವುಗಳಿಗೆ ಅಪಘಾತವಾಗುವ ಸಾಧ್ಯತೆ ಇದೆ, ಅವುಗಳಿಗೆ ಡಿಕ್ಕಿಯಾಗಿ ಮನುಷ್ಯರು ಪ್ರಾಣ ಕಳೆದುಕೊಂಡಿರುವ ಎಷ್ಟೋ ಘಟನೆಗಳಿವೆ. ಅದರಲ್ಲಿಯೂ ಬೈಕ್ನಲ್ಲಿ ಹೀಗುವವರೆಗೆ ಹೆಚ್ಚು ಅಪಾಯಕಾರಿ, ರಸ್ತೆ ಬದಿಯಲ್ಲಿರುವ ಹಸುಗಳು ಇದ್ದಕ್ಕಿದ್ದಂತೆ ರಸ್ತೆಗೆ ಬರುತ್ತದೆ, ಇನ್ನು ಕೆಲವು ಕಡೆ ಹಸುಗಳು ಗುಂಪು ಗುಂಪಾಗಿ ಮಲಗಿರುತ್ತದೆ, ಇದರಿಂದಾಗಿ ಗಾಡಿಗೆ ಮುಂದೆಕ್ಕೆ ಹೋಗುವುದೇ ಕಷ್ಟ, ಎಷ್ಟೇ ಹಾರ್ನ್ ಹೊಡೆದರೂ ಅವುಗಳು ಸೈಡ್ಗೆ ಹೋಗಲ್ಲ.
ಹಸುಗಳನ್ನು ರಸ್ತೆಯಲ್ಲಿ ಬಿಡುವುದರಿಂದ ಅವುಗಳಿಗೂ ತೊಂದರೆ, ಆ ದಾರಿಯಲ್ಲಿ ಪ್ರಯಾಣ ಮಾಡುವವರಿಗೂ ತೊಂದರೆ, ಬೇಜಾವ್ದಾರಿಯಿಂದ ಹಸುವನ್ನು ರಸ್ತೆಯಲ್ಲಿ ಬಿಡುವ ಮಾಲೀಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು, ಹಸುವನ್ನು ಸಾಕುವವರು ಅದರ ಸಂಪೂರ್ಣ ಸುರಕ್ಷತೆಯ ಗಮನಹರಿಸಬೇಕು. ಇದರ ಬಗ್ಗೆ ನಿಮ್ಮ ಅಭಿಪ್ರಾಯವೇನು? ಕಮೆಂಟ್ ಮಾಡಿ.



Click it and Unblock the Notifications