Latest Updates
-
ಗುಜರಾತ್ ಲಿವ್-ಇನ್ ಜೋಡಿಗಳೇ, ಈ ಹೊಸ ನಿಯಮ ಮಿಸ್ ಮಾಡ್ಬೇಡಿ! -
ಹಬ್ಬದ ಅಲಂಕಾರ: ಕಡಿಮೆ ಖರ್ಚಿನಲ್ಲಿ ನಿಮ್ಮ ಮನೆ ಕಂಗೊಳಿಸಲಿ ಹೀಗೆ! -
ಬಿಸಿಲಿನ ತಾಪಕ್ಕೆ ಸುಸ್ತಾದ್ರಾ? ಈ ಪಾನೀಯಗಳು ನಿಮ್ಮನ್ನು ಕಾಪಾಡುತ್ತವೆ -
ಬಿಸಿಗಾಳಿ ಕಾಟ: ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು! -
ಅನುಷ್ಕಾ ಶರ್ಮಾ ಫ್ಲೋರಲ್ ಲುಕ್: ಸ್ಟೇಡಿಯಂನಲ್ಲಿ ಮಿಂಚಲು ಹೀಗೆ ಮಾಡಿ -
ಬಿಸಿಲಿನಲ್ಲಿ ವ್ಯಾಯಾಮ: ಫಿಟ್ ಆಗಿರಲು ಈ ತಪ್ಪುಗಳನ್ನು ಮಾಡಬೇಡಿ! -
ಹೈರಾಕ್ಸ್ ಬೆಂಗಳೂರು: ಗೆಲುವಿಗಾಗಿ ಬೆಳಗಿನ ತಯಾರಿ ಹೀಗಿರಲಿ -
ಡೇಟಿಂಗ್ ಆ್ಯಪ್ ಬಳಕೆದಾರರೇ ಎಚ್ಚರ: ಈ ಕೆಫೆಗಳೇ ನಿಮ್ಮ ಜೇಬಿಗೆ ಕತ್ತರಿ! -
ದೆಹಲಿ-ಎನ್ಸಿಆರ್ ಬಿರುಗಾಳಿ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಹೀಗೆ ಮಾಡಿ -
AJIO ಮಿಡ್ನೈಟ್ ಮೇನಿಯಾ: ಸ್ನೀಕರ್ಸ್ ಮೇಲೆ ಭರ್ಜರಿ ಆಫರ್ ಪಡೆಯೋದು ಹೇಗೆ?
'ಯಾವ ಮಕ್ಕಳು ಅನಾಥರಾಗಲು ಇಷ್ಟ ಪಡಲ್ಲ' ಎಂದು ಮಕ್ಕಳು ರಸ್ತೆ ಗುಂಡಿ ಮುಚ್ಚುತ್ತಿರುವ ವೀಡಿಯೋ ವೈರಲ್
ನಮ್ಮ ಬೆಂಗಳೂರು ರಸ್ತೆಯಲ್ಲಿ ಮರಣ ಗುಂಡಿಗಳಿಗೇನು ಕಡಿಮೆಯಿಲ್ಲ. ಅದರಲ್ಲೂ ಟೂ ವೀಲರ್ನಲ್ಲಿ ಹೋಗುವಾಗ ಮತ್ತಷ್ಟು ಜಾಗ್ರತೆವಹಿಸಬೇಕಾಗುತ್ತದೆ. ಆಗಾಗ ಅಲ್ಲಲ್ಲಿ ತೇಪೆ ಹಾಕುವ ಕಾರ್ಯ ನಡೆಯುತ್ತಿದ್ದರೂ ಸಾವಿರಾರು ಗುಂಡಿಗಳು ಯಮ ಸ್ವರೂಪದಲ್ಲಿ ಬಾಯಿ ತೆರೆದುಕೊಂಡಿವೆ. ಜನರು ಕೂಡ ಅಷ್ಟೇ ಬಿಬಿಎಂಪಿಗೆ ಹಿಡಿ ಶಾಪ ಹಾಕುತ್ತಾ ಸುಮ್ಮನಾಗುತ್ತೇವೆ, ಆದರೆ ಪುಟಾಣಿ ಮಕ್ಕಳು ಮಾಡಿರುವ ಕಾರ್ಯ ಸಾಮಾಜಿಕ ತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು, ನಮ್ಮಂಥ ನಾಗರಿಕರ ಹಾಗೂ ಬಿಬಿಎಂಪಿಯ ಕಣ್ಣು ತೆರೆಸುವಂತಿದೆ.

ಒಂದು ಶಾಲಾ ಮಕ್ಕಳ ಗುಂಪು ಮುಂದೆ ಬಂದು ರಸ್ತೆ ಗುಂಡಿಗಳನ್ನು ಮುಚ್ಚುತ್ತಿರುವ ವೀಡಿಯೋ ಸಾಮಾಜಿಕ ತಾಣದಲ್ಲಿ ತುಂಬಾನೇ ವೈರಲ್ ಆಗುತ್ತಿದೆ.' NO CHILD WANTS TO BE AN ORPHAN' ಅಂದ್ರೆ ಯಾವ ಮಗುವೂ ಅನಾಥವಾಗಲು ಬಯಸಲ್ಲ ಎಂಬ ಕ್ಯಾಪ್ಷನ್ ನೀಡಿ ಈ ವೀಡಿಯೋ ಪೋಸ್ಟ್ ಮಾಡಲಾಗಿದ್ದು ನಾಗರಿಕ ಸಮಾಜಕ್ಕೆ ಸಾಕಷ್ಟು ಸಂದೇಶ ನೀಡುವಂತಿದೆ ಈ ಕಾರ್ಯ.
ಈ ವೀಡಿಯೋ ನೋಡಿದ ನೆಟ್ಟಿಗರು ಸಂತಸ, ಬಿಬಿಎಂಪಿ ವಿರುದ್ಧ ತಮ್ಮ ಆಕ್ರೋಶ ಎಲ್ಲವನ್ನೂ ವ್ಯಕ್ತ ಪಡಿಸುತ್ತಿದ್ದಾರೆ. ಇದರ ಜೊತೆಗೆ ಈ ಮಕ್ಕಳ ಕಾರ್ಯ ನಮ್ಮ ಜವಾಬ್ದಾರಿ ಕೂಡ ನೆನಪಿಸುತ್ತೆ. ನಾವು ವೋಟ್ ಹಾಕಿ ಯ್ಕೆ ಮಾಡುವಾ ಎಂಥವರನ್ನು ಆಯ್ಕೆ ಮಾಡಬೇಕು, ನಮ್ಮ ಸಮಾಜ ಕಟ್ಟಿ ಕೊಡುವಲ್ಲಿ ನಮ್ಮ ಪಾತ್ರವೇನು ಎಂಬುವುದನ್ನು ನೆನಪಿಸುವಂತಿದೆ ಮಕ್ಕಳ ಈ ಕಾರ್ಯ.....
ಈ ಪುಟಾಣಿ ಮಕ್ಕಳು ಆಲೋಚಿಸಿದ ರೀತಿಗೆ, ಅವರ ಕಾರ್ಯಕ್ಕೆ ನಮ್ಮದೊಂದು ಮೆಚ್ಚುಗೆ.....



Click it and Unblock the Notifications












