Latest Updates
-
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ? -
ಪಾರ್ಕ್ಗಳಲ್ಲಿ ನಗು-ಯೋಗದ ಅಲೆ: ಒತ್ತಡ ಮರೆಸಿ ದಿನವಿಡೀ ಎನರ್ಜಿಟಿಕ್ ಆಗಿರೋದು ಹೇಗೆ? -
ಮದುವೆ ಅಥವಾ ಡೇಟಿಂಗ್ ಪ್ಲಾನ್ ಮಾಡಿದ್ದೀರಾ? ಇಂದಿನ ಹವಾಮಾನದ ಅಬ್ಬರಕ್ಕೆ ನಿಮ್ಮ ತಯಾರಿ ಹೇಗಿರಲಿ? -
ಬಿರುಗಾಳಿ ಮಳೆಗೆ ನಿಮ್ಮ ಬಾಲ್ಕನಿ ಗಾರ್ಡನ್ ನಲುಗುತ್ತಿದೆಯೇ? ಗಿಡಗಳನ್ನು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಗೆ ಸುಸ್ತಾದ್ರಾ? ಈ ಪಾನೀಯಗಳಿದ್ದರೆ ಸಾಕು, ಬೇಸಿಗೆಯಲ್ಲೂ ಇರುತ್ತೀರಿ ಫ್ರೆಶ್! -
ಮೆಟ್ ಗಾಲಾ 2026: ಕರಣ್ ಜೋಹರ್ ಎಂಟ್ರಿಯಿಂದ ಫ್ಯಾಷನ್ ಲೋಕದಲ್ಲಿ ಸಂಚಲನ, ಭಾರತದಲ್ಲಿ ವೀಕ್ಷಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಮುಂಜಾನೆಯೇ ವ್ಯಾಯಾಮ: ನಿಮ್ಮ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ
'ಯಾವ ಮಕ್ಕಳು ಅನಾಥರಾಗಲು ಇಷ್ಟ ಪಡಲ್ಲ' ಎಂದು ಮಕ್ಕಳು ರಸ್ತೆ ಗುಂಡಿ ಮುಚ್ಚುತ್ತಿರುವ ವೀಡಿಯೋ ವೈರಲ್
ನಮ್ಮ ಬೆಂಗಳೂರು ರಸ್ತೆಯಲ್ಲಿ ಮರಣ ಗುಂಡಿಗಳಿಗೇನು ಕಡಿಮೆಯಿಲ್ಲ. ಅದರಲ್ಲೂ ಟೂ ವೀಲರ್ನಲ್ಲಿ ಹೋಗುವಾಗ ಮತ್ತಷ್ಟು ಜಾಗ್ರತೆವಹಿಸಬೇಕಾಗುತ್ತದೆ. ಆಗಾಗ ಅಲ್ಲಲ್ಲಿ ತೇಪೆ ಹಾಕುವ ಕಾರ್ಯ ನಡೆಯುತ್ತಿದ್ದರೂ ಸಾವಿರಾರು ಗುಂಡಿಗಳು ಯಮ ಸ್ವರೂಪದಲ್ಲಿ ಬಾಯಿ ತೆರೆದುಕೊಂಡಿವೆ. ಜನರು ಕೂಡ ಅಷ್ಟೇ ಬಿಬಿಎಂಪಿಗೆ ಹಿಡಿ ಶಾಪ ಹಾಕುತ್ತಾ ಸುಮ್ಮನಾಗುತ್ತೇವೆ, ಆದರೆ ಪುಟಾಣಿ ಮಕ್ಕಳು ಮಾಡಿರುವ ಕಾರ್ಯ ಸಾಮಾಜಿಕ ತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು, ನಮ್ಮಂಥ ನಾಗರಿಕರ ಹಾಗೂ ಬಿಬಿಎಂಪಿಯ ಕಣ್ಣು ತೆರೆಸುವಂತಿದೆ.

ಒಂದು ಶಾಲಾ ಮಕ್ಕಳ ಗುಂಪು ಮುಂದೆ ಬಂದು ರಸ್ತೆ ಗುಂಡಿಗಳನ್ನು ಮುಚ್ಚುತ್ತಿರುವ ವೀಡಿಯೋ ಸಾಮಾಜಿಕ ತಾಣದಲ್ಲಿ ತುಂಬಾನೇ ವೈರಲ್ ಆಗುತ್ತಿದೆ.' NO CHILD WANTS TO BE AN ORPHAN' ಅಂದ್ರೆ ಯಾವ ಮಗುವೂ ಅನಾಥವಾಗಲು ಬಯಸಲ್ಲ ಎಂಬ ಕ್ಯಾಪ್ಷನ್ ನೀಡಿ ಈ ವೀಡಿಯೋ ಪೋಸ್ಟ್ ಮಾಡಲಾಗಿದ್ದು ನಾಗರಿಕ ಸಮಾಜಕ್ಕೆ ಸಾಕಷ್ಟು ಸಂದೇಶ ನೀಡುವಂತಿದೆ ಈ ಕಾರ್ಯ.
ಈ ವೀಡಿಯೋ ನೋಡಿದ ನೆಟ್ಟಿಗರು ಸಂತಸ, ಬಿಬಿಎಂಪಿ ವಿರುದ್ಧ ತಮ್ಮ ಆಕ್ರೋಶ ಎಲ್ಲವನ್ನೂ ವ್ಯಕ್ತ ಪಡಿಸುತ್ತಿದ್ದಾರೆ. ಇದರ ಜೊತೆಗೆ ಈ ಮಕ್ಕಳ ಕಾರ್ಯ ನಮ್ಮ ಜವಾಬ್ದಾರಿ ಕೂಡ ನೆನಪಿಸುತ್ತೆ. ನಾವು ವೋಟ್ ಹಾಕಿ ಯ್ಕೆ ಮಾಡುವಾ ಎಂಥವರನ್ನು ಆಯ್ಕೆ ಮಾಡಬೇಕು, ನಮ್ಮ ಸಮಾಜ ಕಟ್ಟಿ ಕೊಡುವಲ್ಲಿ ನಮ್ಮ ಪಾತ್ರವೇನು ಎಂಬುವುದನ್ನು ನೆನಪಿಸುವಂತಿದೆ ಮಕ್ಕಳ ಈ ಕಾರ್ಯ.....
ಈ ಪುಟಾಣಿ ಮಕ್ಕಳು ಆಲೋಚಿಸಿದ ರೀತಿಗೆ, ಅವರ ಕಾರ್ಯಕ್ಕೆ ನಮ್ಮದೊಂದು ಮೆಚ್ಚುಗೆ.....



Click it and Unblock the Notifications
