Latest Updates
-
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ!
'ಯಾವ ಮಕ್ಕಳು ಅನಾಥರಾಗಲು ಇಷ್ಟ ಪಡಲ್ಲ' ಎಂದು ಮಕ್ಕಳು ರಸ್ತೆ ಗುಂಡಿ ಮುಚ್ಚುತ್ತಿರುವ ವೀಡಿಯೋ ವೈರಲ್
ನಮ್ಮ ಬೆಂಗಳೂರು ರಸ್ತೆಯಲ್ಲಿ ಮರಣ ಗುಂಡಿಗಳಿಗೇನು ಕಡಿಮೆಯಿಲ್ಲ. ಅದರಲ್ಲೂ ಟೂ ವೀಲರ್ನಲ್ಲಿ ಹೋಗುವಾಗ ಮತ್ತಷ್ಟು ಜಾಗ್ರತೆವಹಿಸಬೇಕಾಗುತ್ತದೆ. ಆಗಾಗ ಅಲ್ಲಲ್ಲಿ ತೇಪೆ ಹಾಕುವ ಕಾರ್ಯ ನಡೆಯುತ್ತಿದ್ದರೂ ಸಾವಿರಾರು ಗುಂಡಿಗಳು ಯಮ ಸ್ವರೂಪದಲ್ಲಿ ಬಾಯಿ ತೆರೆದುಕೊಂಡಿವೆ. ಜನರು ಕೂಡ ಅಷ್ಟೇ ಬಿಬಿಎಂಪಿಗೆ ಹಿಡಿ ಶಾಪ ಹಾಕುತ್ತಾ ಸುಮ್ಮನಾಗುತ್ತೇವೆ, ಆದರೆ ಪುಟಾಣಿ ಮಕ್ಕಳು ಮಾಡಿರುವ ಕಾರ್ಯ ಸಾಮಾಜಿಕ ತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು, ನಮ್ಮಂಥ ನಾಗರಿಕರ ಹಾಗೂ ಬಿಬಿಎಂಪಿಯ ಕಣ್ಣು ತೆರೆಸುವಂತಿದೆ.

ಒಂದು ಶಾಲಾ ಮಕ್ಕಳ ಗುಂಪು ಮುಂದೆ ಬಂದು ರಸ್ತೆ ಗುಂಡಿಗಳನ್ನು ಮುಚ್ಚುತ್ತಿರುವ ವೀಡಿಯೋ ಸಾಮಾಜಿಕ ತಾಣದಲ್ಲಿ ತುಂಬಾನೇ ವೈರಲ್ ಆಗುತ್ತಿದೆ.' NO CHILD WANTS TO BE AN ORPHAN' ಅಂದ್ರೆ ಯಾವ ಮಗುವೂ ಅನಾಥವಾಗಲು ಬಯಸಲ್ಲ ಎಂಬ ಕ್ಯಾಪ್ಷನ್ ನೀಡಿ ಈ ವೀಡಿಯೋ ಪೋಸ್ಟ್ ಮಾಡಲಾಗಿದ್ದು ನಾಗರಿಕ ಸಮಾಜಕ್ಕೆ ಸಾಕಷ್ಟು ಸಂದೇಶ ನೀಡುವಂತಿದೆ ಈ ಕಾರ್ಯ.
ಈ ವೀಡಿಯೋ ನೋಡಿದ ನೆಟ್ಟಿಗರು ಸಂತಸ, ಬಿಬಿಎಂಪಿ ವಿರುದ್ಧ ತಮ್ಮ ಆಕ್ರೋಶ ಎಲ್ಲವನ್ನೂ ವ್ಯಕ್ತ ಪಡಿಸುತ್ತಿದ್ದಾರೆ. ಇದರ ಜೊತೆಗೆ ಈ ಮಕ್ಕಳ ಕಾರ್ಯ ನಮ್ಮ ಜವಾಬ್ದಾರಿ ಕೂಡ ನೆನಪಿಸುತ್ತೆ. ನಾವು ವೋಟ್ ಹಾಕಿ ಯ್ಕೆ ಮಾಡುವಾ ಎಂಥವರನ್ನು ಆಯ್ಕೆ ಮಾಡಬೇಕು, ನಮ್ಮ ಸಮಾಜ ಕಟ್ಟಿ ಕೊಡುವಲ್ಲಿ ನಮ್ಮ ಪಾತ್ರವೇನು ಎಂಬುವುದನ್ನು ನೆನಪಿಸುವಂತಿದೆ ಮಕ್ಕಳ ಈ ಕಾರ್ಯ.....
ಈ ಪುಟಾಣಿ ಮಕ್ಕಳು ಆಲೋಚಿಸಿದ ರೀತಿಗೆ, ಅವರ ಕಾರ್ಯಕ್ಕೆ ನಮ್ಮದೊಂದು ಮೆಚ್ಚುಗೆ.....



Click it and Unblock the Notifications
