Latest Updates
-
ಬೇಕರಿ ಸ್ಟೈಲ್ ಕಚೋರಿ ರೆಸಿಪಿ.. ಮನೆಯಲ್ಲೇ ಈ 4 ಟೇಸ್ಟಿ ಕಚೋರಿ ಮಾಡಿ! ಹೊಸಬರಿಗೆ ಕೂಡ ಸುಲಭ -
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ! ಪ್ರಣಯ ಜೀವನವು ಸುಖಮಯ -
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ! -
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್!
ಉಡುಪಿಯ ಬಾಹ್ಯಾಕಾಶ ವಿಜ್ಞಾನಿ ರಾಮಚಂದ್ರ ರಾವ್ ಗೌರವ ಸಮರ್ಪಿಸಿದ ಗೂಗಲ್
ಇಂದಿನ ಗೂಗಲ್ ಡೂಡಲ್ ಗಮನಿಸಿದ್ದೀರಾ? ನಮ್ಮ ಹೆಮ್ಮೆಯ ಬಾಹ್ಯಾಕಾಶ ವಿಜ್ಞಾನಿ ಉಡುಪಿಯ ರಾಮಚಂದ್ರ ರಾವ್ ಅವರ 89ನೇ ಹುಟ್ಟುಹಬ್ಬಕ್ಕೆ ಗೂಗಲ್ ಡೂಡಲ್ ಮೂಲಕ ಶುಭ ಕೋರಿದೆ. ಇವರು 'ಭಾರತದ ಸ್ಯಾಟಲೈಟ್ ಮ್ಯಾನ್' ಎಂದೇ ಪ್ರಸಿದ್ಧರಗಿದ್ದರು.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಅಧ್ಯಕ್ಷರಾಗಿದ್ದ ರಾವ್ 1975ರಲ್ಲಿ ಭಾರತ ಬಾಹ್ಯಾಕಾಶಕ್ಕೆ ಕಳುಹಿಸಿದ ಮೊದಲ ಉಪಗ್ರಹ 'ಆರ್ಯಭಟ' ಮೇಲ್ವಿಚಾರಣೆಯ ಹೊಣೆ ಹೊತ್ತಿದ್ದರು.
ಪ್ರೊಫೆಸರ್ ರಾವ್ ಅವರು ಕರ್ನಾಟಕದ ಉಡುಪಿಯವರು. 1932ರಲ್ಲಿ ಇವರ ಜನನ. ಇವರು ವಿದ್ಯಾಭ್ಯಾಸ ಮುಗಿಸಿದ ಬಳಿಕ ಕಾಸ್ಮಿಕ್ ರೇ ಭೌತಶಾಸ್ತ್ರಜ್ಞರಾಗಿ ಹಾಗೂ ಡಾ. ವಿಕ್ರಮ್ ಸಾರಾಭಾಯ್ ಅವರ ಸಹಾಯಕರಾಗಿ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದರು. ಇವರು ತಮ್ಮ ಡಾಕ್ಟರೇಟ್ ಪದವಿ ಬಳಿಕ ಯು ಎಸ್ಗೆ ತೆರಳುತ್ತಾರೆ. ಅಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದರು, ನಾಸಾದಲ್ಲೂ ಬಾಹ್ಯಾಕಾಶ ಶೋಧಕಗಳಲ್ಲಿ ಪ್ರಯೋಗಗಳನ್ನು ನಡೆಸಿದರು.
1966ರಲ್ಲಿ ಭಾರತಕ್ಕೆ ಮರಳಿದರು. 1972ರಲ್ಲಿ ನಮ್ಮ ದೇಶದ ಉಪಗ್ರಹ ಕಾರ್ಯಕ್ರಮವನ್ನು ಮುನ್ನಡೆಸುವ ಬಾಹ್ಯಾಕಾಶ ವಿಜ್ಞಾನದ ಪ್ರಮುಖ ಸಂಸ್ಥೆಯಾದ ಫಿಸಿಕಲ್ ರಿಸರ್ಚ್ ಲ್ಯಾಬೊರೇಟರಿನಲ್ಲಿ ಕಾರ್ಯ ನಿರ್ವಹಿಸಿದರು. 1984ರಿಂದ 94ರವರೆಗೆ ಇಸ್ರೋದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.
2013ರಲ್ಲಿ ಸ್ಯಾಟಲೈಟ್ ಹಾಲ್ ಆಫ್ ಫೇಮ್ಗೆ ಸೇರ್ಪಡೆಯಾದ ಮೊದಲ ಭಾರತೀಯ ಎಂಬ ಹೆಗ್ಗಳಿಕೆ ಇವರದ್ದು. ಬಾಹ್ಯಾಕಾಶ ವಿಜ್ಞಾನಿ 2017ರಲ್ಲಿ ಬಾಹ್ಯಾಕಾಶದಲ್ಲಿ ತಾವು ಒಂದು ನಕ್ಷತ್ರವಾದರು. ಬಾಹ್ಯಾಕಾಶದಲ್ಲಿ ಸಾಧನೆ ಮಾಡ ಬಯಸುವವರಿಗೆ ರಾವ್ ಸ್ಪೂರ್ತಿಯಾಗಿದ್ದಾರೆ.



Click it and Unblock the Notifications











