Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಫ್ಲೈಟ್ನಲ್ಲಿ ಹುಬ್ಬಳ್ಳಿ ಕನ್ನಡದಲ್ಲಿಯೇ ಸೂಚನೆ ನೀಡಿದ ಪೈಲೆಟ್: ವೀಡಿಯೋ ವೈರಲ್
ವಿಮಾನದ ಹತ್ತಿದಾಗ ಇಂಗ್ಲಿಷ್, ಹಿಂದಿ ಭಾಷೆಯಲ್ಲಿ ಸೂಚನೆಗಳನ್ನು ಕೇಳುವುದು ಸಹಜ, ಆದರೆ ಹುಬ್ಬಳ್ಳಿ-ದೆಹಲಿ ನಡುವೆ ಸಂಚಾರ ಆರಂಭಿಸಿದ ವಿಮಾನದಲ್ಲಿ ಕನ್ನಡದಲ್ಲಿ ಸೂಚನೆಗಳು ಕೇಳಿ ಬಂದಾಗ ಅದರಲ್ಲಿದ್ದ ಕನ್ನಡಿಗರಿಗೆ ಅದೆಷ್ಟು ಅಚ್ಚರಿ ಹಾಗೂ ಖುಷಿಯಾಗಿರಬೇಡ.

ಇಂಡಿಗೋ ವಿಮಾನದಲ್ಲಿರುವ ಅಕ್ಷಯ ಪಾಟೀಲ ಉತ್ತರ ಕರ್ನಾಟಕ ಭಾಷೆಯಲ್ಲಿ ಸ್ವಾಗತ ಕೋರಿ ವಿವರಣೆ ನೀಡಿರುವ ವೀಡಿಯೋ ತುಂಬಾನೇ ವೈರಲ್ ಆಗಿದೆ.

ಫ್ಲೈಟ್ನಲ್ಲಿ ಕನ್ನಡದಲ್ಲಿ ಸೂಚನೆ ನೀಡಿದ ಪೈಲೆಟ್
ಪೈಲೆಟ್ ಸೂಚನೆಯನ್ನು ನೀಡುವಾಗ ಸ್ವಚ್ಛ ಹುಬ್ಬಳಿ ಕನ್ನಡ ಭಾಷೆಯಲ್ಲಿ ಹುಬ್ಬಳ್ಳಿಯಿಂದ ನಾವು ಡೆಲ್ಲಿಗೆ ಹೊಂಟೀವಿ, ಡೆಲ್ಲಿಗೆ 17, 000ಕಿಮೀ ಐತ್ರಿ, 2 ಗಂಟೆಯಾಗೆ ಕವರ್ ಮಾಡ್ತೀವ್ರಿ ಎಂದು ಹೇಳಲಾರಂಭಿಸಿದಾಗ ಅದರಲ್ಲಿದ್ದ ಕನ್ನಡಿಗರಿಗೆ ತುಂಬಾನೇ ಖುಷಿಯಾಯ್ತು, ಕೇಂದ್ರ ಸಚಿವ ಪ್ರಹ್ಲಾದ ಜೋಷಿಯವರೂ ಇದೇ ವಿಮಾನದಲ್ಲಿದ್ದರು.

ಮೆಚ್ಚುಗೆ ವ್ಯಕ್ತ ಪಡಿಸಿದ ಕೇಂದ್ರ ಸಚಿವ ಹ್ಲಾದ ಜೋಷಿ
ಕೇಂದ್ರ ಸಚಿವ( ಕೇಂದ್ರದ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವ) ಪ್ರಹ್ಲಾದ ಜೋಷಿ ಕೂಡ ಈ ವೀಡಿಯೋ ಹಂಚಿಕೊಂಡು 'ದೆಹಲಿ ವಿಮಾನದಾಗ ಗಂಡುಮೆಟ್ಟಿದ ನಾಡಿನ ಭಾಷಾ ಸೊಗಡು ನಮ್ಮ ಹುಬ್ಬಳ್ಳಿಯಿಂದ ದೆಹಲಿಗೆ ವಿಮಾನ ಸೇವಾ ಚಾಲೂ ಆತು ಅನ್ನೋದ ಒಂದ ವಿಶೇಷ ಆದ್ರ, ಫ್ಲೈಟ್ ಅನೌನ್ಸ್ಮೆಂಟ್ ಸಹ ನಮ್ಮ ಉತ್ತರ ಕರ್ನಾಟಕ ಭಾಷಾದಾಗ ಆಗಿದ್ದು ಇನ್ನೊಂದು ವಿಶೇಷ.
ನಮ್ಮ ಬೈಲಹೊಂಗಲದವ್ರೇ ಆದ ಅಕ್ಷಯ್ ಪಾಟೀಲ್ ಇವತ್ತಿನ ವಿಮಾನದ ಪೈಲೆಟ್ ಆಗಿದ್ರಿಂದ ಸ್ವಚ್ಛ ಉತ್ತರ ಕರ್ನಾಟಕ ಭಾಷಾದಾಗ ಎಲ್ಲಾ ಪ್ರಯಾಣೀಕರಿಗೆ ಸ್ವಾಗತ ಮಾಡಿ, ರಾಷ್ಟ್ರ ರಾಜಧಾನಿಗೆ ಕರಕೊಂಡ ಹೋದ್ರು. ಇದರಕಿಂತ ಹೆಚ್ಚಿನ ಖುಷಿ ಏನ ಬೇಕ ಹೇಳ್ರಿ...ಉಳಿಬೇಕು ನಮ್ಮ ಭಾಷಾ ಮತ್ತ ಸಂಸ್ಕೃತಿ ಅಂದ್ರ ಪಕ್ಕಾ ಆಗೇ ಆಗ್ತೈತಿ ಪ್ರಗತಿ' ಎಂಬುವುದಾಗಿ ಹೇಳಿದ್ದಾರೆ.

ಕನ್ನಡ ಉಳಿಸಲು, ಬೆಳೆಸಲು ಈ ರೀತಿಯ ಪ್ರಯತ್ನ ಅಗತ್ಯ
ಇದು ತುಂಬಾ ನೂತನ ಪ್ರಯತ್ನ, ಪೈಲೆಟ್ ಹುಬ್ಬಳ್ಳಿ ಕನ್ನಡ ಭಾಷೆಯಲ್ಲಿ ಮಾತನಾಡಿ ಭಾಷೆ ಪ್ರೇಮ ಮರೆದಿರುವ ಈ ವೀಡಿಯೋ ತುಂಬಾನೇ ವೈರಲ್ ಆಗಿದೆ. ನಾವು ವೃತ್ತಿ ಅಂತ ಬಂದಾಗ ನಾವೆಲ್ಲಾ ವ್ಯವಹಾರಿಕ ಭಾಷೆಯನ್ನಾಗಿ ಇಂಗ್ಲಿಷ್ ಹೆಚ್ಚಾಗಿ ಬಳಸುತ್ತೇವೆ. ಆದರೆ ನಮ್ಮ ಕನ್ನಡಿಗರೇ ಸಿಕ್ಕಾಗ ಅವರಿಗೆ ನಮ್ಮ ಭಾಷೆ ಅರ್ಥವಾಗುವಾಗ ಬೇರೆ ಭಾಷೆಯ ಸಹಾಯ ನಿಜವಾಗಲೂ ಬೇಕೆ? ನಮ್ಮ ಭಾಷೆಯನ್ನು ನಾವು ಮಾತನಾಡಿದರೆ ಮಾತ್ರ ಬೆಳೆಸಲು ಸಾಧ್ಯ ಅಲ್ಲವೇ? ನಮ್ಮ ಭಾಷೆಯನ್ನು ಮತ್ತಷ್ಟು ಹೇಗೆ ಶ್ರೀಮಂತಗೊಳಿಸಬೇಕು, ಅದಕ್ಕೆ ನಾವು ಮಾಡಬೇಕಾದ ಚಿಕ್ಕ ಕಾರ್ಯವೇನು ಎಂಬುವುದಕ್ಕೆ ಇದೊಂದು ಅತ್ಯುತ್ತಮವಾದ ಉದಾಹರಣೆ ಎಂದರೆ ತಪ್ಪಾಗಲಾರದು, ಏನಂತೀರಿ?



Click it and Unblock the Notifications