Latest Updates
-
ತೀವ್ರ ಶಾಖದ ಅಲೆ: ಬಿಸಿಲಿನಲ್ಲಿ ವ್ಯಾಯಾಮ ಮಾಡುವ ಮುನ್ನ ಎಚ್ಚರ! -
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ
ವೈರಲ್ ವೀಡಿಯೋ: ಛೇ... ಈ ಕಾಡಾನೆಗೆ ಇರುವ ಬುದ್ಧಿ ಮನುಷ್ಯನಿಗೆ ಇಲ್ಲ
ಮೋದಿಯವರು ಸ್ವಚ್ಛ ಭಾರತ ಅಭಿಯಾನ ಪ್ರಾರಂಭಿಸಿ 6 ವರ್ಷಗಳಾಗಿವೆ, ಆದರೆ ಇಂದಿಗೂ ಅಲ್ಲಲ್ಲಿ ಕಸದ ರಾಶಿ ಬಿದ್ದಿರುವುದನ್ನು ನೋಡುತ್ತೇವೆ. ಅಲ್ಲದೆ ನಾವೆಲ್ಲ ಮಾತನಾಡುವಾಗ ನಮ್ಮ ದೇಶ ಸಿಂಗಾಪೂರದಂತೆ ಇರಬೇಕು ಎಂದು ಎಂದೆಲ್ಲಾ ಹೇಳುತ್ತೇವೆ, ಆದರೆ ಅದಕ್ಕೆ ಸರಕಾರ ಒಂದೇ ಪ್ರಯತ್ನಿಸಿದರೆ ಸಾಲದು ಪ್ರತಿಯೊಬ್ಬ ನಾಗರಿಕನೂ ಮನಸ್ಸು ಮಾಡಬೇಕು, ಇದೆಲ್ಲಾ ಇರಲಿ ಬಿಡಿ, ಇಲ್ಲ ನಾವು ಹೇಳ ಹೊರಟಿರುವುದು ಕಾಡಾನೆಯೊಂದು ಸ್ವಚ್ಛತೆಗೆ ಗಮನ ನೀಡಿರುವ ಕುರಿತು.

ಹೌದು ಆನೆಯೊಂದು ಮನೆಯೊಂದರ (ಹೋಂಸ್ಟೇ ಅಥವಾ ಮನೆನಾ ಅಂತ ನಿಖರತೆ ಇಲ್ಲ) ಸಮೀಪಕ್ಕೆ ಬರುತ್ತದೆ, ಅಲ್ಲಿಗೆ ಬಂದ ಆನೆ ಅಲ್ಲೊಂದು ಬುಟ್ಟಿ ನೋಡುತ್ತದೆ, ಅದರೊಳಗೆ ಮೆಲ್ಲನೆ ಸೊಂಡಿಲ ಇಳಿ ಬಿಡುತ್ತದೆ, ಆಗ ಅದಕ್ಕೆ ಅಲ್ಲಿ ಬುಟ್ಟಿ ಇಟ್ಟಿರುವ ಉದ್ದೇಶ ತಿಳಿಯುತ್ತದೆ. ಆಗ ಅದು ಅಲ್ಲಿಯೇ ಬಿದ್ದಿದ್ದ ಕಸವನ್ನು ತೆಗೆದು ಬುಟ್ಟಿಗೆ ಹಾಕುತ್ತದೆ. ಪಾಪ ಆನೆಗೆ ಕಸವನ್ನು ಬುಟ್ಟಿಗೆ ಹಾಕಬೇಕೆಂದು ಗೊತ್ತಾಯಿತು, ಆದರೆ ಅದನ್ನು ಬಿಸಾಡಿದ ಪುಣ್ಯಾತ್ಮರಿಗೆ ಗೊತ್ತಿರಲಿಲ್ಲ!
ಈ ಅದ್ಭುತ ಪರಿಸರ ಕಾಳಜಿಯ ವೀಡಿಯೋವನ್ನು ಅರಣ್ಯಾಧಿಕಾರಿಯಾಗಿರುವ ಪ್ರವೀಣ್ ಕಾಸ್ವನ್ ಟ್ವಿಟರ್ನಲ್ಲಿ ಹಂಚಿಕೊಂಡಿದ್ದು ವೀಡಿಯೋ ವೈರಲ್ ಆಗಿದೆ, ಆನೆಯ ಬುದ್ಧಿಗೆ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತ ಪಡಿಸುತ್ತಿದ್ದಾರೆ.



Click it and Unblock the Notifications











