Latest Updates
-
ಬಿಸಿಲ ಝಳದಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಸಣ್ಣ ಬದಲಾವಣೆ ಸಾಕು! -
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ!
ವೈರಲ್ ವೀಡಿಯೋ: ಛೇ... ಈ ಕಾಡಾನೆಗೆ ಇರುವ ಬುದ್ಧಿ ಮನುಷ್ಯನಿಗೆ ಇಲ್ಲ
ಮೋದಿಯವರು ಸ್ವಚ್ಛ ಭಾರತ ಅಭಿಯಾನ ಪ್ರಾರಂಭಿಸಿ 6 ವರ್ಷಗಳಾಗಿವೆ, ಆದರೆ ಇಂದಿಗೂ ಅಲ್ಲಲ್ಲಿ ಕಸದ ರಾಶಿ ಬಿದ್ದಿರುವುದನ್ನು ನೋಡುತ್ತೇವೆ. ಅಲ್ಲದೆ ನಾವೆಲ್ಲ ಮಾತನಾಡುವಾಗ ನಮ್ಮ ದೇಶ ಸಿಂಗಾಪೂರದಂತೆ ಇರಬೇಕು ಎಂದು ಎಂದೆಲ್ಲಾ ಹೇಳುತ್ತೇವೆ, ಆದರೆ ಅದಕ್ಕೆ ಸರಕಾರ ಒಂದೇ ಪ್ರಯತ್ನಿಸಿದರೆ ಸಾಲದು ಪ್ರತಿಯೊಬ್ಬ ನಾಗರಿಕನೂ ಮನಸ್ಸು ಮಾಡಬೇಕು, ಇದೆಲ್ಲಾ ಇರಲಿ ಬಿಡಿ, ಇಲ್ಲ ನಾವು ಹೇಳ ಹೊರಟಿರುವುದು ಕಾಡಾನೆಯೊಂದು ಸ್ವಚ್ಛತೆಗೆ ಗಮನ ನೀಡಿರುವ ಕುರಿತು.

ಹೌದು ಆನೆಯೊಂದು ಮನೆಯೊಂದರ (ಹೋಂಸ್ಟೇ ಅಥವಾ ಮನೆನಾ ಅಂತ ನಿಖರತೆ ಇಲ್ಲ) ಸಮೀಪಕ್ಕೆ ಬರುತ್ತದೆ, ಅಲ್ಲಿಗೆ ಬಂದ ಆನೆ ಅಲ್ಲೊಂದು ಬುಟ್ಟಿ ನೋಡುತ್ತದೆ, ಅದರೊಳಗೆ ಮೆಲ್ಲನೆ ಸೊಂಡಿಲ ಇಳಿ ಬಿಡುತ್ತದೆ, ಆಗ ಅದಕ್ಕೆ ಅಲ್ಲಿ ಬುಟ್ಟಿ ಇಟ್ಟಿರುವ ಉದ್ದೇಶ ತಿಳಿಯುತ್ತದೆ. ಆಗ ಅದು ಅಲ್ಲಿಯೇ ಬಿದ್ದಿದ್ದ ಕಸವನ್ನು ತೆಗೆದು ಬುಟ್ಟಿಗೆ ಹಾಕುತ್ತದೆ. ಪಾಪ ಆನೆಗೆ ಕಸವನ್ನು ಬುಟ್ಟಿಗೆ ಹಾಕಬೇಕೆಂದು ಗೊತ್ತಾಯಿತು, ಆದರೆ ಅದನ್ನು ಬಿಸಾಡಿದ ಪುಣ್ಯಾತ್ಮರಿಗೆ ಗೊತ್ತಿರಲಿಲ್ಲ!
ಈ ಅದ್ಭುತ ಪರಿಸರ ಕಾಳಜಿಯ ವೀಡಿಯೋವನ್ನು ಅರಣ್ಯಾಧಿಕಾರಿಯಾಗಿರುವ ಪ್ರವೀಣ್ ಕಾಸ್ವನ್ ಟ್ವಿಟರ್ನಲ್ಲಿ ಹಂಚಿಕೊಂಡಿದ್ದು ವೀಡಿಯೋ ವೈರಲ್ ಆಗಿದೆ, ಆನೆಯ ಬುದ್ಧಿಗೆ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತ ಪಡಿಸುತ್ತಿದ್ದಾರೆ.



Click it and Unblock the Notifications