Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ನಾಯಿಯ ಆಟ ಗಾರೆಯವನಿಗೆ ತಂದಿಟ್ಟ ಪಜೀತಿ ನೋಡಿ: ವೀಡಿಯೋ ವೈರಲ್
ಫೇಸ್ಬುಕ್ ನಾಯಿಯ ತುಂಟಾದ ವೀಡಿಯೋವೊಂದು ತುಂಬಾನೇ ವೈರಲ್ ಆಗಿದೆ. ಕುಂಬಾರನಿಗೆ ವರುಷ ದೊಣ್ಣೆಗೆ ನಿಮಿಷ ಎಂಬ ಗಾದೆ ಮಾತು ಇದೆಯೆಲ್ಲಾ ಈ ವೀಡಿಯೋದಲ್ಲಿರುವ ಸಿಚುವೇಷನ್ಗೆ ತುಂಬಾ ಸೂಟ್ ಆಗುತ್ತೆ.

ಪಾಪ ಗಾರೆಯವರೊಬ್ಬರು ತಮ್ಮ ಕೆಲಸ ಮಾಡ್ತಾ ಇರುತ್ತಾರೆ, ಫ್ಲೋರ್ ರೆಡಿ ಮಾಡುವಾಗ ಅದು ಸೆಟ್ ಆಗುವವರೆಗೆ ಯಾರೂ ಮೆಟ್ಟಬೇಡಿ ಎಂದು ಹೇಳುತ್ತಾರೆ, ಏಕೆಂದರೆ ಸಿಮೆಂಟ್ ಸೆಟ್ ಆಗಲು ನಿಷ್ಠ 24 ಗಂಟೆ ಸಮಯಬೇಕು, ಇಲ್ಲದಿದ್ದರೆ ನಾವು ನಡೆದಾಡುವ ಕಾಲಿನ ಮಾರ್ಕ್ಸ್ ಅಚ್ಚೊತ್ತಿದಂತೆ ಹಾಗೇ ಉಳಿದುಕೊಳ್ಳುವುದು. ಆ ಕಾರಣಕ್ಕೆ ಮನೆಯ ನಾಯಿ-ಬೆಕ್ಕು ಕೂಡ ಆ ಕಡೆ ಸುಳಿಯದಂತೆ ಎಚ್ಚರವಹಿಸಲಾಗುವುದು.
ಈ ವೀಡಿಯೋದಲ್ಲಿ ನೋಡಬಹುದು, ಆ ವ್ಯಕ್ತಿ ಮನೆಯ ವರಾಂಡವನ್ನು ತೆಳಿ ಹಾಕಿ ಸರಿ ತಮಾಸ್ (ಸಮತಟ್ಟಾಗಿ ಮಾಡುವುದು) ಮಾಡ್ತಾ ಇರ್ತಾನೆ, ಆದರೆ ಆ ಮನೆಯವರು ಸಾಕಿದ ನಾಯಿಮರಿ ಓಡಿಕೊಂಡು ಬಂದು ತನ್ನ ಹೆಜ್ಜೆ ಗುರುತು ಮೂಡಿಸುತ್ತದೆ, ಆತ ಅದನ್ನು ಓಡಿಸಿ ಮತ್ತೆ ಸರಿ ಮಾಡುತ್ತಾನೆ, ನೋಡಿದರೆ ನಾಯಿ ಮತ್ತೆ ಓಡಿ ಬಂದು ಅಲ್ಲಿಲ್ಲಾ ತನ್ನ ಹೆಜ್ಜೆ ಗುರುತು ಮೂಡಿಸಿ ಓಡುತ್ತದೆ.
ಪಾಪ ಅಷ್ಟು ಕಷ್ಟಪಟ್ಟು ಮಾಡಿದ ಕೆಲಸ ಕ್ಷಣಾರ್ಧದಲ್ಲಿ ನಾಶವಾಗುತ್ತೆ, ಆದರೆ ಆ ಗಾರೆಯವರ ತಾಳ್ಮೆಗೆ ಮೆಚ್ಚಲೇಬೇಕು, ಬೇರೆಯವರು ಆದರೆ ನಾಯಿಗೆ ಪೆಟ್ ಬೀಳುತ್ತಿತ್ತು, ಅವರು ಅದನ್ನು ಓಡಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಈ ವೀಡಿಯೋ ನೋಡಿದವರು ಒಬ್ಬೊಬ್ಬರು ಒಂದೊಂದು ರೀತಿ ಪ್ರತಿಕ್ರಿಯಿಸುತ್ತಿದ್ದಾರೆ. ನಾನಾದರೆ ಆ ನಾಯಿಗೆ ರಪ್ ಅಂತ ಕೊಡ್ತಾ ಇದ್ದೆ ಎಂದು ಒಬ್ಬರು ಹೇಳಿದರೆ ಮತ್ತೊಬ್ಬರು ಕಷ್ಟಪಟ್ಟವರಿಗೆ ಮಾತ್ರ ಆ ಶ್ರಮ ಗೊತ್ತಿರುತ್ತದೆ ಎಂದೆಲ್ಲಾ ಕಮೆಂಟ್ ಮಾಡ್ತಾ ಇದ್ದಾರೆ.
ಏನೇ ಆಗಲಿ ನಮ್ಮ ಮನೆಯಲ್ಲಿ ಗಾರೆ ಕೆಲಸ ಮಾಡಿಸ್ತಾ ಇದ್ದೇವೆ ಹಾಗಾಗಿ ನಾಯಿಯನ್ನು ಕಟ್ಟಿ ಹಾಕಬೇಕು ಎಂಬ ಅರಿವು ಸಾಕಿದವರಿಗೆ ಇರಬೇಕಾಗಿತ್ತು, ಪಾಪಾ ಆ ವ್ಯಕ್ತಿಯ ಪಜೀತಿ ನೋಡುವಾಗ ಅಯ್ಯೋ ಅನಿಸದೆ ಇರಲ್ಲ.
ಈ ವೀಡಿಯೋ ನೋಡಿ ನಿಮಗೆ ಏನನಿಸಿತ್ತು ಅಂತ ಕಮೆಂಟ್ ಮಾಡಿ.



Click it and Unblock the Notifications
