Latest Updates
-
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ನಾಯಿಯ ಆಟ ಗಾರೆಯವನಿಗೆ ತಂದಿಟ್ಟ ಪಜೀತಿ ನೋಡಿ: ವೀಡಿಯೋ ವೈರಲ್
ಫೇಸ್ಬುಕ್ ನಾಯಿಯ ತುಂಟಾದ ವೀಡಿಯೋವೊಂದು ತುಂಬಾನೇ ವೈರಲ್ ಆಗಿದೆ. ಕುಂಬಾರನಿಗೆ ವರುಷ ದೊಣ್ಣೆಗೆ ನಿಮಿಷ ಎಂಬ ಗಾದೆ ಮಾತು ಇದೆಯೆಲ್ಲಾ ಈ ವೀಡಿಯೋದಲ್ಲಿರುವ ಸಿಚುವೇಷನ್ಗೆ ತುಂಬಾ ಸೂಟ್ ಆಗುತ್ತೆ.

ಪಾಪ ಗಾರೆಯವರೊಬ್ಬರು ತಮ್ಮ ಕೆಲಸ ಮಾಡ್ತಾ ಇರುತ್ತಾರೆ, ಫ್ಲೋರ್ ರೆಡಿ ಮಾಡುವಾಗ ಅದು ಸೆಟ್ ಆಗುವವರೆಗೆ ಯಾರೂ ಮೆಟ್ಟಬೇಡಿ ಎಂದು ಹೇಳುತ್ತಾರೆ, ಏಕೆಂದರೆ ಸಿಮೆಂಟ್ ಸೆಟ್ ಆಗಲು ನಿಷ್ಠ 24 ಗಂಟೆ ಸಮಯಬೇಕು, ಇಲ್ಲದಿದ್ದರೆ ನಾವು ನಡೆದಾಡುವ ಕಾಲಿನ ಮಾರ್ಕ್ಸ್ ಅಚ್ಚೊತ್ತಿದಂತೆ ಹಾಗೇ ಉಳಿದುಕೊಳ್ಳುವುದು. ಆ ಕಾರಣಕ್ಕೆ ಮನೆಯ ನಾಯಿ-ಬೆಕ್ಕು ಕೂಡ ಆ ಕಡೆ ಸುಳಿಯದಂತೆ ಎಚ್ಚರವಹಿಸಲಾಗುವುದು.
ಈ ವೀಡಿಯೋದಲ್ಲಿ ನೋಡಬಹುದು, ಆ ವ್ಯಕ್ತಿ ಮನೆಯ ವರಾಂಡವನ್ನು ತೆಳಿ ಹಾಕಿ ಸರಿ ತಮಾಸ್ (ಸಮತಟ್ಟಾಗಿ ಮಾಡುವುದು) ಮಾಡ್ತಾ ಇರ್ತಾನೆ, ಆದರೆ ಆ ಮನೆಯವರು ಸಾಕಿದ ನಾಯಿಮರಿ ಓಡಿಕೊಂಡು ಬಂದು ತನ್ನ ಹೆಜ್ಜೆ ಗುರುತು ಮೂಡಿಸುತ್ತದೆ, ಆತ ಅದನ್ನು ಓಡಿಸಿ ಮತ್ತೆ ಸರಿ ಮಾಡುತ್ತಾನೆ, ನೋಡಿದರೆ ನಾಯಿ ಮತ್ತೆ ಓಡಿ ಬಂದು ಅಲ್ಲಿಲ್ಲಾ ತನ್ನ ಹೆಜ್ಜೆ ಗುರುತು ಮೂಡಿಸಿ ಓಡುತ್ತದೆ.
ಪಾಪ ಅಷ್ಟು ಕಷ್ಟಪಟ್ಟು ಮಾಡಿದ ಕೆಲಸ ಕ್ಷಣಾರ್ಧದಲ್ಲಿ ನಾಶವಾಗುತ್ತೆ, ಆದರೆ ಆ ಗಾರೆಯವರ ತಾಳ್ಮೆಗೆ ಮೆಚ್ಚಲೇಬೇಕು, ಬೇರೆಯವರು ಆದರೆ ನಾಯಿಗೆ ಪೆಟ್ ಬೀಳುತ್ತಿತ್ತು, ಅವರು ಅದನ್ನು ಓಡಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಈ ವೀಡಿಯೋ ನೋಡಿದವರು ಒಬ್ಬೊಬ್ಬರು ಒಂದೊಂದು ರೀತಿ ಪ್ರತಿಕ್ರಿಯಿಸುತ್ತಿದ್ದಾರೆ. ನಾನಾದರೆ ಆ ನಾಯಿಗೆ ರಪ್ ಅಂತ ಕೊಡ್ತಾ ಇದ್ದೆ ಎಂದು ಒಬ್ಬರು ಹೇಳಿದರೆ ಮತ್ತೊಬ್ಬರು ಕಷ್ಟಪಟ್ಟವರಿಗೆ ಮಾತ್ರ ಆ ಶ್ರಮ ಗೊತ್ತಿರುತ್ತದೆ ಎಂದೆಲ್ಲಾ ಕಮೆಂಟ್ ಮಾಡ್ತಾ ಇದ್ದಾರೆ.
ಏನೇ ಆಗಲಿ ನಮ್ಮ ಮನೆಯಲ್ಲಿ ಗಾರೆ ಕೆಲಸ ಮಾಡಿಸ್ತಾ ಇದ್ದೇವೆ ಹಾಗಾಗಿ ನಾಯಿಯನ್ನು ಕಟ್ಟಿ ಹಾಕಬೇಕು ಎಂಬ ಅರಿವು ಸಾಕಿದವರಿಗೆ ಇರಬೇಕಾಗಿತ್ತು, ಪಾಪಾ ಆ ವ್ಯಕ್ತಿಯ ಪಜೀತಿ ನೋಡುವಾಗ ಅಯ್ಯೋ ಅನಿಸದೆ ಇರಲ್ಲ.
ಈ ವೀಡಿಯೋ ನೋಡಿ ನಿಮಗೆ ಏನನಿಸಿತ್ತು ಅಂತ ಕಮೆಂಟ್ ಮಾಡಿ.



Click it and Unblock the Notifications