Latest Updates
-
ಮೊಟ್ಟೆ ದರ ಏರಿಕೆ ಚಿಂತೆಯೇ? ಕಡಿಮೆ ಬಜೆಟ್ನಲ್ಲಿ ಪ್ರೋಟೀನ್ ಪಡೆಯಲು ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ಕುಟುಂಬದೊಂದಿಗೆ ಸಂಭ್ರಮಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಪ್ಲಾನ್! -
ವರ್ಕ್ ಫ್ರಮ್ ಹೋಮ್ ಜೊತೆ ಭಾರತ-ಶ್ರೀಲಂಕಾ ಟೆಸ್ಟ್ ಮ್ಯಾಚ್: ಲೈವ್ ಸ್ಕೋರ್ ಮತ್ತು ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
ದೆಹಲಿ ಟಫ್ಮನ್ ಹಾಫ್ ಮ್ಯಾರಥಾನ್: ತೇವಾಂಶದ ನಡುವೆಯೂ ಓಟದಲ್ಲಿ ಮಿಂಚಲು ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರು ರನ್ನಿಂಗ್ ಡೇ: ಮಳೆಗಾಲದಲ್ಲಿ ಓಡುವಾಗ ಈ ತಪ್ಪುಗಳನ್ನು ಮಾಡಬೇಡಿ, ಸುರಕ್ಷಿತವಾಗಿರಿ! -
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್!
ಕೋವಿಡ್ 19 ವಿರುದ್ಧ ಹೋರಾಟ: ವೈದ್ಯಾಧಿಕಾರಿ ಫೋಟೋಗೆ ಮಿಡಿದ ಜನರ ಮನ
ಒಂದು ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು ಆ ಫೋಟೋ ಕೊರೊನಾವೈರಸ್ ವಿರುದ್ಧ ಹೋರಾಡುತ್ತಿರುವ ನರ್ಸ್, ಡಾಕ್ಟರ್ಗಳ ಸೇವೆಗೆ ಹಿಡಿದಿರುವ ಕೈಗನ್ನಡಿಯಾಗಿದೆ.
ಆ ಫೋಟೋ ನೋಡುತ್ತಿದ್ದರೆ ನಿಜ ಜೀವನದ ಅಂಥ ಹೀರೋಗಳ ಬಗ್ಗೆ ಹೆಮ್ಮೆಯುಂಟಾಗುವುದು, ಅವರ ಸೇವೆಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು ಅನಿಸದೆ ಇರಲ್ಲ.

ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಾಡಿರುವ ಒಂದು ಫೋಟೋ ಇದೀಗ ಇಡೀ ದೇಶದ ಜನತೆಯ ಗಮನ ಸೆಳೆದಿದೆ. ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ನಿರಂತರವಾಗಿ ವೈದ್ಯರು, ನರ್ಸ್ಗಳು ಶ್ರಮಿಸುತ್ತಿದ್ದಾರೆ. ಮಧ್ಯ ಪ್ರದೇಶದ ಭೋಪಾಲ್ ಜಿಲ್ಲೆಯ ಮುಖ್ಯ ಆರೋಗ್ಯಾಧಿಕಾರಿ ಡಾ. ಸುಧೀರ್ ದೆಹರಿಯಾ ಮಾಡಿರುವ ಕಾರ್ಯ ಎಲ್ಲರ ಗಮನ ಸೆಳೆದಿದೆ.

ವೈದ್ಯನ ಕಾರ್ಯಕ್ಕೆ ಮೆಚ್ಚುಗೆ
ಮಧ್ಯಪ್ರದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಗಲು-ಇರಳು ಎನ್ನದೆ ಕೆಲಸ ಮಾಡಿದ ಆರೋಗ್ಯ ಅಧಿಕಾರಿ 5 ದಿನಗಳ ಬಳಿಕ ಮನೆಗೆ ತೆರಳುತ್ತಾರೆ. ಆದರೆ ಅವರು ಮನೆಯೊಳಗೆ ಹೋಗುವುದಿಲ್ಲ. ಬದಲಿಗೆ ಮನೆಯ ಗೇಟಿನ ಹೊರಗಡೆ ಕೂತು ಟೀ ಕುಡಿದು, ಪತ್ನಿ-ಮಕ್ಕಳನ್ನು ನೋಡಿ ಕೆಲಸಕ್ಕೆ ಹಿಂತಿರುಗುತ್ತಾರೆ. ಇದೀಗ ಅವರು ಮಾಡಿರುವ ಕಾರ್ಯಕ್ಕೆ ಮೆಚ್ಚುಗೆ ಸಿಕ್ಕಿದೆ.

ಕೋವಿಡ್ 19 ವಿರುದ್ಧ ಹೋರಾಡುತ್ತಿರುವ ಹೀರೋಗಳು
ಏಕೆಂದರೆ ಅವರು ಆಸ್ಪತ್ರೆಯಲ್ಲಿ ಸೋಂಕಿತರ ಸೇವೆ ಮಾಡುವುದರಿಂದ ಮನೆಗೆ ಹೋಗುವುದು ಅಷ್ಟು ಸುರಕ್ಷಿತವಲ್ಲ. ಡಾ. ಸುಧೀರ್ ಸೇರಿದಂತೆ ಲಕ್ಷಾಂತರ ವೈದ್ಯಕೀಯ ಸಿಬ್ಬಂದಿ ಕೊರೊನಾ ಎಂಬ ವೈರಸ್ನ ವಿರುದ್ಧ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹೋರಾಡುತ್ತಿದ್ದಾರೆ. ಅವರ ಬಗ್ಗೆ ಹೆಮ್ಮೆ ಪಡುವುದು ಮಾತ್ರವಲ್ಲ, ಅವರಿಗೆ ಸಹಾಯ ಮಾಡುವ ಕಾರ್ಯವನ್ನು ನಾವು ಮಾಡಬೇಕಾಗಿದೆ.

ನಾವೇನು ಮಾಡಬೇಕು?
ನಾವು ಅವರಿಗೆ ಸಹಾಯ ಮಾಡಲು ಬೇರೇನೂ ಮಾಡಬೇಕಾಗಿಲ್ಲ, ನಮ್ಮ ಮನೆಯೊಳಗೆ ನಾವಿದ್ದರೆ ಸಾಕು. ಆದರೆ ನಮ್ಮ ಜನರು ಅದನ್ನು ಅರ್ಥ ಮಾಡಿಕೊಳ್ಳುತ್ತನೇ ಇಲ್ಲ, ಸ್ವಲ್ಪ ಅವಕಾಶ ಸಿಕ್ಕರೂ ಗುಂಪು-ಗುಂಪಾಗಿ ಸೇರಿ ಬಿಡುತ್ತಾರೆ. ಜನರು ಗುಂಪು ಸೇರದಂತೆ, ಕ್ವಾರೆಂಟೈನ್ನಲ್ಲಿ ಇರುವವರು ಹೊರಗಡೆ ಓಡಾಡದಂತೆ ಮಾಡುವುದೇ ಹರಸಾಹಸವಾಗಿದೆ.

ಕೊರೊನಾವೈರಸ್ ವಿರುದ್ಧ ಹೋರಾಡೋಣ
ಇಡೀ ದೇಶ ಕೊರೊನಾವೈರಸ್ ವಿರುದ್ಧ ಸಾರಿರುವ ಸಮರದಲ್ಲಿ ಜಯ ಸಾಧಿಸಲು ನಾವೆಲ್ಲಾ ಕೈಜೋಡಿಸೋಣ, ಮನೆಯಲ್ಲಿಯೇ ಇದ್ದು, ಈ ಮಹಾಮಾರಿ ತೊಲಗಿಸೋಣ. ಆಗಾಗ ನಿಮ್ಮ ಕೈಗಳನ್ನು ತೊಳೆಯುತ್ತಾ ಇರಿ. ಕೆಮ್ಮು, ಜ್ವರ, ಉಸಿರಾಟದ ತೊಂದರೆ ಕಾಣಿಸಿದರೆ ಕೂಡಲೇ ಇತತರಿಂದ ಅಂತರ ಕಾಯ್ದುಕೊಂಡು ವೈದ್ಯರಿಗೆ ಕರೆ ಮಾಡಿ ತಿಳಿಸಿ.ಕೋವಿಡ್ 19 ಬಗ್ಗೆ ಭಯ ಬೇಡ, ಮುನ್ನೆಚ್ಚರಿಕೆಯಿಂದ ಇರಿ.



Click it and Unblock the Notifications