Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ಕೋವಿಡ್ 19 ವಿರುದ್ಧ ಹೋರಾಟ: ವೈದ್ಯಾಧಿಕಾರಿ ಫೋಟೋಗೆ ಮಿಡಿದ ಜನರ ಮನ
ಒಂದು ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು ಆ ಫೋಟೋ ಕೊರೊನಾವೈರಸ್ ವಿರುದ್ಧ ಹೋರಾಡುತ್ತಿರುವ ನರ್ಸ್, ಡಾಕ್ಟರ್ಗಳ ಸೇವೆಗೆ ಹಿಡಿದಿರುವ ಕೈಗನ್ನಡಿಯಾಗಿದೆ.
ಆ ಫೋಟೋ ನೋಡುತ್ತಿದ್ದರೆ ನಿಜ ಜೀವನದ ಅಂಥ ಹೀರೋಗಳ ಬಗ್ಗೆ ಹೆಮ್ಮೆಯುಂಟಾಗುವುದು, ಅವರ ಸೇವೆಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು ಅನಿಸದೆ ಇರಲ್ಲ.

ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಾಡಿರುವ ಒಂದು ಫೋಟೋ ಇದೀಗ ಇಡೀ ದೇಶದ ಜನತೆಯ ಗಮನ ಸೆಳೆದಿದೆ. ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ನಿರಂತರವಾಗಿ ವೈದ್ಯರು, ನರ್ಸ್ಗಳು ಶ್ರಮಿಸುತ್ತಿದ್ದಾರೆ. ಮಧ್ಯ ಪ್ರದೇಶದ ಭೋಪಾಲ್ ಜಿಲ್ಲೆಯ ಮುಖ್ಯ ಆರೋಗ್ಯಾಧಿಕಾರಿ ಡಾ. ಸುಧೀರ್ ದೆಹರಿಯಾ ಮಾಡಿರುವ ಕಾರ್ಯ ಎಲ್ಲರ ಗಮನ ಸೆಳೆದಿದೆ.

ವೈದ್ಯನ ಕಾರ್ಯಕ್ಕೆ ಮೆಚ್ಚುಗೆ
ಮಧ್ಯಪ್ರದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಗಲು-ಇರಳು ಎನ್ನದೆ ಕೆಲಸ ಮಾಡಿದ ಆರೋಗ್ಯ ಅಧಿಕಾರಿ 5 ದಿನಗಳ ಬಳಿಕ ಮನೆಗೆ ತೆರಳುತ್ತಾರೆ. ಆದರೆ ಅವರು ಮನೆಯೊಳಗೆ ಹೋಗುವುದಿಲ್ಲ. ಬದಲಿಗೆ ಮನೆಯ ಗೇಟಿನ ಹೊರಗಡೆ ಕೂತು ಟೀ ಕುಡಿದು, ಪತ್ನಿ-ಮಕ್ಕಳನ್ನು ನೋಡಿ ಕೆಲಸಕ್ಕೆ ಹಿಂತಿರುಗುತ್ತಾರೆ. ಇದೀಗ ಅವರು ಮಾಡಿರುವ ಕಾರ್ಯಕ್ಕೆ ಮೆಚ್ಚುಗೆ ಸಿಕ್ಕಿದೆ.

ಕೋವಿಡ್ 19 ವಿರುದ್ಧ ಹೋರಾಡುತ್ತಿರುವ ಹೀರೋಗಳು
ಏಕೆಂದರೆ ಅವರು ಆಸ್ಪತ್ರೆಯಲ್ಲಿ ಸೋಂಕಿತರ ಸೇವೆ ಮಾಡುವುದರಿಂದ ಮನೆಗೆ ಹೋಗುವುದು ಅಷ್ಟು ಸುರಕ್ಷಿತವಲ್ಲ. ಡಾ. ಸುಧೀರ್ ಸೇರಿದಂತೆ ಲಕ್ಷಾಂತರ ವೈದ್ಯಕೀಯ ಸಿಬ್ಬಂದಿ ಕೊರೊನಾ ಎಂಬ ವೈರಸ್ನ ವಿರುದ್ಧ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹೋರಾಡುತ್ತಿದ್ದಾರೆ. ಅವರ ಬಗ್ಗೆ ಹೆಮ್ಮೆ ಪಡುವುದು ಮಾತ್ರವಲ್ಲ, ಅವರಿಗೆ ಸಹಾಯ ಮಾಡುವ ಕಾರ್ಯವನ್ನು ನಾವು ಮಾಡಬೇಕಾಗಿದೆ.

ನಾವೇನು ಮಾಡಬೇಕು?
ನಾವು ಅವರಿಗೆ ಸಹಾಯ ಮಾಡಲು ಬೇರೇನೂ ಮಾಡಬೇಕಾಗಿಲ್ಲ, ನಮ್ಮ ಮನೆಯೊಳಗೆ ನಾವಿದ್ದರೆ ಸಾಕು. ಆದರೆ ನಮ್ಮ ಜನರು ಅದನ್ನು ಅರ್ಥ ಮಾಡಿಕೊಳ್ಳುತ್ತನೇ ಇಲ್ಲ, ಸ್ವಲ್ಪ ಅವಕಾಶ ಸಿಕ್ಕರೂ ಗುಂಪು-ಗುಂಪಾಗಿ ಸೇರಿ ಬಿಡುತ್ತಾರೆ. ಜನರು ಗುಂಪು ಸೇರದಂತೆ, ಕ್ವಾರೆಂಟೈನ್ನಲ್ಲಿ ಇರುವವರು ಹೊರಗಡೆ ಓಡಾಡದಂತೆ ಮಾಡುವುದೇ ಹರಸಾಹಸವಾಗಿದೆ.

ಕೊರೊನಾವೈರಸ್ ವಿರುದ್ಧ ಹೋರಾಡೋಣ
ಇಡೀ ದೇಶ ಕೊರೊನಾವೈರಸ್ ವಿರುದ್ಧ ಸಾರಿರುವ ಸಮರದಲ್ಲಿ ಜಯ ಸಾಧಿಸಲು ನಾವೆಲ್ಲಾ ಕೈಜೋಡಿಸೋಣ, ಮನೆಯಲ್ಲಿಯೇ ಇದ್ದು, ಈ ಮಹಾಮಾರಿ ತೊಲಗಿಸೋಣ. ಆಗಾಗ ನಿಮ್ಮ ಕೈಗಳನ್ನು ತೊಳೆಯುತ್ತಾ ಇರಿ. ಕೆಮ್ಮು, ಜ್ವರ, ಉಸಿರಾಟದ ತೊಂದರೆ ಕಾಣಿಸಿದರೆ ಕೂಡಲೇ ಇತತರಿಂದ ಅಂತರ ಕಾಯ್ದುಕೊಂಡು ವೈದ್ಯರಿಗೆ ಕರೆ ಮಾಡಿ ತಿಳಿಸಿ.ಕೋವಿಡ್ 19 ಬಗ್ಗೆ ಭಯ ಬೇಡ, ಮುನ್ನೆಚ್ಚರಿಕೆಯಿಂದ ಇರಿ.



Click it and Unblock the Notifications