Latest Updates
-
ಅಬ್ಬಬ್ಬಾ ಎಂಥಾ ರುಚಿ ಈ ಈರುಳ್ಳಿ ಮಂಚೂರಿಯನ್: ನೀವೂ ಕೂಡ ಟ್ರೈ ಮಾಡಿ -
ಮಾರ್ಚ್ನಲ್ಲಿ ಕಾಳಸರ್ಪ ಯೋಗ: ಈ ರಾಶಿಯವರಿಗೆ ಯೋಗದಿಂದ ಇದೆ ದೊಡ್ಡ ಲಾಭ! -
ದೇಹದಲ್ಲಿ ರಕ್ತ ಕಡಿಮೆ ಆಗಿದ್ರೆ ಈ ಎಳ್ಳುಂಡೆ ಮಾಡಿ: ತಿಂಗಳ ಕಾಲ ಇಟ್ಟು ಸವಿಯಬಹುದು! -
ಕರ್ನಾಟಕ ಬಜೆಟ್ 2026: ಆರೋಗ್ಯ ವಲಯಕ್ಕೆ ಬಂಪರ್, ಹೊಸ ಯೋಜನೆಗಳೇನು ನೋಡಿ! -
ನಾಳೆ ಸೂರ್ಯ-ಬುಧ ಸಂಯೋಗ: ಬುಧಾದಿತ್ಯ ಯೋಗದಿಂದ ಈ ರಾಶಿಯವರ ಬದುಕಲ್ಲಿ ಬೆಳಕು! -
ತೂಕ ಇಳಿಸಲು ಪೇಪರ್ ಅಷ್ಟು ತೆಳುವಾದ ರಾಗಿ ದೋಸೆ ಮಾಡಿ! -
ಜೀವನದಲ್ಲಿ ಮಹತ್ವದ ಬದಲಾವಣೆ, ವೈವಾಹಿಕ ಯೋಗ! ಕೊಂಚ ಒತ್ತಡ, ತಾಳ್ಮೆ ಇರಲಿ -
March 06 Horoscope: ಸಾಲ ನೀಡುವಾಗ ಹತ್ತು ಬಾರಿ ಆಲೋಚಿಸಿ! -
ಮೈದಾ, ಮೊಟ್ಟೆ ಎರಡೂ ಬೇಡ! ಈ ಹೊಸ ರುಚಿಯ ಕೇಕ್ ಮಾಡಿ ನೋಡಿ.. ಶುಗರ್ ಇರುವವರು ತಿನ್ನಬಹುದು -
ಉದ್ದು ಬೇಡ 1 ಕಪ್ ರವೆ ಇದ್ರೆ ಥಟ್ ಅಂತ ವಡೆ ಮಾಡಿಕೊಳ್ಳಿ: ಬ್ರೇಕ್ಫಾಸ್ಟ್ಗೆ ಇದು ಬೆಸ್ಟ್ ರೆಸಿಪಿ!
ಕೋವಿಡ್ 19 ವಿರುದ್ಧ ಹೋರಾಟ: ವೈದ್ಯಾಧಿಕಾರಿ ಫೋಟೋಗೆ ಮಿಡಿದ ಜನರ ಮನ
ಒಂದು ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು ಆ ಫೋಟೋ ಕೊರೊನಾವೈರಸ್ ವಿರುದ್ಧ ಹೋರಾಡುತ್ತಿರುವ ನರ್ಸ್, ಡಾಕ್ಟರ್ಗಳ ಸೇವೆಗೆ ಹಿಡಿದಿರುವ ಕೈಗನ್ನಡಿಯಾಗಿದೆ.
ಆ ಫೋಟೋ ನೋಡುತ್ತಿದ್ದರೆ ನಿಜ ಜೀವನದ ಅಂಥ ಹೀರೋಗಳ ಬಗ್ಗೆ ಹೆಮ್ಮೆಯುಂಟಾಗುವುದು, ಅವರ ಸೇವೆಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು ಅನಿಸದೆ ಇರಲ್ಲ.

ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಾಡಿರುವ ಒಂದು ಫೋಟೋ ಇದೀಗ ಇಡೀ ದೇಶದ ಜನತೆಯ ಗಮನ ಸೆಳೆದಿದೆ. ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ನಿರಂತರವಾಗಿ ವೈದ್ಯರು, ನರ್ಸ್ಗಳು ಶ್ರಮಿಸುತ್ತಿದ್ದಾರೆ. ಮಧ್ಯ ಪ್ರದೇಶದ ಭೋಪಾಲ್ ಜಿಲ್ಲೆಯ ಮುಖ್ಯ ಆರೋಗ್ಯಾಧಿಕಾರಿ ಡಾ. ಸುಧೀರ್ ದೆಹರಿಯಾ ಮಾಡಿರುವ ಕಾರ್ಯ ಎಲ್ಲರ ಗಮನ ಸೆಳೆದಿದೆ.

ವೈದ್ಯನ ಕಾರ್ಯಕ್ಕೆ ಮೆಚ್ಚುಗೆ
ಮಧ್ಯಪ್ರದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಗಲು-ಇರಳು ಎನ್ನದೆ ಕೆಲಸ ಮಾಡಿದ ಆರೋಗ್ಯ ಅಧಿಕಾರಿ 5 ದಿನಗಳ ಬಳಿಕ ಮನೆಗೆ ತೆರಳುತ್ತಾರೆ. ಆದರೆ ಅವರು ಮನೆಯೊಳಗೆ ಹೋಗುವುದಿಲ್ಲ. ಬದಲಿಗೆ ಮನೆಯ ಗೇಟಿನ ಹೊರಗಡೆ ಕೂತು ಟೀ ಕುಡಿದು, ಪತ್ನಿ-ಮಕ್ಕಳನ್ನು ನೋಡಿ ಕೆಲಸಕ್ಕೆ ಹಿಂತಿರುಗುತ್ತಾರೆ. ಇದೀಗ ಅವರು ಮಾಡಿರುವ ಕಾರ್ಯಕ್ಕೆ ಮೆಚ್ಚುಗೆ ಸಿಕ್ಕಿದೆ.

ಕೋವಿಡ್ 19 ವಿರುದ್ಧ ಹೋರಾಡುತ್ತಿರುವ ಹೀರೋಗಳು
ಏಕೆಂದರೆ ಅವರು ಆಸ್ಪತ್ರೆಯಲ್ಲಿ ಸೋಂಕಿತರ ಸೇವೆ ಮಾಡುವುದರಿಂದ ಮನೆಗೆ ಹೋಗುವುದು ಅಷ್ಟು ಸುರಕ್ಷಿತವಲ್ಲ. ಡಾ. ಸುಧೀರ್ ಸೇರಿದಂತೆ ಲಕ್ಷಾಂತರ ವೈದ್ಯಕೀಯ ಸಿಬ್ಬಂದಿ ಕೊರೊನಾ ಎಂಬ ವೈರಸ್ನ ವಿರುದ್ಧ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹೋರಾಡುತ್ತಿದ್ದಾರೆ. ಅವರ ಬಗ್ಗೆ ಹೆಮ್ಮೆ ಪಡುವುದು ಮಾತ್ರವಲ್ಲ, ಅವರಿಗೆ ಸಹಾಯ ಮಾಡುವ ಕಾರ್ಯವನ್ನು ನಾವು ಮಾಡಬೇಕಾಗಿದೆ.

ನಾವೇನು ಮಾಡಬೇಕು?
ನಾವು ಅವರಿಗೆ ಸಹಾಯ ಮಾಡಲು ಬೇರೇನೂ ಮಾಡಬೇಕಾಗಿಲ್ಲ, ನಮ್ಮ ಮನೆಯೊಳಗೆ ನಾವಿದ್ದರೆ ಸಾಕು. ಆದರೆ ನಮ್ಮ ಜನರು ಅದನ್ನು ಅರ್ಥ ಮಾಡಿಕೊಳ್ಳುತ್ತನೇ ಇಲ್ಲ, ಸ್ವಲ್ಪ ಅವಕಾಶ ಸಿಕ್ಕರೂ ಗುಂಪು-ಗುಂಪಾಗಿ ಸೇರಿ ಬಿಡುತ್ತಾರೆ. ಜನರು ಗುಂಪು ಸೇರದಂತೆ, ಕ್ವಾರೆಂಟೈನ್ನಲ್ಲಿ ಇರುವವರು ಹೊರಗಡೆ ಓಡಾಡದಂತೆ ಮಾಡುವುದೇ ಹರಸಾಹಸವಾಗಿದೆ.

ಕೊರೊನಾವೈರಸ್ ವಿರುದ್ಧ ಹೋರಾಡೋಣ
ಇಡೀ ದೇಶ ಕೊರೊನಾವೈರಸ್ ವಿರುದ್ಧ ಸಾರಿರುವ ಸಮರದಲ್ಲಿ ಜಯ ಸಾಧಿಸಲು ನಾವೆಲ್ಲಾ ಕೈಜೋಡಿಸೋಣ, ಮನೆಯಲ್ಲಿಯೇ ಇದ್ದು, ಈ ಮಹಾಮಾರಿ ತೊಲಗಿಸೋಣ. ಆಗಾಗ ನಿಮ್ಮ ಕೈಗಳನ್ನು ತೊಳೆಯುತ್ತಾ ಇರಿ. ಕೆಮ್ಮು, ಜ್ವರ, ಉಸಿರಾಟದ ತೊಂದರೆ ಕಾಣಿಸಿದರೆ ಕೂಡಲೇ ಇತತರಿಂದ ಅಂತರ ಕಾಯ್ದುಕೊಂಡು ವೈದ್ಯರಿಗೆ ಕರೆ ಮಾಡಿ ತಿಳಿಸಿ.ಕೋವಿಡ್ 19 ಬಗ್ಗೆ ಭಯ ಬೇಡ, ಮುನ್ನೆಚ್ಚರಿಕೆಯಿಂದ ಇರಿ.



Click it and Unblock the Notifications











