Latest Updates
-
ಮಳೆಗಾಲದಲ್ಲಿ ದಂಪತಿಗಳ ಬಾಂಧವ್ಯ ಗಟ್ಟಿಯಾಗಬೇಕೆ? ಮದುವೆ ಮತ್ತು ಬಜೆಟ್ ಪ್ಲಾನಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ದೆಹಲಿ ನೀರಿನ ಬಿಕ್ಕಟ್ಟು: ಮನೆಯಲ್ಲಿ ನೀರು ಉಳಿಸಿ, ಗಿಡಗಳನ್ನು ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಡೈರಿ ಉತ್ಪನ್ನಗಳ ಸ್ಮಾರ್ಟ್ ಆಯ್ಕೆ: ವಿಶ್ವ ಹಾಲು ದಿನದ ವಿಶೇಷ ಸಲಹೆಗಳು -
ಬೆಂಗಳೂರು ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಿ, ಸ್ಟೈಲಿಶ್ ಆಗಿ ಕಾಣಲು ಈ ವೈರಲ್ ಟಿಪ್ಸ್ ಮಿಸ್ ಮಾಡ್ಬೇಡಿ! -
ವಿಶ್ವ ಸೈಕಲ್ ದಿನ: ಫಿಟ್ನೆಸ್ ಕಾಯ್ದುಕೊಳ್ಳಲು ಮತ್ತು ಸುರಕ್ಷಿತ ಸೈಕ್ಲಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
ಕೋವಿಡ್ 19 ವಿರುದ್ಧ ಹೋರಾಟ: ವೈದ್ಯಾಧಿಕಾರಿ ಫೋಟೋಗೆ ಮಿಡಿದ ಜನರ ಮನ
ಒಂದು ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು ಆ ಫೋಟೋ ಕೊರೊನಾವೈರಸ್ ವಿರುದ್ಧ ಹೋರಾಡುತ್ತಿರುವ ನರ್ಸ್, ಡಾಕ್ಟರ್ಗಳ ಸೇವೆಗೆ ಹಿಡಿದಿರುವ ಕೈಗನ್ನಡಿಯಾಗಿದೆ.
ಆ ಫೋಟೋ ನೋಡುತ್ತಿದ್ದರೆ ನಿಜ ಜೀವನದ ಅಂಥ ಹೀರೋಗಳ ಬಗ್ಗೆ ಹೆಮ್ಮೆಯುಂಟಾಗುವುದು, ಅವರ ಸೇವೆಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು ಅನಿಸದೆ ಇರಲ್ಲ.

ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಾಡಿರುವ ಒಂದು ಫೋಟೋ ಇದೀಗ ಇಡೀ ದೇಶದ ಜನತೆಯ ಗಮನ ಸೆಳೆದಿದೆ. ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ನಿರಂತರವಾಗಿ ವೈದ್ಯರು, ನರ್ಸ್ಗಳು ಶ್ರಮಿಸುತ್ತಿದ್ದಾರೆ. ಮಧ್ಯ ಪ್ರದೇಶದ ಭೋಪಾಲ್ ಜಿಲ್ಲೆಯ ಮುಖ್ಯ ಆರೋಗ್ಯಾಧಿಕಾರಿ ಡಾ. ಸುಧೀರ್ ದೆಹರಿಯಾ ಮಾಡಿರುವ ಕಾರ್ಯ ಎಲ್ಲರ ಗಮನ ಸೆಳೆದಿದೆ.

ವೈದ್ಯನ ಕಾರ್ಯಕ್ಕೆ ಮೆಚ್ಚುಗೆ
ಮಧ್ಯಪ್ರದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಗಲು-ಇರಳು ಎನ್ನದೆ ಕೆಲಸ ಮಾಡಿದ ಆರೋಗ್ಯ ಅಧಿಕಾರಿ 5 ದಿನಗಳ ಬಳಿಕ ಮನೆಗೆ ತೆರಳುತ್ತಾರೆ. ಆದರೆ ಅವರು ಮನೆಯೊಳಗೆ ಹೋಗುವುದಿಲ್ಲ. ಬದಲಿಗೆ ಮನೆಯ ಗೇಟಿನ ಹೊರಗಡೆ ಕೂತು ಟೀ ಕುಡಿದು, ಪತ್ನಿ-ಮಕ್ಕಳನ್ನು ನೋಡಿ ಕೆಲಸಕ್ಕೆ ಹಿಂತಿರುಗುತ್ತಾರೆ. ಇದೀಗ ಅವರು ಮಾಡಿರುವ ಕಾರ್ಯಕ್ಕೆ ಮೆಚ್ಚುಗೆ ಸಿಕ್ಕಿದೆ.

ಕೋವಿಡ್ 19 ವಿರುದ್ಧ ಹೋರಾಡುತ್ತಿರುವ ಹೀರೋಗಳು
ಏಕೆಂದರೆ ಅವರು ಆಸ್ಪತ್ರೆಯಲ್ಲಿ ಸೋಂಕಿತರ ಸೇವೆ ಮಾಡುವುದರಿಂದ ಮನೆಗೆ ಹೋಗುವುದು ಅಷ್ಟು ಸುರಕ್ಷಿತವಲ್ಲ. ಡಾ. ಸುಧೀರ್ ಸೇರಿದಂತೆ ಲಕ್ಷಾಂತರ ವೈದ್ಯಕೀಯ ಸಿಬ್ಬಂದಿ ಕೊರೊನಾ ಎಂಬ ವೈರಸ್ನ ವಿರುದ್ಧ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹೋರಾಡುತ್ತಿದ್ದಾರೆ. ಅವರ ಬಗ್ಗೆ ಹೆಮ್ಮೆ ಪಡುವುದು ಮಾತ್ರವಲ್ಲ, ಅವರಿಗೆ ಸಹಾಯ ಮಾಡುವ ಕಾರ್ಯವನ್ನು ನಾವು ಮಾಡಬೇಕಾಗಿದೆ.

ನಾವೇನು ಮಾಡಬೇಕು?
ನಾವು ಅವರಿಗೆ ಸಹಾಯ ಮಾಡಲು ಬೇರೇನೂ ಮಾಡಬೇಕಾಗಿಲ್ಲ, ನಮ್ಮ ಮನೆಯೊಳಗೆ ನಾವಿದ್ದರೆ ಸಾಕು. ಆದರೆ ನಮ್ಮ ಜನರು ಅದನ್ನು ಅರ್ಥ ಮಾಡಿಕೊಳ್ಳುತ್ತನೇ ಇಲ್ಲ, ಸ್ವಲ್ಪ ಅವಕಾಶ ಸಿಕ್ಕರೂ ಗುಂಪು-ಗುಂಪಾಗಿ ಸೇರಿ ಬಿಡುತ್ತಾರೆ. ಜನರು ಗುಂಪು ಸೇರದಂತೆ, ಕ್ವಾರೆಂಟೈನ್ನಲ್ಲಿ ಇರುವವರು ಹೊರಗಡೆ ಓಡಾಡದಂತೆ ಮಾಡುವುದೇ ಹರಸಾಹಸವಾಗಿದೆ.

ಕೊರೊನಾವೈರಸ್ ವಿರುದ್ಧ ಹೋರಾಡೋಣ
ಇಡೀ ದೇಶ ಕೊರೊನಾವೈರಸ್ ವಿರುದ್ಧ ಸಾರಿರುವ ಸಮರದಲ್ಲಿ ಜಯ ಸಾಧಿಸಲು ನಾವೆಲ್ಲಾ ಕೈಜೋಡಿಸೋಣ, ಮನೆಯಲ್ಲಿಯೇ ಇದ್ದು, ಈ ಮಹಾಮಾರಿ ತೊಲಗಿಸೋಣ. ಆಗಾಗ ನಿಮ್ಮ ಕೈಗಳನ್ನು ತೊಳೆಯುತ್ತಾ ಇರಿ. ಕೆಮ್ಮು, ಜ್ವರ, ಉಸಿರಾಟದ ತೊಂದರೆ ಕಾಣಿಸಿದರೆ ಕೂಡಲೇ ಇತತರಿಂದ ಅಂತರ ಕಾಯ್ದುಕೊಂಡು ವೈದ್ಯರಿಗೆ ಕರೆ ಮಾಡಿ ತಿಳಿಸಿ.ಕೋವಿಡ್ 19 ಬಗ್ಗೆ ಭಯ ಬೇಡ, ಮುನ್ನೆಚ್ಚರಿಕೆಯಿಂದ ಇರಿ.



Click it and Unblock the Notifications