Latest Updates
-
ಗಣೇಶೋತ್ಸವ 2026: ಮಳೆಯ ನಡುವೆಯೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಇಲ್ಲಿದೆ ಸರಳ ಟಿಪ್ಸ್! -
ಪ್ಯಾಕ್ ಮಾಡಿದ ಆಹಾರದಲ್ಲಿ ಸಕ್ಕರೆ, ಉಪ್ಪು ಹೆಚ್ಚಿದ್ದರೆ ಕೆಂಪು ಲೇಬಲ್: ಸುಪ್ರೀಂ ಕೋರ್ಟ್ ಪ್ರಶ್ನೆ, ಗ್ರಾಹಕರಿಗೆ ಸಿಗುತ್ತಾ ಪರಿಹಾರ? -
ಝೊಮ್ಯಾಟೋದಲ್ಲಿ 'ಪೇ ಆನ್ ಡೆಲಿವರಿ' ಶುಲ್ಕದ ಶಾಕ್: ನಿಮ್ಮ ಬಿಲ್ ಹೆಚ್ಚಾಗುತ್ತಿದೆಯೇ? ಬಚಾವ್ ಆಗೋದು ಹೇಗೆ? -
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು?
ಕೋವಿಡ್ 19 ವಿರುದ್ಧ ಹೋರಾಟ: ವೈದ್ಯಾಧಿಕಾರಿ ಫೋಟೋಗೆ ಮಿಡಿದ ಜನರ ಮನ
ಒಂದು ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು ಆ ಫೋಟೋ ಕೊರೊನಾವೈರಸ್ ವಿರುದ್ಧ ಹೋರಾಡುತ್ತಿರುವ ನರ್ಸ್, ಡಾಕ್ಟರ್ಗಳ ಸೇವೆಗೆ ಹಿಡಿದಿರುವ ಕೈಗನ್ನಡಿಯಾಗಿದೆ.
ಆ ಫೋಟೋ ನೋಡುತ್ತಿದ್ದರೆ ನಿಜ ಜೀವನದ ಅಂಥ ಹೀರೋಗಳ ಬಗ್ಗೆ ಹೆಮ್ಮೆಯುಂಟಾಗುವುದು, ಅವರ ಸೇವೆಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು ಅನಿಸದೆ ಇರಲ್ಲ.

ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಾಡಿರುವ ಒಂದು ಫೋಟೋ ಇದೀಗ ಇಡೀ ದೇಶದ ಜನತೆಯ ಗಮನ ಸೆಳೆದಿದೆ. ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ನಿರಂತರವಾಗಿ ವೈದ್ಯರು, ನರ್ಸ್ಗಳು ಶ್ರಮಿಸುತ್ತಿದ್ದಾರೆ. ಮಧ್ಯ ಪ್ರದೇಶದ ಭೋಪಾಲ್ ಜಿಲ್ಲೆಯ ಮುಖ್ಯ ಆರೋಗ್ಯಾಧಿಕಾರಿ ಡಾ. ಸುಧೀರ್ ದೆಹರಿಯಾ ಮಾಡಿರುವ ಕಾರ್ಯ ಎಲ್ಲರ ಗಮನ ಸೆಳೆದಿದೆ.

ವೈದ್ಯನ ಕಾರ್ಯಕ್ಕೆ ಮೆಚ್ಚುಗೆ
ಮಧ್ಯಪ್ರದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಗಲು-ಇರಳು ಎನ್ನದೆ ಕೆಲಸ ಮಾಡಿದ ಆರೋಗ್ಯ ಅಧಿಕಾರಿ 5 ದಿನಗಳ ಬಳಿಕ ಮನೆಗೆ ತೆರಳುತ್ತಾರೆ. ಆದರೆ ಅವರು ಮನೆಯೊಳಗೆ ಹೋಗುವುದಿಲ್ಲ. ಬದಲಿಗೆ ಮನೆಯ ಗೇಟಿನ ಹೊರಗಡೆ ಕೂತು ಟೀ ಕುಡಿದು, ಪತ್ನಿ-ಮಕ್ಕಳನ್ನು ನೋಡಿ ಕೆಲಸಕ್ಕೆ ಹಿಂತಿರುಗುತ್ತಾರೆ. ಇದೀಗ ಅವರು ಮಾಡಿರುವ ಕಾರ್ಯಕ್ಕೆ ಮೆಚ್ಚುಗೆ ಸಿಕ್ಕಿದೆ.

ಕೋವಿಡ್ 19 ವಿರುದ್ಧ ಹೋರಾಡುತ್ತಿರುವ ಹೀರೋಗಳು
ಏಕೆಂದರೆ ಅವರು ಆಸ್ಪತ್ರೆಯಲ್ಲಿ ಸೋಂಕಿತರ ಸೇವೆ ಮಾಡುವುದರಿಂದ ಮನೆಗೆ ಹೋಗುವುದು ಅಷ್ಟು ಸುರಕ್ಷಿತವಲ್ಲ. ಡಾ. ಸುಧೀರ್ ಸೇರಿದಂತೆ ಲಕ್ಷಾಂತರ ವೈದ್ಯಕೀಯ ಸಿಬ್ಬಂದಿ ಕೊರೊನಾ ಎಂಬ ವೈರಸ್ನ ವಿರುದ್ಧ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹೋರಾಡುತ್ತಿದ್ದಾರೆ. ಅವರ ಬಗ್ಗೆ ಹೆಮ್ಮೆ ಪಡುವುದು ಮಾತ್ರವಲ್ಲ, ಅವರಿಗೆ ಸಹಾಯ ಮಾಡುವ ಕಾರ್ಯವನ್ನು ನಾವು ಮಾಡಬೇಕಾಗಿದೆ.

ನಾವೇನು ಮಾಡಬೇಕು?
ನಾವು ಅವರಿಗೆ ಸಹಾಯ ಮಾಡಲು ಬೇರೇನೂ ಮಾಡಬೇಕಾಗಿಲ್ಲ, ನಮ್ಮ ಮನೆಯೊಳಗೆ ನಾವಿದ್ದರೆ ಸಾಕು. ಆದರೆ ನಮ್ಮ ಜನರು ಅದನ್ನು ಅರ್ಥ ಮಾಡಿಕೊಳ್ಳುತ್ತನೇ ಇಲ್ಲ, ಸ್ವಲ್ಪ ಅವಕಾಶ ಸಿಕ್ಕರೂ ಗುಂಪು-ಗುಂಪಾಗಿ ಸೇರಿ ಬಿಡುತ್ತಾರೆ. ಜನರು ಗುಂಪು ಸೇರದಂತೆ, ಕ್ವಾರೆಂಟೈನ್ನಲ್ಲಿ ಇರುವವರು ಹೊರಗಡೆ ಓಡಾಡದಂತೆ ಮಾಡುವುದೇ ಹರಸಾಹಸವಾಗಿದೆ.

ಕೊರೊನಾವೈರಸ್ ವಿರುದ್ಧ ಹೋರಾಡೋಣ
ಇಡೀ ದೇಶ ಕೊರೊನಾವೈರಸ್ ವಿರುದ್ಧ ಸಾರಿರುವ ಸಮರದಲ್ಲಿ ಜಯ ಸಾಧಿಸಲು ನಾವೆಲ್ಲಾ ಕೈಜೋಡಿಸೋಣ, ಮನೆಯಲ್ಲಿಯೇ ಇದ್ದು, ಈ ಮಹಾಮಾರಿ ತೊಲಗಿಸೋಣ. ಆಗಾಗ ನಿಮ್ಮ ಕೈಗಳನ್ನು ತೊಳೆಯುತ್ತಾ ಇರಿ. ಕೆಮ್ಮು, ಜ್ವರ, ಉಸಿರಾಟದ ತೊಂದರೆ ಕಾಣಿಸಿದರೆ ಕೂಡಲೇ ಇತತರಿಂದ ಅಂತರ ಕಾಯ್ದುಕೊಂಡು ವೈದ್ಯರಿಗೆ ಕರೆ ಮಾಡಿ ತಿಳಿಸಿ.ಕೋವಿಡ್ 19 ಬಗ್ಗೆ ಭಯ ಬೇಡ, ಮುನ್ನೆಚ್ಚರಿಕೆಯಿಂದ ಇರಿ.



Click it and Unblock the Notifications
