Latest Updates
-
ಪರಿಸರ ಸ್ನೇಹಿ ಡೇಟಿಂಗ್: ₹300 ರೊಳಗೆ ನಿಮ್ಮ ಪ್ರೀತಿಯನ್ನು ಹಸಿರಾಗಿಸುವ 12 ಅದ್ಭುತ ಐಡಿಯಾಗಳು! -
ಬೆಂಗಳೂರು ಮಳೆ: ಮನೆಯಲ್ಲಿ ನೀರು ನುಗ್ಗಿದೆಯೇ? ತೇವ ಮತ್ತು ದುರ್ವಾಸನೆ ಹೋಗಲಾಡಿಸಲು ಇಲ್ಲಿವೆ ಸರಳ ಟಿಪ್ಸ್! -
ಡೆಂಗ್ಯೂ ಆತಂಕ: ಮಧುಮೇಹಿಗಳು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ವಿಶೇಷ ಆಹಾರ ಪ್ಲಾನ್ -
iPhone 18 ಸೇಲ್: ನಿಮ್ಮ ಹೊಸ ಫೋನ್ ಪಡೆಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ದೆಹಲಿ-ಎನ್ಸಿಆರ್ ಮಳೆ ಎಚ್ಚರಿಕೆ: ಹೊರಗೆ ಹೋಗುವ ಬದಲು ಮನೆಯಲ್ಲೇ ಮಾಡಿ 12 ನಿಮಿಷದ ವರ್ಕೌಟ್! -
ಸೆಪ್ಟೆಂಬರ್ 15ರ ಲವ್ ರಾಶಿಫಲ: ನಿಮ್ಮ ಸಂಗಾತಿಯ ಮನ ಗೆಲ್ಲಲು ಈ 2 ನಿಮಿಷದ ಸೂತ್ರ ಬಳಸಿ! -
ಮಳೆಗಾಲದ ಎಚ್ಚರಿಕೆ: ಮುಂಬೈ-ಪುಣೆಯಲ್ಲಿ ಮನೆ ಸೋರಿಕೆ ತಡೆಯಲು 30 ನಿಮಿಷದ ಸಿಂಪಲ್ ಟಿಪ್ಸ್ -
ಅಡುಗೆಮನೆ ಬಜೆಟ್ ಏರಿಕೆ: ₹30 ಕ್ಕಿಂತ ಕಡಿಮೆ ವೆಚ್ಚದಲ್ಲಿ ಆರೋಗ್ಯಕರ ಪ್ರೋಟೀನ್ ಆಹಾರ ಪಡೆಯುವುದು ಹೇಗೆ? -
iOS 27 ಅಪ್ಡೇಟ್ ನಂತರ ಫೋನ್ ಬ್ಯಾಟರಿ ಬೇಗ ಖಾಲಿಯಾಗುತ್ತಿದೆಯೇ? ಗಾಬರಿಯಾಗಬೇಡಿ, ಈ ಟಿಪ್ಸ್ ಫಾಲೋ ಮಾಡಿ! -
ಗಣೇಶ ವಿಸರ್ಜನೆ: ಮೂರ್ತಿ ಹೊರುವಾಗ ಬೆನ್ನು ನೋವು ಕಾಡದಿರಲು ಈ ಸರಳ ಟಿಪ್ಸ್ ಪಾಲಿಸಿ
ಮಾನವೀಯತೆ ಇಲ್ಲದ ಮೃಗಗಳ ನಡುವೆ ಇಷ್ಟು ಮುಗ್ದತೆಯೂ ಸಲ್ಲದು!
ಟ್ವಿಟರ್ನಲ್ಲಿ ಮಹಿಳೆಯೊಬ್ಬರು ಚಿಕ್ಕ ಪಾಪುವನ್ನು ಹಿಡಿದು ಮೆಟ್ರೋದಲ್ಲಿ ನೆಲದಲ್ಲಿ ಕುಳಿತಿರುವ ವೀಡಿಯೋ ತುಂಬಾನೇ ವೈರಲ್ ಆಗುತ್ತಿದೆ.

ಆ ವೀಡಿಯೋದಲ್ಲಿ ಆ ತಾಯಿ ಮೆಟ್ರೋದಲ್ಲಿ ಕೆಳಗಡೆ (ಫ್ಲೋರ್ನಲ್ಲಿ) ಮಗುವನ್ನು ಹಿಡಿದು ಕುಳಿತಿದ್ದನ್ನು ನೋಡಿದರೂ ಬೇರೆಯವರು ಆರಾಮವಾಗಿ ಸೀಟ್ನಲ್ಲಿ ಕುಳಿತಿರುವುದನ್ನೂ ಕಾಣುತ್ತೇವೆ.
ಇದೀಗ ಈ ವೀಡಿಯೋ ಟ್ವಿಟರ್ನಲ್ಲಿ IAS ಆಫೀಸರ್ ಅವಿನಾಶ್ ಶರಣ್ ಶೇರ್ ಮಾಡಿದ್ದು ಈ ವೀಡಿಯೋ ವೈರಲ್ ಆಗಿದೆ. ನೆಟ್ಟಿಗರು ಈ ವೀಡಿಯೋ ನೋಡಿ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಎಂಥ ಮನುಷ್ಯರೋ ಆ ತಾಯಿ ಹಾಗೇ ಕೂತಿರುವುದನ್ನು ನೋಡಿ ಸುಮ್ಮನೆ ಇದ್ದಾರಲ್ಲಾ ಒಂದು ಸೀಟ್ ಬಿಟ್ಟುಕೊಡುವಷ್ಟು ಮಾನವೀಯತೆ ಜನರಲ್ಲಿ ಇಲ್ಲದಾಯಿತೇ ಎಂದೆಲ್ಲಾ ಕೇಳುತ್ತಿದ್ದಾರೆ.
ಆದರೆ ಎರಡು ಮುಖ್ಯ ವಿಷಯ ಹೇಳಬೇಕು ಅನಿಸುತ್ತಿದೆ. ಒಂದು ಹೆಚ್ಚೇನು ಹೇಳಬೇಕಾಗಿಲ್ಲ, ಇಲ್ಲಿ ಜನರು ಮಾನವೀಯತೆ ಮರೆತು ಕುಳಿತಿರುವುದರಿಂದ ಅಂಥವರ ಬಗ್ಗೆ ಹೇಳದಿರುವುದೇ ಒಳ್ಳೆಯದು, ಮಾನವೀಯತೆ ಮರೆತ ಮೇಲೆ ಅವರು ಮನುಷ್ಯರು ಅಂತ ಅನಿಸಿಕೊಳ್ಳಲು ಸಾಧ್ಯವೇ?
ಆದರೆ ಎರಡನೇ ವಿಷಯ ತುಂಬಾ ಮುಖ್ಯವಾದದ್ದು
ಎಲ್ಲರೂ ಆ ತಾಯಿ ದೆಹಲಿಯ ಮೆಟ್ರೋದಲ್ಲಿ ಫ್ಲೋರ್ನಲ್ಲಿ ಕೂತಿದ್ದಕ್ಕೆ ಅಯ್ಯೋ ಪಾಪ ಅನ್ನುತ್ತಿದ್ದಾರೆ, ಆದರೆ ಆ ತಾಯಿಯಲ್ಲಿ ಅಷ್ಟು ಮುಗ್ಧತೆ ಇರಬಾರದಿತ್ತು, ಹೌದು ಮಟ್ರೋದಲ್ಲಿ ರಿಸರ್ವ್ ಸೀಟ್ಗಳಿರುತ್ತೆ, ಅಲ್ಲಿ ಬೇರೆಯವರು ಆರಾಮವಾಗಿ ಕೂತಿರುತ್ತಾರೆ. ಗರ್ಭಿಣಿಯರು, ಮಗುವನ್ನು ಎತ್ತಿಕೊಂಡು ಬರುವವರು, ಅಂಗವಿಕಲರು ಆ ಸೀಟ್ಗಳಲ್ಲಿ ಕೂರುವ ಹಕ್ಕನ್ನು ಹೊಂದಿರುತ್ತಾರೆ, ಅಳದ ಮಗುವಿಗೆ ತಾಯಿ ಎದೆಹಾಲು ಕೊಡಲ್ಲ ಎಂಬ ಗಾದೆ ಮಾತೇ ಇದೆ, ಇನ್ನು ನಮ್ಮ ಹಕ್ಕುಗಳನ್ನು ನಾವು ಬಾಯಿ ಬಿಟ್ಟು ಕೇಳದೇ ಹೋದರೆ ಈ ಪ್ರಪಂಚದಲ್ಲಿ ಏನೂ ಸಿಗುವುದಿಲ್ಲ, ಜನ ನಮ್ಮನ್ನು ತುಳಿಯುತ್ತಲೇ ಇರುತ್ತಾರೆ.
ಮೊದಲು ನಾವು ಹುಷಾರಾಗಬೇಕು, ವಿದ್ಯಾಭ್ಯಾಸ ಇರಲಿ, ಇಲ್ಲದಿರಲಿಎಲ್ಲಿಗಾದರೂ ಹೋಗುವಾಗ, ಏನಾದರೂ ಮಾಡುವಾಗ ನಮ್ಮ ಹಕ್ಕುಗಳ ಬಗ್ಗೆ ತಿಳಿದಿರಬೇಕು. ಇಲ್ಲದಿದ್ದರೆ ಹೀಗೆ ಜನ.... ಏನಂತೀರಿ?



Click it and Unblock the Notifications

