Latest Updates
-
ಆರೆಂಜ್ ಅಲರ್ಟ್ ಎಚ್ಚರಿಕೆ: ಮಳೆಗಾಲದ ಮದುವೆ ಮತ್ತು ಪ್ರವಾಸದ ಪ್ಲಾನ್ ಬದಲಾಯಿಸುವುದು ಹೇಗೆ? -
ಮಳೆಗಾಲದಲ್ಲಿ ನಿಮ್ಮ ಮನೆ ಸುರಕ್ಷಿತವಾಗಿರಬೇಕೇ? ಈ ಸರಳ ಟಿಪ್ಸ್ ಅನುಸರಿಸಿ ದೊಡ್ಡ ರಿಪೇರಿ ಖರ್ಚಿನಿಂದ ಪಾರಾಗಿ! -
ಮಳೆಗಾಲದಲ್ಲಿ ಆರೋಗ್ಯವಾಗಿರಬೇಕೆ? ನಿಮ್ಮ ಅಡುಗೆಮನೆಯಲ್ಲಿ ಇಂದೇ ಈ ಬದಲಾವಣೆಗಳನ್ನು ಮಾಡಿಕೊಳ್ಳಿ, ಇಲ್ಲದಿದ್ದರೆ ಕಷ್ಟ! -
ಮಳೆಗಾಲದ ಫ್ಯಾಷನ್ ಟ್ರೆಂಡ್ಸ್: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ಈ ಸಿಂಪಲ್ ಟಿಪ್ಸ್ ಮಿಸ್ ಮಾಡ್ಬೇಡಿ! -
ವಿಶ್ವ ಸೈಕಲ್ ದಿನ: ಫಿಟ್ನೆಸ್ ಮತ್ತು ಟ್ರಾಫಿಕ್ ಸಮಸ್ಯೆಗೆ ಸೈಕ್ಲಿಂಗ್ಗಿಂತ ಉತ್ತಮ ಪರಿಹಾರವಿದೆಯೇ? -
ಮಳೆಗಾಲದಲ್ಲಿ ದಂಪತಿಗಳ ಬಾಂಧವ್ಯ ಗಟ್ಟಿಯಾಗಬೇಕೆ? ಮದುವೆ ಮತ್ತು ಬಜೆಟ್ ಪ್ಲಾನಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ದೆಹಲಿ ನೀರಿನ ಬಿಕ್ಕಟ್ಟು: ಮನೆಯಲ್ಲಿ ನೀರು ಉಳಿಸಿ, ಗಿಡಗಳನ್ನು ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಡೈರಿ ಉತ್ಪನ್ನಗಳ ಸ್ಮಾರ್ಟ್ ಆಯ್ಕೆ: ವಿಶ್ವ ಹಾಲು ದಿನದ ವಿಶೇಷ ಸಲಹೆಗಳು -
ಬೆಂಗಳೂರು ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಿ, ಸ್ಟೈಲಿಶ್ ಆಗಿ ಕಾಣಲು ಈ ವೈರಲ್ ಟಿಪ್ಸ್ ಮಿಸ್ ಮಾಡ್ಬೇಡಿ! -
ವಿಶ್ವ ಸೈಕಲ್ ದಿನ: ಫಿಟ್ನೆಸ್ ಕಾಯ್ದುಕೊಳ್ಳಲು ಮತ್ತು ಸುರಕ್ಷಿತ ಸೈಕ್ಲಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್
ಮಾನವೀಯತೆ ಇಲ್ಲದ ಮೃಗಗಳ ನಡುವೆ ಇಷ್ಟು ಮುಗ್ದತೆಯೂ ಸಲ್ಲದು!
ಟ್ವಿಟರ್ನಲ್ಲಿ ಮಹಿಳೆಯೊಬ್ಬರು ಚಿಕ್ಕ ಪಾಪುವನ್ನು ಹಿಡಿದು ಮೆಟ್ರೋದಲ್ಲಿ ನೆಲದಲ್ಲಿ ಕುಳಿತಿರುವ ವೀಡಿಯೋ ತುಂಬಾನೇ ವೈರಲ್ ಆಗುತ್ತಿದೆ.

ಆ ವೀಡಿಯೋದಲ್ಲಿ ಆ ತಾಯಿ ಮೆಟ್ರೋದಲ್ಲಿ ಕೆಳಗಡೆ (ಫ್ಲೋರ್ನಲ್ಲಿ) ಮಗುವನ್ನು ಹಿಡಿದು ಕುಳಿತಿದ್ದನ್ನು ನೋಡಿದರೂ ಬೇರೆಯವರು ಆರಾಮವಾಗಿ ಸೀಟ್ನಲ್ಲಿ ಕುಳಿತಿರುವುದನ್ನೂ ಕಾಣುತ್ತೇವೆ.
ಇದೀಗ ಈ ವೀಡಿಯೋ ಟ್ವಿಟರ್ನಲ್ಲಿ IAS ಆಫೀಸರ್ ಅವಿನಾಶ್ ಶರಣ್ ಶೇರ್ ಮಾಡಿದ್ದು ಈ ವೀಡಿಯೋ ವೈರಲ್ ಆಗಿದೆ. ನೆಟ್ಟಿಗರು ಈ ವೀಡಿಯೋ ನೋಡಿ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಎಂಥ ಮನುಷ್ಯರೋ ಆ ತಾಯಿ ಹಾಗೇ ಕೂತಿರುವುದನ್ನು ನೋಡಿ ಸುಮ್ಮನೆ ಇದ್ದಾರಲ್ಲಾ ಒಂದು ಸೀಟ್ ಬಿಟ್ಟುಕೊಡುವಷ್ಟು ಮಾನವೀಯತೆ ಜನರಲ್ಲಿ ಇಲ್ಲದಾಯಿತೇ ಎಂದೆಲ್ಲಾ ಕೇಳುತ್ತಿದ್ದಾರೆ.
ಆದರೆ ಎರಡು ಮುಖ್ಯ ವಿಷಯ ಹೇಳಬೇಕು ಅನಿಸುತ್ತಿದೆ. ಒಂದು ಹೆಚ್ಚೇನು ಹೇಳಬೇಕಾಗಿಲ್ಲ, ಇಲ್ಲಿ ಜನರು ಮಾನವೀಯತೆ ಮರೆತು ಕುಳಿತಿರುವುದರಿಂದ ಅಂಥವರ ಬಗ್ಗೆ ಹೇಳದಿರುವುದೇ ಒಳ್ಳೆಯದು, ಮಾನವೀಯತೆ ಮರೆತ ಮೇಲೆ ಅವರು ಮನುಷ್ಯರು ಅಂತ ಅನಿಸಿಕೊಳ್ಳಲು ಸಾಧ್ಯವೇ?
ಆದರೆ ಎರಡನೇ ವಿಷಯ ತುಂಬಾ ಮುಖ್ಯವಾದದ್ದು
ಎಲ್ಲರೂ ಆ ತಾಯಿ ದೆಹಲಿಯ ಮೆಟ್ರೋದಲ್ಲಿ ಫ್ಲೋರ್ನಲ್ಲಿ ಕೂತಿದ್ದಕ್ಕೆ ಅಯ್ಯೋ ಪಾಪ ಅನ್ನುತ್ತಿದ್ದಾರೆ, ಆದರೆ ಆ ತಾಯಿಯಲ್ಲಿ ಅಷ್ಟು ಮುಗ್ಧತೆ ಇರಬಾರದಿತ್ತು, ಹೌದು ಮಟ್ರೋದಲ್ಲಿ ರಿಸರ್ವ್ ಸೀಟ್ಗಳಿರುತ್ತೆ, ಅಲ್ಲಿ ಬೇರೆಯವರು ಆರಾಮವಾಗಿ ಕೂತಿರುತ್ತಾರೆ. ಗರ್ಭಿಣಿಯರು, ಮಗುವನ್ನು ಎತ್ತಿಕೊಂಡು ಬರುವವರು, ಅಂಗವಿಕಲರು ಆ ಸೀಟ್ಗಳಲ್ಲಿ ಕೂರುವ ಹಕ್ಕನ್ನು ಹೊಂದಿರುತ್ತಾರೆ, ಅಳದ ಮಗುವಿಗೆ ತಾಯಿ ಎದೆಹಾಲು ಕೊಡಲ್ಲ ಎಂಬ ಗಾದೆ ಮಾತೇ ಇದೆ, ಇನ್ನು ನಮ್ಮ ಹಕ್ಕುಗಳನ್ನು ನಾವು ಬಾಯಿ ಬಿಟ್ಟು ಕೇಳದೇ ಹೋದರೆ ಈ ಪ್ರಪಂಚದಲ್ಲಿ ಏನೂ ಸಿಗುವುದಿಲ್ಲ, ಜನ ನಮ್ಮನ್ನು ತುಳಿಯುತ್ತಲೇ ಇರುತ್ತಾರೆ.
ಮೊದಲು ನಾವು ಹುಷಾರಾಗಬೇಕು, ವಿದ್ಯಾಭ್ಯಾಸ ಇರಲಿ, ಇಲ್ಲದಿರಲಿಎಲ್ಲಿಗಾದರೂ ಹೋಗುವಾಗ, ಏನಾದರೂ ಮಾಡುವಾಗ ನಮ್ಮ ಹಕ್ಕುಗಳ ಬಗ್ಗೆ ತಿಳಿದಿರಬೇಕು. ಇಲ್ಲದಿದ್ದರೆ ಹೀಗೆ ಜನ.... ಏನಂತೀರಿ?



Click it and Unblock the Notifications
