Latest Updates
-
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ?
ಮಾನವೀಯತೆ ಇಲ್ಲದ ಮೃಗಗಳ ನಡುವೆ ಇಷ್ಟು ಮುಗ್ದತೆಯೂ ಸಲ್ಲದು!
ಟ್ವಿಟರ್ನಲ್ಲಿ ಮಹಿಳೆಯೊಬ್ಬರು ಚಿಕ್ಕ ಪಾಪುವನ್ನು ಹಿಡಿದು ಮೆಟ್ರೋದಲ್ಲಿ ನೆಲದಲ್ಲಿ ಕುಳಿತಿರುವ ವೀಡಿಯೋ ತುಂಬಾನೇ ವೈರಲ್ ಆಗುತ್ತಿದೆ.

ಆ ವೀಡಿಯೋದಲ್ಲಿ ಆ ತಾಯಿ ಮೆಟ್ರೋದಲ್ಲಿ ಕೆಳಗಡೆ (ಫ್ಲೋರ್ನಲ್ಲಿ) ಮಗುವನ್ನು ಹಿಡಿದು ಕುಳಿತಿದ್ದನ್ನು ನೋಡಿದರೂ ಬೇರೆಯವರು ಆರಾಮವಾಗಿ ಸೀಟ್ನಲ್ಲಿ ಕುಳಿತಿರುವುದನ್ನೂ ಕಾಣುತ್ತೇವೆ.
ಇದೀಗ ಈ ವೀಡಿಯೋ ಟ್ವಿಟರ್ನಲ್ಲಿ IAS ಆಫೀಸರ್ ಅವಿನಾಶ್ ಶರಣ್ ಶೇರ್ ಮಾಡಿದ್ದು ಈ ವೀಡಿಯೋ ವೈರಲ್ ಆಗಿದೆ. ನೆಟ್ಟಿಗರು ಈ ವೀಡಿಯೋ ನೋಡಿ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಎಂಥ ಮನುಷ್ಯರೋ ಆ ತಾಯಿ ಹಾಗೇ ಕೂತಿರುವುದನ್ನು ನೋಡಿ ಸುಮ್ಮನೆ ಇದ್ದಾರಲ್ಲಾ ಒಂದು ಸೀಟ್ ಬಿಟ್ಟುಕೊಡುವಷ್ಟು ಮಾನವೀಯತೆ ಜನರಲ್ಲಿ ಇಲ್ಲದಾಯಿತೇ ಎಂದೆಲ್ಲಾ ಕೇಳುತ್ತಿದ್ದಾರೆ.
ಆದರೆ ಎರಡು ಮುಖ್ಯ ವಿಷಯ ಹೇಳಬೇಕು ಅನಿಸುತ್ತಿದೆ. ಒಂದು ಹೆಚ್ಚೇನು ಹೇಳಬೇಕಾಗಿಲ್ಲ, ಇಲ್ಲಿ ಜನರು ಮಾನವೀಯತೆ ಮರೆತು ಕುಳಿತಿರುವುದರಿಂದ ಅಂಥವರ ಬಗ್ಗೆ ಹೇಳದಿರುವುದೇ ಒಳ್ಳೆಯದು, ಮಾನವೀಯತೆ ಮರೆತ ಮೇಲೆ ಅವರು ಮನುಷ್ಯರು ಅಂತ ಅನಿಸಿಕೊಳ್ಳಲು ಸಾಧ್ಯವೇ?
ಆದರೆ ಎರಡನೇ ವಿಷಯ ತುಂಬಾ ಮುಖ್ಯವಾದದ್ದು
ಎಲ್ಲರೂ ಆ ತಾಯಿ ದೆಹಲಿಯ ಮೆಟ್ರೋದಲ್ಲಿ ಫ್ಲೋರ್ನಲ್ಲಿ ಕೂತಿದ್ದಕ್ಕೆ ಅಯ್ಯೋ ಪಾಪ ಅನ್ನುತ್ತಿದ್ದಾರೆ, ಆದರೆ ಆ ತಾಯಿಯಲ್ಲಿ ಅಷ್ಟು ಮುಗ್ಧತೆ ಇರಬಾರದಿತ್ತು, ಹೌದು ಮಟ್ರೋದಲ್ಲಿ ರಿಸರ್ವ್ ಸೀಟ್ಗಳಿರುತ್ತೆ, ಅಲ್ಲಿ ಬೇರೆಯವರು ಆರಾಮವಾಗಿ ಕೂತಿರುತ್ತಾರೆ. ಗರ್ಭಿಣಿಯರು, ಮಗುವನ್ನು ಎತ್ತಿಕೊಂಡು ಬರುವವರು, ಅಂಗವಿಕಲರು ಆ ಸೀಟ್ಗಳಲ್ಲಿ ಕೂರುವ ಹಕ್ಕನ್ನು ಹೊಂದಿರುತ್ತಾರೆ, ಅಳದ ಮಗುವಿಗೆ ತಾಯಿ ಎದೆಹಾಲು ಕೊಡಲ್ಲ ಎಂಬ ಗಾದೆ ಮಾತೇ ಇದೆ, ಇನ್ನು ನಮ್ಮ ಹಕ್ಕುಗಳನ್ನು ನಾವು ಬಾಯಿ ಬಿಟ್ಟು ಕೇಳದೇ ಹೋದರೆ ಈ ಪ್ರಪಂಚದಲ್ಲಿ ಏನೂ ಸಿಗುವುದಿಲ್ಲ, ಜನ ನಮ್ಮನ್ನು ತುಳಿಯುತ್ತಲೇ ಇರುತ್ತಾರೆ.
ಮೊದಲು ನಾವು ಹುಷಾರಾಗಬೇಕು, ವಿದ್ಯಾಭ್ಯಾಸ ಇರಲಿ, ಇಲ್ಲದಿರಲಿಎಲ್ಲಿಗಾದರೂ ಹೋಗುವಾಗ, ಏನಾದರೂ ಮಾಡುವಾಗ ನಮ್ಮ ಹಕ್ಕುಗಳ ಬಗ್ಗೆ ತಿಳಿದಿರಬೇಕು. ಇಲ್ಲದಿದ್ದರೆ ಹೀಗೆ ಜನ.... ಏನಂತೀರಿ?



Click it and Unblock the Notifications












