Latest Updates
-
ಖೇಲೋ ಇಂಡಿಯಾ ಸಂವಾದ ವೀಕ್ಷಿಸುವಾಗ ಜಡತ್ವ ಬೇಡ: 12 ನಿಮಿಷಗಳ ಈ ಸಿಂಪಲ್ ವರ್ಕೌಟ್ ಟ್ರೈ ಮಾಡಿ! -
ಆಗಸ್ಟ್ 27 ಅಥವಾ 28? ರಾಖಿ ಹಬ್ಬದ ಗೊಂದಲಕ್ಕೆ ಇಲ್ಲಿದೆ ಬೆಸ್ಟ್ ಪ್ಲಾನ್! -
ಗುಡುಗು-ಸಿಡಿಲು ಮಳೆ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು 15 ನಿಮಿಷಗಳ ತುರ್ತು ಕ್ರಮಗಳು -
ರಕ್ಷಾಬಂಧನಕ್ಕೆ ಸಿಹಿ ಖರೀದಿಸ್ತಿದ್ದೀರಾ? ಈ ತಪ್ಪು ಮಾಡಿದ್ರೆ ಆರೋಗ್ಯಕ್ಕೆ ಕುತ್ತು, ನಕಲಿ ಸ್ವೀಟ್ಸ್ ಪತ್ತೆ! -
ರಕ್ಷಾಬಂಧನಕ್ಕೆ ಚಿನ್ನ ಖರೀದಿಸುವ ಮುನ್ನ ಎಚ್ಚರ! ಇಂದಿನ ದರ ಮತ್ತು ಲಾಭದಾಯಕ ಟಿಪ್ಸ್ ಇಲ್ಲಿದೆ -
ರಾಷ್ಟ್ರೀಯ ಕ್ರೀಡಾ ದಿನ: 29 ನಿಮಿಷಗಳ ಸರಳ ವರ್ಕೌಟ್ ಮೂಲಕ ಫಿಟ್ ಆಗಿ! -
ಕುಟುಂಬದಲ್ಲಿ ಉಡುಪಿನ ಬಗ್ಗೆ ಟೀಕೆಗಳೇ? ಈ 7 ವಾಕ್ಯಗಳ ಮೂಲಕ ಗೌರವಯುತವಾಗಿ ಉತ್ತರಿಸಿ! -
ಈರುಳ್ಳಿ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಉಳಿಸಲು ಸರಳ ಟಿಪ್ಸ್ ಮತ್ತು ಪರ್ಯಾಯಗಳು! -
ಪ್ಯಾಕೆಟ್ ಆಹಾರದ ಮೇಲೆ ಕಡ್ಡಾಯ ಎಚ್ಚರಿಕೆ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಅಂತಿಮ ಗಡುವು! -
ಇಂದಿನ ಪೆಟ್ರೋಲ್ ದರ ಸ್ಥಿರ: ಪ್ರಯಾಣದ ವೆಚ್ಚ ಉಳಿಸಲು ಈ 5 ಸಿಂಪಲ್ ಟಿಪ್ಸ್ ಫಾಲೋ ಮಾಡಿ!
ಮಾನವೀಯತೆ ಇಲ್ಲದ ಮೃಗಗಳ ನಡುವೆ ಇಷ್ಟು ಮುಗ್ದತೆಯೂ ಸಲ್ಲದು!
ಟ್ವಿಟರ್ನಲ್ಲಿ ಮಹಿಳೆಯೊಬ್ಬರು ಚಿಕ್ಕ ಪಾಪುವನ್ನು ಹಿಡಿದು ಮೆಟ್ರೋದಲ್ಲಿ ನೆಲದಲ್ಲಿ ಕುಳಿತಿರುವ ವೀಡಿಯೋ ತುಂಬಾನೇ ವೈರಲ್ ಆಗುತ್ತಿದೆ.

ಆ ವೀಡಿಯೋದಲ್ಲಿ ಆ ತಾಯಿ ಮೆಟ್ರೋದಲ್ಲಿ ಕೆಳಗಡೆ (ಫ್ಲೋರ್ನಲ್ಲಿ) ಮಗುವನ್ನು ಹಿಡಿದು ಕುಳಿತಿದ್ದನ್ನು ನೋಡಿದರೂ ಬೇರೆಯವರು ಆರಾಮವಾಗಿ ಸೀಟ್ನಲ್ಲಿ ಕುಳಿತಿರುವುದನ್ನೂ ಕಾಣುತ್ತೇವೆ.
ಇದೀಗ ಈ ವೀಡಿಯೋ ಟ್ವಿಟರ್ನಲ್ಲಿ IAS ಆಫೀಸರ್ ಅವಿನಾಶ್ ಶರಣ್ ಶೇರ್ ಮಾಡಿದ್ದು ಈ ವೀಡಿಯೋ ವೈರಲ್ ಆಗಿದೆ. ನೆಟ್ಟಿಗರು ಈ ವೀಡಿಯೋ ನೋಡಿ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಎಂಥ ಮನುಷ್ಯರೋ ಆ ತಾಯಿ ಹಾಗೇ ಕೂತಿರುವುದನ್ನು ನೋಡಿ ಸುಮ್ಮನೆ ಇದ್ದಾರಲ್ಲಾ ಒಂದು ಸೀಟ್ ಬಿಟ್ಟುಕೊಡುವಷ್ಟು ಮಾನವೀಯತೆ ಜನರಲ್ಲಿ ಇಲ್ಲದಾಯಿತೇ ಎಂದೆಲ್ಲಾ ಕೇಳುತ್ತಿದ್ದಾರೆ.
ಆದರೆ ಎರಡು ಮುಖ್ಯ ವಿಷಯ ಹೇಳಬೇಕು ಅನಿಸುತ್ತಿದೆ. ಒಂದು ಹೆಚ್ಚೇನು ಹೇಳಬೇಕಾಗಿಲ್ಲ, ಇಲ್ಲಿ ಜನರು ಮಾನವೀಯತೆ ಮರೆತು ಕುಳಿತಿರುವುದರಿಂದ ಅಂಥವರ ಬಗ್ಗೆ ಹೇಳದಿರುವುದೇ ಒಳ್ಳೆಯದು, ಮಾನವೀಯತೆ ಮರೆತ ಮೇಲೆ ಅವರು ಮನುಷ್ಯರು ಅಂತ ಅನಿಸಿಕೊಳ್ಳಲು ಸಾಧ್ಯವೇ?
ಆದರೆ ಎರಡನೇ ವಿಷಯ ತುಂಬಾ ಮುಖ್ಯವಾದದ್ದು
ಎಲ್ಲರೂ ಆ ತಾಯಿ ದೆಹಲಿಯ ಮೆಟ್ರೋದಲ್ಲಿ ಫ್ಲೋರ್ನಲ್ಲಿ ಕೂತಿದ್ದಕ್ಕೆ ಅಯ್ಯೋ ಪಾಪ ಅನ್ನುತ್ತಿದ್ದಾರೆ, ಆದರೆ ಆ ತಾಯಿಯಲ್ಲಿ ಅಷ್ಟು ಮುಗ್ಧತೆ ಇರಬಾರದಿತ್ತು, ಹೌದು ಮಟ್ರೋದಲ್ಲಿ ರಿಸರ್ವ್ ಸೀಟ್ಗಳಿರುತ್ತೆ, ಅಲ್ಲಿ ಬೇರೆಯವರು ಆರಾಮವಾಗಿ ಕೂತಿರುತ್ತಾರೆ. ಗರ್ಭಿಣಿಯರು, ಮಗುವನ್ನು ಎತ್ತಿಕೊಂಡು ಬರುವವರು, ಅಂಗವಿಕಲರು ಆ ಸೀಟ್ಗಳಲ್ಲಿ ಕೂರುವ ಹಕ್ಕನ್ನು ಹೊಂದಿರುತ್ತಾರೆ, ಅಳದ ಮಗುವಿಗೆ ತಾಯಿ ಎದೆಹಾಲು ಕೊಡಲ್ಲ ಎಂಬ ಗಾದೆ ಮಾತೇ ಇದೆ, ಇನ್ನು ನಮ್ಮ ಹಕ್ಕುಗಳನ್ನು ನಾವು ಬಾಯಿ ಬಿಟ್ಟು ಕೇಳದೇ ಹೋದರೆ ಈ ಪ್ರಪಂಚದಲ್ಲಿ ಏನೂ ಸಿಗುವುದಿಲ್ಲ, ಜನ ನಮ್ಮನ್ನು ತುಳಿಯುತ್ತಲೇ ಇರುತ್ತಾರೆ.
ಮೊದಲು ನಾವು ಹುಷಾರಾಗಬೇಕು, ವಿದ್ಯಾಭ್ಯಾಸ ಇರಲಿ, ಇಲ್ಲದಿರಲಿಎಲ್ಲಿಗಾದರೂ ಹೋಗುವಾಗ, ಏನಾದರೂ ಮಾಡುವಾಗ ನಮ್ಮ ಹಕ್ಕುಗಳ ಬಗ್ಗೆ ತಿಳಿದಿರಬೇಕು. ಇಲ್ಲದಿದ್ದರೆ ಹೀಗೆ ಜನ.... ಏನಂತೀರಿ?



Click it and Unblock the Notifications
