Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ತುಲಾ ರಾಶಿಯಲ್ಲಿ ಅಕ್ಟೋಬರ್ 30ರಿಂದ ತ್ರಿಗ್ರಹಿ ಯೋಗ: ಈ ರಾಶಿಯವರು ಜಾಗ್ರತೆವಹಿಸಬೇಕು
ತುಲಾ ರಾಶಿಯಲ್ಲಿ ಕೇತುವಿದೆ, ಮಂಗಳ ಗ್ರಹವಿದೆ, ಸೂರ್ಯ ಹಾಗೂ ಬುಧ ಕೂಡ ಇದೇ ರಾಶಿಯನ್ನು ಪ್ರವೇಶಿಸಿದೆ. ಕೇತು ಅಕ್ಟೋಬರ್ 30ಕ್ಕೆ ರಾಶಿ ಬದಲಾಯಿಸಲಿದೆ. ನಂತರ ತ್ರಿಗ್ರಹಿ ಯೋಗ ಸಂಭವಿಸಲಿದೆ, ಇದನ್ನು ವೈದಿಕ ಜ್ಯೋತಿಷ್ಯದಲ್ಲಿ ಅತ್ಯಂತ ಅಶುಭ ಯೋಗವೆಂದು ಪರಿಗಣಿಸಲಾಗಿದೆ. ಈ ಸಮಯದಲ್ಲಿ ಮಿಥುನ, ಕನ್ಯಾ, ಧನು ರಾಶಿಯವರನ್ನು ಹೊರತು ಪಡಿಸಿ ಉಳಿದವರು ಜಾಗ್ರತೆವಹಿಸಬೇಕು.
ಉದ್ಯೋಗಸ್ಥರು ಜಾಗರೂಕರಾಗಿರಬೇಕು. ಈ ಅವಧಿಯಲ್ಲಿ ಯಾವುದೇ ವಿವಾದಕ್ಕೆ ತಲೆ ಹಾಕದಿರುವುದು ಒಳ್ಳೆಯದು. ಕುಟುಂಬದಲ್ಲಿಯೂ ಅನೇಕ ಸಮಸ್ಯೆಗಳು ಎದುರಾಗಬಹುದು, ಈ ಸಮಸ್ಯೆಗಳನ್ನು . ಈ ಅವಧಿಯಲ್ಲಿ ಈ ಜನರು ಹಣದ ವ್ಯವಹಾರಗಳನ್ನು ಮಾಡಬಾರದು, ಇಲ್ಲದಿದ್ದರೆ ಅವರು ಕೆಲವು ದೊಡ್ಡ ತೊಂದರೆಗೆ ಸಿಲುಕಬಹುದು. ಅದೇ ಸಮಯದಲ್ಲಿ, ವಿದ್ಯಾರ್ಥಿಗಳಿಗೆ ಅಧ್ಯಯನದ ಕಡೆಗೆ ಗಮನಹರಿಸಲು ಕಷ್ಟವಾಗುವುದು. ವ್ಯಾಪಾರಿಗಳು ಯಾವುದೇ ದೊಡ್ಡ ಹೂಡಿಕೆ ಮಾಡದಂತೆ ಸಲಹೆ ನೀಡಲಾಗುವುದು.

ಇನ್ನು ಕಾನೂನು ವಿಷಯದಲ್ಲಿ ತುಂಬಾನೇ ಜಾಗ್ರತೆವಹಿಸಬೇಕು, ಅನಗ್ಯತವಾಗಿ ಸಮಸ್ಯೆಗಳನ್ನು ನಿಮ್ಮ ಮೇಲೆ ಎಳೆದುಕೊಳ್ಳಬೇಡಿ. ಇಲ್ಲದಿದ್ದರೆ ಕಾನೂನು ಸಂಬಂಧಿತ ಸಮಸ್ಯೆಗಳನ್ನು ಎದುರಿಸಬಹುದು. ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಹೆಚ್ಚಾಗದತೆ ಜಾಗ್ರತೆವಹಿಸಿ. ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ನೀವು ಚಿಂತಿಸಬೇಕಾಗಬಹುದು. ಹಣಕಾಸಿನ ನಷ್ಟದ ಸಾಧ್ಯತೆ ಇದೆ, ಆದ್ದರಿಂದ ಹೊಸ ವ್ಯವಹಾರವನ್ನು ಪ್ರಾರಂಭಿಸಲು ಈ ಸಮಯ ಸೂಕ್ತವಲ್ಲ, ಸೂರ್ಯ ತುಲಾ ರಾಶಿಯಿಂದ ವೃಶ್ಚಿಕ ರಾಶಿಗೆ ಸಂಚರಿಸಿದಾಗ ಈ ಕುರಿತು ಯೋಚಿಸಬಹುದು.
ಉದ್ಯೋಗದಲ್ಲಿರುವವರು ಜಾಗರೂಕರಾಗಿರಬೇಕು. ಕಛೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನೀವು ಯಾವುದೇ ಕೆಲಸ ಮಾಡಿದರೂ ಅದರ ಫಲಿತಾಂಶ ತುಂಬಾ ತಡವಾಗಿ ಸಿಗುವುದರಿಂದ ಆದ್ದರಿಂದ ತಾಳ್ಮೆ ಮುಖ್ಯ. ವ್ಯಾಪಾರಸ್ಥರು ಪ್ರಯಾಣ ಮಾಡುವುದನ್ನು ತಪ್ಪಿಸಬೇಕು, ಇಲ್ಲದಿದ್ದರೆ ನಷ್ಟವಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಅವಶ್ಯಕತೆಯಿದೆ.
ನಿಮ್ಮ ಮಾತಿನ ಕಡೆ ತುಂಬಾನೇ ಗಮನಹರಿಸಿ, ಇಲ್ಲದಿದ್ದರೆ ನೀವು ನಷ್ಟವನ್ನು ಅನುಭವಿಸಬೇಕಾಗಬಹುದು. ಕಾನೂನು ಪ್ರಕರಣದಲ್ಲಿ ಸಿಲುಕದಂತೆ ನೋಡಿಕೊಳ್ಳಿ, ನೀವು ಸೋಲನ್ನು ಎದುರಿಸಬೇಕಾಗಬಹುದು. ಕುಟುಂಬ, ಮಕ್ಕಳ ನಡವಳಿಕೆಯಿಂದಾಗಿ ನೀವು ತೊಂದರೆಗೊಳಗಾಗಬಹುದು.
ಈ ರಾಶಿಯವರಿಗೆ ಒಳ್ಳೆಯದು
ಮಿಥುನ ರಾಶಿಯವರಿಗೆ ಈ ಅವಧಿ ಉತ್ತಮವಾಗಿದೆ. ಷೇರು ಮಾರುಕಟ್ಟೆಯಲ್ಲಿ ತೊಡಗಿಸಿಕೊಂಡವರು ಲಾಭ ಗಳಿಸಬಹುದು. ವ್ಯಾಪಾರಸ್ಥರು ಈ ಅವಧಿಯಲ್ಲಿ ಉತ್ತಮ ಲಾಭ ಪಡೆಯುತ್ತಾರೆ. ಈ ಅವಧಿಯಲ್ಲಿ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಈ ಅವಧಿಯಲ್ಲಿ ನೀವು ಆದಾಯಕ್ಕೆ ಸಂಬಂಧಿಸಿದಂತೆ ಹೊಸ ಅವಕಾಶಗಳನ್ನು ಪಡೆಯಬಹುದು, ವ್ಯಾಪಾರಸ್ಥರು ಈ ಅವಧಿಯಲ್ಲಿ ಅಧಿಕ ಲಾಭ ಗಳಿಸುವ ಸಾಧ್ಯತೆ ಇದೆ, ಈ ಅವಧಿಯಲ್ಲಿ ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಧನು ರಾಶಿ
ಧನು ರಾಶಿಯವರು ಈ ಅವಧಿಯಲ್ಲಿ ಉತ್ತಮ ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ. ಈ ಅವಧಿ ನಿಮಗೆ ಉತ್ತಮವಾಗಿದೆ.



Click it and Unblock the Notifications











