Latest Updates
-
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ? -
ಬೇಸಿಗೆ ಬಿಸಿಲಿಗೆ ಮನೆ ತಂಪಾಗಿಡಲು ಈ ಟಿಪ್ಸ್ ಫಾಲೋ ಮಾಡಿ -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಿಗೆ ನಿಮ್ಮ ದೇಹ ತಂಪಾಗಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಈ ಸ್ಮಾರ್ಟ್ ಟಿಪ್ಸ್ ಮಿಸ್ ಮಾಡ್ಬೇಡಿ -
ತೀವ್ರ ಶಾಖದ ಅಲೆ: ಬಿಸಿಲಿನಲ್ಲಿ ವ್ಯಾಯಾಮ ಮಾಡುವ ಮುನ್ನ ಎಚ್ಚರ! -
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು?
ತುಳುನಾಡಿನಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ: ಹಾಲೆ ಮರದ ಕಷಾಯ ಕುಡಿಯೋದೇಕೆ ಗೊತ್ತಾ?
ಇಂದು ನಾಡಿನ ಹಲವು ಭಾಗಗಳಲ್ಲಿ ಆಟಿ ಅಮಾವಾಸ್ಯೆ, ಭೀಮನ ಅಮಾವಾಸ್ಯೆ ಆಚರಿಸಲಾಗುತ್ತದೆ. ಈ ದಿನ ಆಟಿ ಕಷಾಯ ಸೇವಿಸುವುದು ತುಳುನಾಡಿನ ಸಂಸ್ಕೃತಿಯ ಒಂದು ಭಾಗವಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀವು ಯಾವುದೇ ದೇವಾಲಯಕ್ಕೆ ಹೋದರು ಅಲ್ಲಿ ತೀರ್ಥ ರೂಪದಲ್ಲಿ ನಿಮಗೆ ಈ ಆಟಿ ಕಷಾಯ ನೀಡುವುದು ನೋಡಬಹುದು. ಈ ದಿನ ಸೇವಿಸುವ ಆಟಿ ಕಷಾಯ ಸರ್ವ ಔಷಧಿ ಗುಣಗಳ ಹೊಂದಿರುವ ಒಂದು ಅತ್ಯಂತ ಅಮೂಲ್ಯ ಪಾನಿಯ ಎಂದು ನಂಬಲಾಗಿದೆ.
ಈ ಕಷಾಯವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದು ಬಹಳ ಆರೋಗ್ಯಕರ ಲಾಭಗಳಿಗೆ ಕಾರಣವಾಗಲಿದೆ. ಹಾಗಾದ್ರೆ ಆಟಿ ಅಮಾವಾಸ್ಯೆ ಎಂದರೇನು? ಆಚರಿಸೋದ್ಯಾಕೆ? ಎಂಬುದನ್ನು ನಾವು ತಿಳಿಯಬೇಕಿದೆ. ಈ ತಿಂಗಳನ್ನು ತುಳುವರು ಆಟಿ ತಿಂಗಳು ಎಂದು ಕೂಡ ಕರೆಯುತ್ತಾರೆ. ಈ ತಿಂಗಳಿನಲ್ಲಿ ಹಾಲೆ ಮರದ ಕಷಾಯ ಕುಡಿದರೆ ವರ್ಷ ಪೂರ್ತಿ ಆರೋಗ್ಯವಾಗಿರಬಹುದು ಎಂಬ ವಾದವಿದೆ.

ಈ ಆಷಾಢ ಮಾಸದಲ್ಲಿ ಭಾರೀ ಮಳೆಯಾಗುವ ಕಾರಣ ರೋಗಗಳು ಹೆಚ್ಚಾಗಿರುತ್ತದೆ. ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದು ನೋಡಬಹುದು. ಹಾಗೆ ಸೂರ್ಯನ ಬೆಳಕು ನಮ್ಮ ಮೇಲೆ ಬೀಳದ ತಿಂಗಳು ಎಂದು ಕೂಡ ಕರೆಯುತ್ತಾರೆ. ಹೀಗಾಗಿ ದೇಹಕ್ಕೆ ಅಗತ್ಯ ಪೋಷಣೆ ಬೇಕಿರುತ್ತದೆ. ಹೀಗಾಗಿ ಹಾಲೆ ಮರದ ತೊಟಗೆಯಿಂದ ಸಿಗುವ ಹಾಲನ್ನು ತಂದು ಕಷಾಯ ಮಾಡಲಾಗುತ್ತದೆ. ಈ ಹಾಲಿನಲ್ಲಿ ಅದ್ಭುತ ರೋಗ ನಿರೋಧಕ ಶಕ್ತಿ ಹಾಗೆ ಹಲವು ರೋಗಗಳ ತಡೆಯುವ ಗುಣವಿದೆ. ಕ್ಯಾನ್ಸರ್ನಂತಹ ಭಯಾಕನ ಕಾಯಿಲೆಗೂ ಇದು ಮದ್ದು ಎಂಬ ಮಾತಿದೆ.
ಹಾಲೆ ಮರದ ತೊಗಟೆಯನ್ನು ಚೆನ್ನಾಗಿ ಜಜ್ಜಿ ಈ ಕಷಾಯ ರೆಡಿ ಮಾಡುತ್ತಾರೆ. ಅದ್ರಲ್ಲೂ ಸೂರ್ಯ ಹುಟ್ಟುವ ಮೊದಲೇ ತೊಗಡೆ ಹಾಲು ತೆಗೆಯಬೇಕು ಎಂದು ಹೇಳಲಾಗಿದೆ. ಬಳಿಕ ಇದಕ್ಕೆ ಕಾಳು ಮೆಣಸು, ಓಂ ಕಾಳು, ಬೆಳ್ಳುಳ್ಳಿ, ಸ್ವಲ್ಪ ಜೀರಿಗೆ, ಅರಿಶಿಣ ಸೇರಿಸಿ ಕಷಾಯ ಮಾಡುತ್ತಾರೆ. ಹಾಗೆ ಮಕ್ಕಳಿಂದ ಹಿಡಿದು ಹಿರಿಯರು, ಸಕ್ಕರೆ ಕಾಯಿಲೆ ಇರುವವರು, ಯಾರು ಬೇಕಾದರು ಇದನ್ನು ಸೇವಿಸಬಹುದು ಎಂದು ಹೇಳಲಾಗಿದೆ.
ಕ್ಯಾನ್ಸರ್ನಂಥ ಕಾಯಿಲೆ ತಡೆಗಟ್ಟುತ್ತದೆ
ಈ ಕಷಾಯವು ಮಳೆಗಾಲದಲ್ಲಿ ಕಾಡುವ ಶೀತ, ಕೆಮ್ಮು ಸೇರಿದಂತೆ ಹೊಟ್ಟೆ ನೋವು, ಅತಿಸಾರ, ಮಲೇರಿಯಾ, ವಾಂತಿ ಹೀಗೆ ಹಲವು ಸಮಸ್ಯೆಗಳಿಗೆ ಪರಿಹಾರ ನೀಡಲಿದೆ ಎನ್ನಲಾಗಿದೆ. ಹಾಗೆ ಇದು ಕ್ಯಾನ್ಸರ್ ತಡೆಗಟ್ಟುವ ಗುಣ ಹೊಂದಿದೆ ಎಂದು ಹೇಳಲಾಗುವುದು. ಹಾಗಾಗಿ ಈ ಹಾಲೇಮರದ ತೊಗಟೆಯನ್ನು ತಂದು ಆಟಿ ಅಮವಾಸ್ಯೆಗೆ ಕಷಾಯ ಮಾಡಿ ಸೇವಿಸಲಾಗುವುದು.
ಹಾಲೆ ಮರವು 10 ಮೀ.ಗೂ ಹೆಚ್ಚು ಎತ್ತರ ಬೆಳೆಯಲಿದೆ. ಎಲೆಯ ಮೇಲೆ ನರಗಳಂತಹ ರಚನೆ ನೋಡಬಹುದಾಗಿದೆ. ಎಲೆಗಳು ಗೊಂಚಲು ಗೊಂಚಲಾಗಿ ಬಿಡುತ್ತವೆ. ಅದರಲ್ಲೂ ಕರಿ ಹಾಲೆ ಮರ ಹಾಗೂ ಬಿಳಿ ಹಾಲ ಮರ ಎಂದು ಎರಡು ಪ್ರಕಾರದ ಮರಗಳಿವೆ. ಈ ಮರದಲ್ಲಿ ಬಿಡುವ ಹೂವು ಬಹಳ ಸುವಾಸನೆಯಿಂದ ಕೂಡಿರುತ್ತದೆ. ಹಾಗೆ ಕಾಯಿಗಳು ಕೂಡ ಉದ್ದವಾಗಿ ಕೊಳವೆಯಂತೆ ಕಾಣಿಸುತ್ತವೆ. ಈ ಮರವನ್ನು ಪಾಲೆ ಮರ, ಏಳೇಲೆ ಹೊನ್ನೆ, ಕೊಡಾಲೆಮರ ಎಂದು ಕೂಡ ಕರೆಯುತ್ತಾರೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











