Latest Updates
-
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು
ತುಳುನಾಡಿನಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ: ಹಾಲೆ ಮರದ ಕಷಾಯ ಕುಡಿಯೋದೇಕೆ ಗೊತ್ತಾ?
ಇಂದು ನಾಡಿನ ಹಲವು ಭಾಗಗಳಲ್ಲಿ ಆಟಿ ಅಮಾವಾಸ್ಯೆ, ಭೀಮನ ಅಮಾವಾಸ್ಯೆ ಆಚರಿಸಲಾಗುತ್ತದೆ. ಈ ದಿನ ಆಟಿ ಕಷಾಯ ಸೇವಿಸುವುದು ತುಳುನಾಡಿನ ಸಂಸ್ಕೃತಿಯ ಒಂದು ಭಾಗವಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀವು ಯಾವುದೇ ದೇವಾಲಯಕ್ಕೆ ಹೋದರು ಅಲ್ಲಿ ತೀರ್ಥ ರೂಪದಲ್ಲಿ ನಿಮಗೆ ಈ ಆಟಿ ಕಷಾಯ ನೀಡುವುದು ನೋಡಬಹುದು. ಈ ದಿನ ಸೇವಿಸುವ ಆಟಿ ಕಷಾಯ ಸರ್ವ ಔಷಧಿ ಗುಣಗಳ ಹೊಂದಿರುವ ಒಂದು ಅತ್ಯಂತ ಅಮೂಲ್ಯ ಪಾನಿಯ ಎಂದು ನಂಬಲಾಗಿದೆ.
ಈ ಕಷಾಯವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದು ಬಹಳ ಆರೋಗ್ಯಕರ ಲಾಭಗಳಿಗೆ ಕಾರಣವಾಗಲಿದೆ. ಹಾಗಾದ್ರೆ ಆಟಿ ಅಮಾವಾಸ್ಯೆ ಎಂದರೇನು? ಆಚರಿಸೋದ್ಯಾಕೆ? ಎಂಬುದನ್ನು ನಾವು ತಿಳಿಯಬೇಕಿದೆ. ಈ ತಿಂಗಳನ್ನು ತುಳುವರು ಆಟಿ ತಿಂಗಳು ಎಂದು ಕೂಡ ಕರೆಯುತ್ತಾರೆ. ಈ ತಿಂಗಳಿನಲ್ಲಿ ಹಾಲೆ ಮರದ ಕಷಾಯ ಕುಡಿದರೆ ವರ್ಷ ಪೂರ್ತಿ ಆರೋಗ್ಯವಾಗಿರಬಹುದು ಎಂಬ ವಾದವಿದೆ.

ಈ ಆಷಾಢ ಮಾಸದಲ್ಲಿ ಭಾರೀ ಮಳೆಯಾಗುವ ಕಾರಣ ರೋಗಗಳು ಹೆಚ್ಚಾಗಿರುತ್ತದೆ. ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದು ನೋಡಬಹುದು. ಹಾಗೆ ಸೂರ್ಯನ ಬೆಳಕು ನಮ್ಮ ಮೇಲೆ ಬೀಳದ ತಿಂಗಳು ಎಂದು ಕೂಡ ಕರೆಯುತ್ತಾರೆ. ಹೀಗಾಗಿ ದೇಹಕ್ಕೆ ಅಗತ್ಯ ಪೋಷಣೆ ಬೇಕಿರುತ್ತದೆ. ಹೀಗಾಗಿ ಹಾಲೆ ಮರದ ತೊಟಗೆಯಿಂದ ಸಿಗುವ ಹಾಲನ್ನು ತಂದು ಕಷಾಯ ಮಾಡಲಾಗುತ್ತದೆ. ಈ ಹಾಲಿನಲ್ಲಿ ಅದ್ಭುತ ರೋಗ ನಿರೋಧಕ ಶಕ್ತಿ ಹಾಗೆ ಹಲವು ರೋಗಗಳ ತಡೆಯುವ ಗುಣವಿದೆ. ಕ್ಯಾನ್ಸರ್ನಂತಹ ಭಯಾಕನ ಕಾಯಿಲೆಗೂ ಇದು ಮದ್ದು ಎಂಬ ಮಾತಿದೆ.
ಹಾಲೆ ಮರದ ತೊಗಟೆಯನ್ನು ಚೆನ್ನಾಗಿ ಜಜ್ಜಿ ಈ ಕಷಾಯ ರೆಡಿ ಮಾಡುತ್ತಾರೆ. ಅದ್ರಲ್ಲೂ ಸೂರ್ಯ ಹುಟ್ಟುವ ಮೊದಲೇ ತೊಗಡೆ ಹಾಲು ತೆಗೆಯಬೇಕು ಎಂದು ಹೇಳಲಾಗಿದೆ. ಬಳಿಕ ಇದಕ್ಕೆ ಕಾಳು ಮೆಣಸು, ಓಂ ಕಾಳು, ಬೆಳ್ಳುಳ್ಳಿ, ಸ್ವಲ್ಪ ಜೀರಿಗೆ, ಅರಿಶಿಣ ಸೇರಿಸಿ ಕಷಾಯ ಮಾಡುತ್ತಾರೆ. ಹಾಗೆ ಮಕ್ಕಳಿಂದ ಹಿಡಿದು ಹಿರಿಯರು, ಸಕ್ಕರೆ ಕಾಯಿಲೆ ಇರುವವರು, ಯಾರು ಬೇಕಾದರು ಇದನ್ನು ಸೇವಿಸಬಹುದು ಎಂದು ಹೇಳಲಾಗಿದೆ.
ಕ್ಯಾನ್ಸರ್ನಂಥ ಕಾಯಿಲೆ ತಡೆಗಟ್ಟುತ್ತದೆ
ಈ ಕಷಾಯವು ಮಳೆಗಾಲದಲ್ಲಿ ಕಾಡುವ ಶೀತ, ಕೆಮ್ಮು ಸೇರಿದಂತೆ ಹೊಟ್ಟೆ ನೋವು, ಅತಿಸಾರ, ಮಲೇರಿಯಾ, ವಾಂತಿ ಹೀಗೆ ಹಲವು ಸಮಸ್ಯೆಗಳಿಗೆ ಪರಿಹಾರ ನೀಡಲಿದೆ ಎನ್ನಲಾಗಿದೆ. ಹಾಗೆ ಇದು ಕ್ಯಾನ್ಸರ್ ತಡೆಗಟ್ಟುವ ಗುಣ ಹೊಂದಿದೆ ಎಂದು ಹೇಳಲಾಗುವುದು. ಹಾಗಾಗಿ ಈ ಹಾಲೇಮರದ ತೊಗಟೆಯನ್ನು ತಂದು ಆಟಿ ಅಮವಾಸ್ಯೆಗೆ ಕಷಾಯ ಮಾಡಿ ಸೇವಿಸಲಾಗುವುದು.
ಹಾಲೆ ಮರವು 10 ಮೀ.ಗೂ ಹೆಚ್ಚು ಎತ್ತರ ಬೆಳೆಯಲಿದೆ. ಎಲೆಯ ಮೇಲೆ ನರಗಳಂತಹ ರಚನೆ ನೋಡಬಹುದಾಗಿದೆ. ಎಲೆಗಳು ಗೊಂಚಲು ಗೊಂಚಲಾಗಿ ಬಿಡುತ್ತವೆ. ಅದರಲ್ಲೂ ಕರಿ ಹಾಲೆ ಮರ ಹಾಗೂ ಬಿಳಿ ಹಾಲ ಮರ ಎಂದು ಎರಡು ಪ್ರಕಾರದ ಮರಗಳಿವೆ. ಈ ಮರದಲ್ಲಿ ಬಿಡುವ ಹೂವು ಬಹಳ ಸುವಾಸನೆಯಿಂದ ಕೂಡಿರುತ್ತದೆ. ಹಾಗೆ ಕಾಯಿಗಳು ಕೂಡ ಉದ್ದವಾಗಿ ಕೊಳವೆಯಂತೆ ಕಾಣಿಸುತ್ತವೆ. ಈ ಮರವನ್ನು ಪಾಲೆ ಮರ, ಏಳೇಲೆ ಹೊನ್ನೆ, ಕೊಡಾಲೆಮರ ಎಂದು ಕೂಡ ಕರೆಯುತ್ತಾರೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
