Latest Updates
-
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ! -
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ!
ತುಳುನಾಡಿನಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ: ಹಾಲೆ ಮರದ ಕಷಾಯ ಕುಡಿಯೋದೇಕೆ ಗೊತ್ತಾ?
ಇಂದು ನಾಡಿನ ಹಲವು ಭಾಗಗಳಲ್ಲಿ ಆಟಿ ಅಮಾವಾಸ್ಯೆ, ಭೀಮನ ಅಮಾವಾಸ್ಯೆ ಆಚರಿಸಲಾಗುತ್ತದೆ. ಈ ದಿನ ಆಟಿ ಕಷಾಯ ಸೇವಿಸುವುದು ತುಳುನಾಡಿನ ಸಂಸ್ಕೃತಿಯ ಒಂದು ಭಾಗವಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀವು ಯಾವುದೇ ದೇವಾಲಯಕ್ಕೆ ಹೋದರು ಅಲ್ಲಿ ತೀರ್ಥ ರೂಪದಲ್ಲಿ ನಿಮಗೆ ಈ ಆಟಿ ಕಷಾಯ ನೀಡುವುದು ನೋಡಬಹುದು. ಈ ದಿನ ಸೇವಿಸುವ ಆಟಿ ಕಷಾಯ ಸರ್ವ ಔಷಧಿ ಗುಣಗಳ ಹೊಂದಿರುವ ಒಂದು ಅತ್ಯಂತ ಅಮೂಲ್ಯ ಪಾನಿಯ ಎಂದು ನಂಬಲಾಗಿದೆ.
ಈ ಕಷಾಯವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದು ಬಹಳ ಆರೋಗ್ಯಕರ ಲಾಭಗಳಿಗೆ ಕಾರಣವಾಗಲಿದೆ. ಹಾಗಾದ್ರೆ ಆಟಿ ಅಮಾವಾಸ್ಯೆ ಎಂದರೇನು? ಆಚರಿಸೋದ್ಯಾಕೆ? ಎಂಬುದನ್ನು ನಾವು ತಿಳಿಯಬೇಕಿದೆ. ಈ ತಿಂಗಳನ್ನು ತುಳುವರು ಆಟಿ ತಿಂಗಳು ಎಂದು ಕೂಡ ಕರೆಯುತ್ತಾರೆ. ಈ ತಿಂಗಳಿನಲ್ಲಿ ಹಾಲೆ ಮರದ ಕಷಾಯ ಕುಡಿದರೆ ವರ್ಷ ಪೂರ್ತಿ ಆರೋಗ್ಯವಾಗಿರಬಹುದು ಎಂಬ ವಾದವಿದೆ.

ಈ ಆಷಾಢ ಮಾಸದಲ್ಲಿ ಭಾರೀ ಮಳೆಯಾಗುವ ಕಾರಣ ರೋಗಗಳು ಹೆಚ್ಚಾಗಿರುತ್ತದೆ. ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವುದು ನೋಡಬಹುದು. ಹಾಗೆ ಸೂರ್ಯನ ಬೆಳಕು ನಮ್ಮ ಮೇಲೆ ಬೀಳದ ತಿಂಗಳು ಎಂದು ಕೂಡ ಕರೆಯುತ್ತಾರೆ. ಹೀಗಾಗಿ ದೇಹಕ್ಕೆ ಅಗತ್ಯ ಪೋಷಣೆ ಬೇಕಿರುತ್ತದೆ. ಹೀಗಾಗಿ ಹಾಲೆ ಮರದ ತೊಟಗೆಯಿಂದ ಸಿಗುವ ಹಾಲನ್ನು ತಂದು ಕಷಾಯ ಮಾಡಲಾಗುತ್ತದೆ. ಈ ಹಾಲಿನಲ್ಲಿ ಅದ್ಭುತ ರೋಗ ನಿರೋಧಕ ಶಕ್ತಿ ಹಾಗೆ ಹಲವು ರೋಗಗಳ ತಡೆಯುವ ಗುಣವಿದೆ. ಕ್ಯಾನ್ಸರ್ನಂತಹ ಭಯಾಕನ ಕಾಯಿಲೆಗೂ ಇದು ಮದ್ದು ಎಂಬ ಮಾತಿದೆ.
ಹಾಲೆ ಮರದ ತೊಗಟೆಯನ್ನು ಚೆನ್ನಾಗಿ ಜಜ್ಜಿ ಈ ಕಷಾಯ ರೆಡಿ ಮಾಡುತ್ತಾರೆ. ಅದ್ರಲ್ಲೂ ಸೂರ್ಯ ಹುಟ್ಟುವ ಮೊದಲೇ ತೊಗಡೆ ಹಾಲು ತೆಗೆಯಬೇಕು ಎಂದು ಹೇಳಲಾಗಿದೆ. ಬಳಿಕ ಇದಕ್ಕೆ ಕಾಳು ಮೆಣಸು, ಓಂ ಕಾಳು, ಬೆಳ್ಳುಳ್ಳಿ, ಸ್ವಲ್ಪ ಜೀರಿಗೆ, ಅರಿಶಿಣ ಸೇರಿಸಿ ಕಷಾಯ ಮಾಡುತ್ತಾರೆ. ಹಾಗೆ ಮಕ್ಕಳಿಂದ ಹಿಡಿದು ಹಿರಿಯರು, ಸಕ್ಕರೆ ಕಾಯಿಲೆ ಇರುವವರು, ಯಾರು ಬೇಕಾದರು ಇದನ್ನು ಸೇವಿಸಬಹುದು ಎಂದು ಹೇಳಲಾಗಿದೆ.
ಕ್ಯಾನ್ಸರ್ನಂಥ ಕಾಯಿಲೆ ತಡೆಗಟ್ಟುತ್ತದೆ
ಈ ಕಷಾಯವು ಮಳೆಗಾಲದಲ್ಲಿ ಕಾಡುವ ಶೀತ, ಕೆಮ್ಮು ಸೇರಿದಂತೆ ಹೊಟ್ಟೆ ನೋವು, ಅತಿಸಾರ, ಮಲೇರಿಯಾ, ವಾಂತಿ ಹೀಗೆ ಹಲವು ಸಮಸ್ಯೆಗಳಿಗೆ ಪರಿಹಾರ ನೀಡಲಿದೆ ಎನ್ನಲಾಗಿದೆ. ಹಾಗೆ ಇದು ಕ್ಯಾನ್ಸರ್ ತಡೆಗಟ್ಟುವ ಗುಣ ಹೊಂದಿದೆ ಎಂದು ಹೇಳಲಾಗುವುದು. ಹಾಗಾಗಿ ಈ ಹಾಲೇಮರದ ತೊಗಟೆಯನ್ನು ತಂದು ಆಟಿ ಅಮವಾಸ್ಯೆಗೆ ಕಷಾಯ ಮಾಡಿ ಸೇವಿಸಲಾಗುವುದು.
ಹಾಲೆ ಮರವು 10 ಮೀ.ಗೂ ಹೆಚ್ಚು ಎತ್ತರ ಬೆಳೆಯಲಿದೆ. ಎಲೆಯ ಮೇಲೆ ನರಗಳಂತಹ ರಚನೆ ನೋಡಬಹುದಾಗಿದೆ. ಎಲೆಗಳು ಗೊಂಚಲು ಗೊಂಚಲಾಗಿ ಬಿಡುತ್ತವೆ. ಅದರಲ್ಲೂ ಕರಿ ಹಾಲೆ ಮರ ಹಾಗೂ ಬಿಳಿ ಹಾಲ ಮರ ಎಂದು ಎರಡು ಪ್ರಕಾರದ ಮರಗಳಿವೆ. ಈ ಮರದಲ್ಲಿ ಬಿಡುವ ಹೂವು ಬಹಳ ಸುವಾಸನೆಯಿಂದ ಕೂಡಿರುತ್ತದೆ. ಹಾಗೆ ಕಾಯಿಗಳು ಕೂಡ ಉದ್ದವಾಗಿ ಕೊಳವೆಯಂತೆ ಕಾಣಿಸುತ್ತವೆ. ಈ ಮರವನ್ನು ಪಾಲೆ ಮರ, ಏಳೇಲೆ ಹೊನ್ನೆ, ಕೊಡಾಲೆಮರ ಎಂದು ಕೂಡ ಕರೆಯುತ್ತಾರೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications