Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕಾಡಿನಲ್ಲಿ ಕಣ್ಮೆರೆಯಾದ ಯುವಕ, ಆ ವಿಶೇಷ ಕಲ್ಲಿಗೆ ಪೂಜೆ ಸಲ್ಲಿಸಿದಾಗ ಮರಳಿ ಬಂದ: ನೈಜ ಘಟನೆ
ಕೆಲವೊಂದು ವಿಸ್ಮಯ ಘಟನೆಗಳನ್ನು ನೋಡುವಾಗ ಹೀಗೂ ಇರುತ್ತಾ? ಎಂಬ ಪ್ರಶ್ನೆ ಮೂಡುವುದು, ಆದರೆ ಆ ರೀತಿ ಮೂಡುವ ಪ್ರಶ್ನೆಗಳಿಗೆ ಉತ್ತರವೂ ಸಿಗಲ್ಲ. ಅಂಥದ್ದೊಂದು ಘಟನೆ ಉಡುಪಿಯಲ್ಲಿ ನಡೆದಿದ್ದು ಆ ಘಟನೆ ತುಂಬಾನೇ ಸುದ್ದಿ ಮಾಡುತ್ತಿದೆ. ಕಾಡಿನಲ್ಲಿ ಕಾಣೆಯಾದ ಯುವಕ ಪವಾಡ ಸದೃಶ್ಯವಾಗಿ ಬದುಕಿ ಬಂದಿರುವ ಘಟನೆ ಇದು.

ಕಾಡಿಗೆ ಹೋದ ಹುಡುಗ ದಾರಿ ತಪ್ಪಿರಬಹುದು, ಕೊನೆಗೆ ಮರಳಿ ಬಂದಿದ್ದಾನೆ ಇದರಲ್ಲೇನು ವಿಶೇಷ ಎಂದು ಕೇಳುವವರೂ ಇದ್ದಾರೆ. ಆದರೆ ಇಲ್ಲಿ ಹುಡುಗ ಕಾಡಿನಲ್ಲಿ ದಾರಿ ತಪ್ಪಿ ಪತ್ತೆ ಸಿಕ್ಕಿರುವುದು ವಿಶೇಷವಲ್ಲ, ಆದರೆ ಈ ಹುಡುಗ ಕಾಣೆಯಾದ ಮೇಲೆ ನಡೆದ ಸಂಗತಿಗಳು ಇದೆಯೆಲ್ಲಾ ಅದು ವಿಸ್ಮಯ, ಅದುವೇ ಜನರ ಅಚ್ಚರಿಕೆ ಕಾರಣವಾಗಿರುವುದು.
ಉಡುಪಿಯ ಬೈಂದೂರು ತಾಲೂಕಿನಲ್ಲಿ ನಡೆದ ಘಟನೆಯಿದು. ಕಾಂತಾರ ಸಿನಿಮಾದಂತಿದೆ ಎಂತಿದ್ದಾರೆ ಜನರು. ಕಾಂತಾರದಲ್ಲಿ ಕಾಡಿನೊಳಗೆ ಹೋಗುವ ವ್ಯಕ್ತಿ ಕಾಣೆಯಾಗುವ ದೃಶ್ಯವಿದೆ. ಅದರಂತೆ ಇಲ್ಲಿಯೂ ಕಾಡಿಗೆ ಕಂಬ ತರಲೆಂದು ತನ್ನ ಸಾಕುನಾಯಿಯೊಂದಿಗೆ ಹೋದ ವಿವೇಕಾನಂದ ಕಾಣೆಯಾಗಿದ್ದಾರೆ. ಈತ ಕಾಡಿಗೆ ಹೋಗಿ ಬಾರದೇ ಹೋದಾಗ ಗಾಬರಿ ಬಿದ್ದ ಮನೆಯವರು ಊರಿನವರೊಂದಿಗೆ ಹುಡುಕಲಾರಂಭಿಸಿದ್ದಾರೆ. ಆ ಕಾಡಿನ ಬಗ್ಗೆ ಚೆನ್ನಾಗಿ ತಿಳಿದಿದ್ದವರೂ ಸೇರಿಕೊಂಡು ನೂರಕ್ಕೂ ಅಧಿಕ ಮಂದಿ ಹುಡುಕಿದ್ದಾರೆ. ಬರೀ ಒಂದು ದಿನವಲ್ಲ 8 ದಿನ ಹುಡುಕಿದ್ದಾರೆ. 8ನೇ ದಿನ ಹುಡುಗನ ಪತ್ತೆಯಾಗಿದೆ.
ಜ್ಯೋತಿಷಿ ಹುಡುಗನ ಬಗ್ಗೆ ಭವಿಷ್ಯ ಹೇಳಿದ್ದರು
ಮನೆಯ ಹುಡುಗ ಕಾಣೆಯಾದಾಗ ಮನೆಯವರು ಇದ್ದ ದೇವರ ಮೊರೆ ಹೋಗಿದ್ದಾರೆ, ಈತನ ಬಗ್ಗೆ ಏನಾದರೂ ಸುಳಿವು ಸಿಗಬಹುದೇ ಎಂದು ಜ್ಯೋತಿಷಿಗಳ ಮೊರೆ ಹೋಗಿದ್ದಾರೆ. ಕರಾವಳಿಯ ಜನರು ತುಂಬಾ ನಂಬುವ ಕೊರಗಜ್ಜನ ದೇವರ ಬಳಿ ಬಂದು ಪ್ರಾರ್ಥಿಸಿದಾಗಲೂ ಹುಡುಗ ಬದುಕಿದ್ದಾನೆ ಎಂಬ ಸುಳಿವು ನೀಡಿತ್ತು, ಅದಾದ ಬಳಿಕ ಮಹಿಳಾ ಜ್ಯೋತಿಷಿಯೊಬ್ಬರ ಬಳಿ ಕೇಳಿದಾಗ ಹುಡುಗ ಬದುಕಿದ್ದಾನೆ, ಆದರೆ ಅವನನ್ನು ದೇವಿಯೇ ಕಾಣೆ ಮಾಡಿದ್ದಾಳೆ, ನಿಮ್ಮ ಜಮೀನಿನಲ್ಲಿ ಒಂದು ಕಲ್ಲಿದೆ, ಅದು ವಿಶೇಷ ಅನಿಸದಿದ್ದರೂ ಆ ಕಲ್ಲು ವಿಶೇಷವಾಗಿದೆ, ಅದರಲ್ಲಿ ದೇವಿ ಇದ್ದಾಳೆ, ಅವಳಿಗೆ ಪೂಜೆ ಸಲ್ಲಿಸಿ ನಿಮ್ಮ ಮಗ ಬಂದೇ ಬರುತ್ತಾನೆ ಎಂದು ಹೇಳುತ್ತಾಳೆ.
ಅಚ್ಚರಿ ಎಂಬಂತೆ ಪೂಜೆ ಬಳಿಕ ಸಿಕ್ಕ ಮಗ
ಮಗನನ್ನು ಕಳೆದುಕೊಂಡು ಕಂಗಾಲಾಗಿದ್ದ ಪೋಷಕರು ಎಲ್ಲಾ ಪೂಜೆ ಮಾಡುತ್ತೇವೆ ನಮ್ಮ ಮಗ ಜೀವಂತ ಸಿಕ್ಕರೆ ಸಾಕು ಎಂದು ಬಯಸಿ ಆ ಕಲ್ಲಿಗೆ ಪೂಜೆ ಸಲ್ಲಿಸುತ್ತಾರೆ. ಆ ಕಲ್ಲಿಗೆ ಪೂಜೆ ಸಲ್ಲಿಸಿ ಮಾರನೇ ದಿನವೇ ಪವಾಡ ಸದೃಶ್ಯ ಎಂಬಂತೆ ಮಗ, ಮಗನ ಜೊತೆ ಕಾಣೆಯಾದ ನಾಯಿ ಸಿಗುತ್ತದೆ. ಈ ವಿಷಯ ತಿಳಿಯುತ್ತಿದ್ದಂತೆ ಜನರಿಗೆ ಅಚ್ಚರಿ ಉಂಟಾಗಿದೆ. ಅಲ್ಲದೆ ಈ ಸುದ್ದಿ ತುಂಬಾನೇ ವೈರಲ್ ಆಗಿದೆ.
ಹುಡುಗ ಸಿಕ್ಕಿದ ಮೇಲೆ ಗ್ರಾಮಸ್ಥರು ಬೈಕ್,ಟೆಂಪೂಗಳಲ್ಲಿ ಸಂಭ್ರಮದ ಮೆರವಣಿಗೆ ಮಾಡಿದ್ದಾರೆ. ಮನೆಯವರು ಊರಿನವರಿಗೆ ಸಿಹಿ ಊಟ ನೀಡಿದ್ದಾರೆ. ಆ ದೈವ ಶಕ್ತಿ ಇರುವ ಕಲ್ಲಿಗೆ ಪೂಜೆ ಮಾಡಿದ ಕಾರಣಕ್ಕೆ ನಮ್ಮ ಮಗ ನಮ್ಮ ಸಿಕ್ಕಿದ್ದಾನೆ ಎಂದು ಪೋಷಕರು ಬಲವಾಗಿ ನಂಬಿದ್ದಾರೆ.
ಕೆಲವೊಂದು ಘಟನೆಗಳೇ ಹಾಗೇ ... ಅವುಗಳನ್ನು ತುಂಬಾ ವೈಜ್ಞಾನಿಕವಾಗಿ ನೋಡಲು ಹೋಗಬಾರದು, ನಮ್ಮ ಅನುಭವಕ್ಕೆ ಬರುವುದೇ ಸತ್ಯ ಅಲ್ವಾ?



Click it and Unblock the Notifications