Latest Updates
-
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು
ಉಡುಪಿಯ ವೈದ್ಯೆಗೆ ಮಿಸೆಸ್ ಅರ್ಥ್ ಇಂಟರ್ನ್ಯಾಷನಲ್ ಟೂರಿಸಂ ಕಿರೀಟ
ಜಾಗತಿಕ ಮಟ್ಟದಲ್ಲಿ ಭಾರತವು ಗಮನಾರ್ಹ ಸಾಧನೆ ಮಾಡಿದ್ದು, ಶ್ರುತಿ ಬಲ್ಲಾಳ್ ಮತ್ತು ಪ್ರಗತಿ ಅನೂನ್ ಪ್ರತಿಷ್ಠಿತ ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ.ಶೃತಿ ಬಲ್ಲಾಳ್ ಫಿಲಿಪೈನ್ಸ್ನ ಮನಿಲಾದಲ್ಲಿ ನಡೆದ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಪ್ರತಿಷ್ಠಿತ ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ 2024 ಕಿರೀಟ ಗೆಲ್ಲುವ ಮೂಲಕ ಕೀರ್ತಿ ತಂದಿದ್ದಾರೆ.
ಆಸ್ಟ್ರಲ್ ಪೇಜೆಂಟ್ಸ್ ಮಿಸ್ ಮತ್ತು ಮಿಸೆಸ್ ಇಂಡಿಯಾ ಆಸ್ಟ್ರಲ್ ಬ್ಯಾನರ್ ಅಡಿಯಲ್ಲಿ ಭಾರತವನ್ನು ಪ್ರತಿನಿಧಿಸುವ ಡಾ. ಶ್ರುತಿ ಬಲ್ಲಾಳ್ ಮಿಸೆಸ್ ವಿಭಾಗದಲ್ಲಿ ವಿಜಯಶಾಲಿಯಾದರು, ಪ್ರಗತಿ ಅನೂನ್ ಎಲೈಟ್ ಮಿಸೆಸ್ ವಿಭಾಗದಲ್ಲಿ ಕಿರೀಟವನ್ನು ಮುಡಿಗೇರಿಸಿಕೊಂಡರು. 9 ದಿನಗಳ ಕಾಲ ನಡೆದಿದ್ದ ಈ ಕಾರ್ಯಕ್ರಮಕ್ಕೆ 17 ದೇಶಗಳ ಪ್ರತಿನಿದಿಗಳು ಭಾಗಿಯಾಗಿದ್ದರು.

ಡಾ.ಶೃತಿ ಬಲ್ಲಾಳ್ ಈ ಹಿಂದೆ ಬೆಂಗಳೂರಿನಲ್ಲಿ ಆಗಸ್ಟ್ ತಿಂಗಳಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ ಅರ್ಥ್ ಇಂಟರ್ನ್ಯಾಷನಲ್ ಪ್ರಶಸ್ತಿ ಗೆದ್ದು ಅಂತರರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದರು. ಈಗ ಅಂತಾರಾಷ್ಟ್ರೀಯ ವೇದಿಕೆಯಲ್ಲೂ ಅವರು ಕಿರೀಟ ಗೆದ್ದು ಬೀಗಿದ್ದಾರೆ. ಅಂತರರಾಷ್ಟ್ರೀಯ ಮಟ್ಟದ ಈ ಸ್ಪರ್ಧೆಯಲ್ಲಿ ಬುದ್ದಿ ಮತ್ತೆ, ದಯೆ, ಪರಿಸರದ ಬಗ್ಗೆ ತೋರಿದ ಬದ್ಧತೆ ಹೀಗೆ ಹಲವು ವಿಚಾರಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ.
ಡಾ.ಶೃತಿ ಬಲ್ಲಾಳ್ ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಎಂಬ ಕೀರ್ತಿ ಸಹ ಪಡೆದಿದ್ದಾರೆ. ಮನಿಲಾದಲ್ಲಿ ನಡೆದ ಅಂತರಾಷ್ಟ್ರೀಯ ಸ್ಪರ್ಧೆಯು ಬಹಳ ಸವಾಲಿನದ್ದಾಗಿತ್ತು. ಇಲ್ಲಿ 10 ದಿನಗಳ ಕಾಲ ನಡೆದ ಸೌಂದರ್ಯದ ಜೊತೆಗೆ ಬುದ್ದಿಮತ್ತೆ, ದಯೆ, ಪರಿಸರದ ಬಗ್ಗೆ ತೋರಿದ ಬದ್ದತೆಯು ಜ್ಯೂರಿಗಳ ಗಮನ ಸೆಳೆದು ಈ ಪ್ರಶಸ್ತಿಯನ್ನು ಗೆದ್ದುಕೊಂಡೆ ಎಂದು ಅವರು ತಮ್ಮ ಹೆಜ್ಜೆ ಗುರುತಿನ ಕುರಿತು ಹೇಳಿಕೊಂಡಿದ್ದಾರೆ.
5 ದೇಶಗಳಲ್ಲಿ ಪರಿಸರದ ಬಗ್ಗೆ ಜಾಗೃತಿಗಾಗಿ ಕೆಲಸ ಮಾಡಲು ಶೃತಿ ಬಲ್ಲಾಳ್ ಅವರನ್ನು ಈ ಸಮಿತಿಯು ಆಯ್ಕೆ ಮಾಡಿದೆ, ಇದು ಕೂಡ ಇನ್ನೊಂದು ಕೀರ್ತಿಯ ವಿಚಾರವಾಗಿದೆ. ಈ ಅಂತರಾಷ್ಟ್ರೀಯ ಸ್ಪರ್ಧೆಗೆ ತನ್ನನ್ನು ಆಸ್ಟ್ರಲ್ ಮಿಸೆಸ್ ಇಂಡಿಯಾದ ಕರ್ನಾಟಕ ನಿರ್ದೇಶಕಿ ಪ್ರತಿಭಾ ಸೌನ್ಶಿಮಠ್ ಅವರು ಮಾರ್ಗದರ್ಶನ ಮಾಡಿದ್ದರು ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.
ಇವರು ಮಧುಮೇಹ ರೋಗದ ಬಗ್ಗೆ ಜಾಗೃತಿ ಮೂಡಿಸುವುದು, ಶೀಘ್ರದಲ್ಲಿ ಪತ್ತೆ ಹಚ್ಚುವುದು ಸೇರಿದಂತೆ ರೋಗ ಬರದಂತೆ ತಡೆಯುವುದಕ್ಕಾಗಿ ನೂರಕ್ಕೂ ಹೆಚ್ಚು ಮಾಹಿತಿ ಶಿಬಿರಗಳನ್ನು ಆಯೋಜಿಸಿ ಸೈ ಎನಿಸಿಕೊಂಡಿದ್ದಾರೆ. ಈಗ ಮತ್ತೊಂದು ಕಿರೀಟ ಅವರ ಮುಡಿಗೇರಿದೆ.



Click it and Unblock the Notifications
