Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಉಡುಪಿಯ ವೈದ್ಯೆಗೆ ಮಿಸೆಸ್ ಅರ್ಥ್ ಇಂಟರ್ನ್ಯಾಷನಲ್ ಟೂರಿಸಂ ಕಿರೀಟ
ಜಾಗತಿಕ ಮಟ್ಟದಲ್ಲಿ ಭಾರತವು ಗಮನಾರ್ಹ ಸಾಧನೆ ಮಾಡಿದ್ದು, ಶ್ರುತಿ ಬಲ್ಲಾಳ್ ಮತ್ತು ಪ್ರಗತಿ ಅನೂನ್ ಪ್ರತಿಷ್ಠಿತ ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ.ಶೃತಿ ಬಲ್ಲಾಳ್ ಫಿಲಿಪೈನ್ಸ್ನ ಮನಿಲಾದಲ್ಲಿ ನಡೆದ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಪ್ರತಿಷ್ಠಿತ ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ 2024 ಕಿರೀಟ ಗೆಲ್ಲುವ ಮೂಲಕ ಕೀರ್ತಿ ತಂದಿದ್ದಾರೆ.
ಆಸ್ಟ್ರಲ್ ಪೇಜೆಂಟ್ಸ್ ಮಿಸ್ ಮತ್ತು ಮಿಸೆಸ್ ಇಂಡಿಯಾ ಆಸ್ಟ್ರಲ್ ಬ್ಯಾನರ್ ಅಡಿಯಲ್ಲಿ ಭಾರತವನ್ನು ಪ್ರತಿನಿಧಿಸುವ ಡಾ. ಶ್ರುತಿ ಬಲ್ಲಾಳ್ ಮಿಸೆಸ್ ವಿಭಾಗದಲ್ಲಿ ವಿಜಯಶಾಲಿಯಾದರು, ಪ್ರಗತಿ ಅನೂನ್ ಎಲೈಟ್ ಮಿಸೆಸ್ ವಿಭಾಗದಲ್ಲಿ ಕಿರೀಟವನ್ನು ಮುಡಿಗೇರಿಸಿಕೊಂಡರು. 9 ದಿನಗಳ ಕಾಲ ನಡೆದಿದ್ದ ಈ ಕಾರ್ಯಕ್ರಮಕ್ಕೆ 17 ದೇಶಗಳ ಪ್ರತಿನಿದಿಗಳು ಭಾಗಿಯಾಗಿದ್ದರು.

ಡಾ.ಶೃತಿ ಬಲ್ಲಾಳ್ ಈ ಹಿಂದೆ ಬೆಂಗಳೂರಿನಲ್ಲಿ ಆಗಸ್ಟ್ ತಿಂಗಳಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ ಅರ್ಥ್ ಇಂಟರ್ನ್ಯಾಷನಲ್ ಪ್ರಶಸ್ತಿ ಗೆದ್ದು ಅಂತರರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದರು. ಈಗ ಅಂತಾರಾಷ್ಟ್ರೀಯ ವೇದಿಕೆಯಲ್ಲೂ ಅವರು ಕಿರೀಟ ಗೆದ್ದು ಬೀಗಿದ್ದಾರೆ. ಅಂತರರಾಷ್ಟ್ರೀಯ ಮಟ್ಟದ ಈ ಸ್ಪರ್ಧೆಯಲ್ಲಿ ಬುದ್ದಿ ಮತ್ತೆ, ದಯೆ, ಪರಿಸರದ ಬಗ್ಗೆ ತೋರಿದ ಬದ್ಧತೆ ಹೀಗೆ ಹಲವು ವಿಚಾರಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ.
ಡಾ.ಶೃತಿ ಬಲ್ಲಾಳ್ ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಎಂಬ ಕೀರ್ತಿ ಸಹ ಪಡೆದಿದ್ದಾರೆ. ಮನಿಲಾದಲ್ಲಿ ನಡೆದ ಅಂತರಾಷ್ಟ್ರೀಯ ಸ್ಪರ್ಧೆಯು ಬಹಳ ಸವಾಲಿನದ್ದಾಗಿತ್ತು. ಇಲ್ಲಿ 10 ದಿನಗಳ ಕಾಲ ನಡೆದ ಸೌಂದರ್ಯದ ಜೊತೆಗೆ ಬುದ್ದಿಮತ್ತೆ, ದಯೆ, ಪರಿಸರದ ಬಗ್ಗೆ ತೋರಿದ ಬದ್ದತೆಯು ಜ್ಯೂರಿಗಳ ಗಮನ ಸೆಳೆದು ಈ ಪ್ರಶಸ್ತಿಯನ್ನು ಗೆದ್ದುಕೊಂಡೆ ಎಂದು ಅವರು ತಮ್ಮ ಹೆಜ್ಜೆ ಗುರುತಿನ ಕುರಿತು ಹೇಳಿಕೊಂಡಿದ್ದಾರೆ.
5 ದೇಶಗಳಲ್ಲಿ ಪರಿಸರದ ಬಗ್ಗೆ ಜಾಗೃತಿಗಾಗಿ ಕೆಲಸ ಮಾಡಲು ಶೃತಿ ಬಲ್ಲಾಳ್ ಅವರನ್ನು ಈ ಸಮಿತಿಯು ಆಯ್ಕೆ ಮಾಡಿದೆ, ಇದು ಕೂಡ ಇನ್ನೊಂದು ಕೀರ್ತಿಯ ವಿಚಾರವಾಗಿದೆ. ಈ ಅಂತರಾಷ್ಟ್ರೀಯ ಸ್ಪರ್ಧೆಗೆ ತನ್ನನ್ನು ಆಸ್ಟ್ರಲ್ ಮಿಸೆಸ್ ಇಂಡಿಯಾದ ಕರ್ನಾಟಕ ನಿರ್ದೇಶಕಿ ಪ್ರತಿಭಾ ಸೌನ್ಶಿಮಠ್ ಅವರು ಮಾರ್ಗದರ್ಶನ ಮಾಡಿದ್ದರು ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.
ಇವರು ಮಧುಮೇಹ ರೋಗದ ಬಗ್ಗೆ ಜಾಗೃತಿ ಮೂಡಿಸುವುದು, ಶೀಘ್ರದಲ್ಲಿ ಪತ್ತೆ ಹಚ್ಚುವುದು ಸೇರಿದಂತೆ ರೋಗ ಬರದಂತೆ ತಡೆಯುವುದಕ್ಕಾಗಿ ನೂರಕ್ಕೂ ಹೆಚ್ಚು ಮಾಹಿತಿ ಶಿಬಿರಗಳನ್ನು ಆಯೋಜಿಸಿ ಸೈ ಎನಿಸಿಕೊಂಡಿದ್ದಾರೆ. ಈಗ ಮತ್ತೊಂದು ಕಿರೀಟ ಅವರ ಮುಡಿಗೇರಿದೆ.



Click it and Unblock the Notifications