Latest Updates
-
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ!
ಉಡುಪಿಯ ವೈದ್ಯೆಗೆ ಮಿಸೆಸ್ ಅರ್ಥ್ ಇಂಟರ್ನ್ಯಾಷನಲ್ ಟೂರಿಸಂ ಕಿರೀಟ
ಜಾಗತಿಕ ಮಟ್ಟದಲ್ಲಿ ಭಾರತವು ಗಮನಾರ್ಹ ಸಾಧನೆ ಮಾಡಿದ್ದು, ಶ್ರುತಿ ಬಲ್ಲಾಳ್ ಮತ್ತು ಪ್ರಗತಿ ಅನೂನ್ ಪ್ರತಿಷ್ಠಿತ ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ.ಶೃತಿ ಬಲ್ಲಾಳ್ ಫಿಲಿಪೈನ್ಸ್ನ ಮನಿಲಾದಲ್ಲಿ ನಡೆದ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಪ್ರತಿಷ್ಠಿತ ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ 2024 ಕಿರೀಟ ಗೆಲ್ಲುವ ಮೂಲಕ ಕೀರ್ತಿ ತಂದಿದ್ದಾರೆ.
ಆಸ್ಟ್ರಲ್ ಪೇಜೆಂಟ್ಸ್ ಮಿಸ್ ಮತ್ತು ಮಿಸೆಸ್ ಇಂಡಿಯಾ ಆಸ್ಟ್ರಲ್ ಬ್ಯಾನರ್ ಅಡಿಯಲ್ಲಿ ಭಾರತವನ್ನು ಪ್ರತಿನಿಧಿಸುವ ಡಾ. ಶ್ರುತಿ ಬಲ್ಲಾಳ್ ಮಿಸೆಸ್ ವಿಭಾಗದಲ್ಲಿ ವಿಜಯಶಾಲಿಯಾದರು, ಪ್ರಗತಿ ಅನೂನ್ ಎಲೈಟ್ ಮಿಸೆಸ್ ವಿಭಾಗದಲ್ಲಿ ಕಿರೀಟವನ್ನು ಮುಡಿಗೇರಿಸಿಕೊಂಡರು. 9 ದಿನಗಳ ಕಾಲ ನಡೆದಿದ್ದ ಈ ಕಾರ್ಯಕ್ರಮಕ್ಕೆ 17 ದೇಶಗಳ ಪ್ರತಿನಿದಿಗಳು ಭಾಗಿಯಾಗಿದ್ದರು.

ಡಾ.ಶೃತಿ ಬಲ್ಲಾಳ್ ಈ ಹಿಂದೆ ಬೆಂಗಳೂರಿನಲ್ಲಿ ಆಗಸ್ಟ್ ತಿಂಗಳಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ ಅರ್ಥ್ ಇಂಟರ್ನ್ಯಾಷನಲ್ ಪ್ರಶಸ್ತಿ ಗೆದ್ದು ಅಂತರರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದರು. ಈಗ ಅಂತಾರಾಷ್ಟ್ರೀಯ ವೇದಿಕೆಯಲ್ಲೂ ಅವರು ಕಿರೀಟ ಗೆದ್ದು ಬೀಗಿದ್ದಾರೆ. ಅಂತರರಾಷ್ಟ್ರೀಯ ಮಟ್ಟದ ಈ ಸ್ಪರ್ಧೆಯಲ್ಲಿ ಬುದ್ದಿ ಮತ್ತೆ, ದಯೆ, ಪರಿಸರದ ಬಗ್ಗೆ ತೋರಿದ ಬದ್ಧತೆ ಹೀಗೆ ಹಲವು ವಿಚಾರಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ.
ಡಾ.ಶೃತಿ ಬಲ್ಲಾಳ್ ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಎಂಬ ಕೀರ್ತಿ ಸಹ ಪಡೆದಿದ್ದಾರೆ. ಮನಿಲಾದಲ್ಲಿ ನಡೆದ ಅಂತರಾಷ್ಟ್ರೀಯ ಸ್ಪರ್ಧೆಯು ಬಹಳ ಸವಾಲಿನದ್ದಾಗಿತ್ತು. ಇಲ್ಲಿ 10 ದಿನಗಳ ಕಾಲ ನಡೆದ ಸೌಂದರ್ಯದ ಜೊತೆಗೆ ಬುದ್ದಿಮತ್ತೆ, ದಯೆ, ಪರಿಸರದ ಬಗ್ಗೆ ತೋರಿದ ಬದ್ದತೆಯು ಜ್ಯೂರಿಗಳ ಗಮನ ಸೆಳೆದು ಈ ಪ್ರಶಸ್ತಿಯನ್ನು ಗೆದ್ದುಕೊಂಡೆ ಎಂದು ಅವರು ತಮ್ಮ ಹೆಜ್ಜೆ ಗುರುತಿನ ಕುರಿತು ಹೇಳಿಕೊಂಡಿದ್ದಾರೆ.
5 ದೇಶಗಳಲ್ಲಿ ಪರಿಸರದ ಬಗ್ಗೆ ಜಾಗೃತಿಗಾಗಿ ಕೆಲಸ ಮಾಡಲು ಶೃತಿ ಬಲ್ಲಾಳ್ ಅವರನ್ನು ಈ ಸಮಿತಿಯು ಆಯ್ಕೆ ಮಾಡಿದೆ, ಇದು ಕೂಡ ಇನ್ನೊಂದು ಕೀರ್ತಿಯ ವಿಚಾರವಾಗಿದೆ. ಈ ಅಂತರಾಷ್ಟ್ರೀಯ ಸ್ಪರ್ಧೆಗೆ ತನ್ನನ್ನು ಆಸ್ಟ್ರಲ್ ಮಿಸೆಸ್ ಇಂಡಿಯಾದ ಕರ್ನಾಟಕ ನಿರ್ದೇಶಕಿ ಪ್ರತಿಭಾ ಸೌನ್ಶಿಮಠ್ ಅವರು ಮಾರ್ಗದರ್ಶನ ಮಾಡಿದ್ದರು ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.
ಇವರು ಮಧುಮೇಹ ರೋಗದ ಬಗ್ಗೆ ಜಾಗೃತಿ ಮೂಡಿಸುವುದು, ಶೀಘ್ರದಲ್ಲಿ ಪತ್ತೆ ಹಚ್ಚುವುದು ಸೇರಿದಂತೆ ರೋಗ ಬರದಂತೆ ತಡೆಯುವುದಕ್ಕಾಗಿ ನೂರಕ್ಕೂ ಹೆಚ್ಚು ಮಾಹಿತಿ ಶಿಬಿರಗಳನ್ನು ಆಯೋಜಿಸಿ ಸೈ ಎನಿಸಿಕೊಂಡಿದ್ದಾರೆ. ಈಗ ಮತ್ತೊಂದು ಕಿರೀಟ ಅವರ ಮುಡಿಗೇರಿದೆ.



Click it and Unblock the Notifications